ಬ್ರೇಕಿಂಗ್ ನ್ಯೂಸ್
22-02-23 05:13 pm Bangalore Correspondent ಕರ್ನಾಟಕ
ಬೆಂಗಳೂರು, ಫೆ.22: ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಹಾಗೂ ಐಪಿಎಸ್ ಡಿ.ರೂಪಾ ಮೌದ್ಗಿಲ್ನಡುವಿನ ಆರೋಪ-ಪ್ರತ್ಯಾರೋಪ ಮತ್ತೊಂದು ಹಂತಕ್ಕೆ ಹೋಗಿದೆ. ಇಬ್ಬರೂ ಅಧಿಕಾರಿಗಳು ಪರಸ್ಪರ ರಾಜ್ಯ ಸರ್ಕಾರದ ಮುಖ್ಯಕಾರ್ಯದರ್ಶಿಗೆ ದೂರು ನೀಡಿದ್ದಾರೆ. ಇಷ್ಟಕ್ಕೆ ಸುಮ್ಮನಾಗದ ರೋಹಿಣಿ ಸಿಂಧೂರಿ ಮತ್ತೊಂದು ಹೆಜ್ಜೆ ಮುಂದೆ ಹೋಗಿ ರೂಪಾ ವಿರುದ್ಧ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದು, ರೂಪಾ ಮೌದ್ಗಿಲ್ ಮಾನಹಾನಿ ಹೇಳಿಕೆ ನೀಡದಂತೆ ನಿರ್ಬಂಧಕಾಜ್ಞೆ ನಿಡಲು ಮನವಿ ಮಾಡಿದ್ದಾರೆ. ಆದ್ರೆ, ಬೆಂಗಳೂರಿನ 74ನೇ ಸಿಟಿ ಸಿವಿಲ್ ಕೋರ್ಟ್ ಕೋರ್ಟ್ ಆದೇಶವನ್ನು ನಾಳೆ ಫೆ 22ಕ್ಕೆ ಕಾಯ್ದಿರಿಸಿದೆ.
ರೂಪಾ ವಿರುದ್ಧ ನಿರ್ಬಂಧಕಾಜ್ಞೆ ನೀಡಲು ಸಿಂಧೂರಿ ಮನವಿ ಮಾಡಿದ್ದು, ಇದನ್ನು ಮಧ್ಯಂತರ ಆದೇಶವನ್ನು 74ನೇ ಸಿಟಿ ಸಿವಿಲ್ ಕೋರ್ಟ್ ಕಾಯ್ದಿರಿಸಿದ್ದು, ನಿರ್ಬಂಧಕಾಜ್ಞೆ ನೀಡಬೇಕೇ ಬೇಡವೇ ಎಂದು ನಾಳೆ ತೀರ್ಪು ಪ್ರಕಟಿಸಲಿದೆ.ಇದರಿಂದ ನ್ಯಾಯಾಲಯ ಏನು ತೀರ್ಪು ನೀಡಲಿದೆ ಎನ್ನುವುದು ಕುತೂಹಲ ಮೂಡಿಸಿದೆ.
ರೂಪಾ ಮೌದ್ಗಿಲ್ ಸೈಬರ್ ಅಪರಾಧ ವಿಭಾಗದ ಮುಖ್ಯಸ್ಥರಾಗಿದ್ದರು. ಐಪಿಎಸ್ ಅಧಿಕಾರ ದುರುಪಯೋಗಪಡಿಸಿಕೊಂಡಿರುವ ಸಾಧ್ಯತೆಯಿದೆ. ಮೊಬೈಲ್ನಲ್ಲಿನ ಮಾಹಿತಿ ಕಾನೂನುಬಾಹಿರವಾಗಿ ಪಡೆದುಕೊಂಡಿದ್ದಾರೆ. ಡಿ.ರೂಪಾ ಕ್ರಮ ಸಂಪೂರ್ಣ ಕಾನೂನುಬಾಹಿರ ಎಂದು ರೋಹಿಣಿ ಪರ ವಕೀಲರು ವಾದ ಮಂಡಿಸಿದರು.
ರೋಹಿಣಿ ಸಿಂಧೂರಿ ಅವರ ಖಾಸಗಿ ಫೋಟೋಗಳನ್ನು ರೂಪಾ ಫೇಸ್ ಬುಕ್ ನಲ್ಲಿ ಪ್ರಕಟಿಸಿದ್ದಾರೆ. ಅಲ್ಲದೇ ಅವರ ಖಾಸಗಿ ಮೊಬೈಲ್ ನಂಬರ್ ಅನ್ನೂ ಬಹಿರಂಗಪಡಿಸಿದ್ದಾರೆ. ಇದರಿಂದಾಗಿ ನೂರಾರು ಅಪರಿಚಿತರು ಕರೆ ಮಾಡುತ್ತಿದ್ದಾರೆ. ರೂಪಾ ವೈಯಕ್ತಿಕ ತೇಜೋವಧೆ ಮಾಡುತ್ತಿದ್ದಾರೆ. ಫೇಸ್ ಬುಕ್ ನಲ್ಲಿ ಮಾನಹಾನಿಕರ ಹೇಳಿಕೆ ನೀಡುತ್ತಿದ್ದಾರೆ. ಕಾನೂನಿನ ಚೌಕಟ್ಟನ್ನು ಮೀರಿ ರೂಪಾ ಹೇಳಿಕೆ ನೀಡುತ್ತಿದ್ದಾರೆ ಎಂದು ಕೋರ್ಟ್ ನಲ್ಲಿ ರೋಹಿಣಿ ಸಿಂಧೂರಿ ಪರ ವಾದಮಂಡನೆ ಮಾಡಿದ್ದಾರೆ.
Rohini Sindhuri moves to court against IPS officer Roopa for using her private photos on social media Requests for injection order against roopa for misuse of personal photos even amid orders of chief secretary.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm