ಬ್ರೇಕಿಂಗ್ ನ್ಯೂಸ್
22-02-23 05:13 pm Bangalore Correspondent ಕರ್ನಾಟಕ
ಬೆಂಗಳೂರು, ಫೆ.22: ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಹಾಗೂ ಐಪಿಎಸ್ ಡಿ.ರೂಪಾ ಮೌದ್ಗಿಲ್ನಡುವಿನ ಆರೋಪ-ಪ್ರತ್ಯಾರೋಪ ಮತ್ತೊಂದು ಹಂತಕ್ಕೆ ಹೋಗಿದೆ. ಇಬ್ಬರೂ ಅಧಿಕಾರಿಗಳು ಪರಸ್ಪರ ರಾಜ್ಯ ಸರ್ಕಾರದ ಮುಖ್ಯಕಾರ್ಯದರ್ಶಿಗೆ ದೂರು ನೀಡಿದ್ದಾರೆ. ಇಷ್ಟಕ್ಕೆ ಸುಮ್ಮನಾಗದ ರೋಹಿಣಿ ಸಿಂಧೂರಿ ಮತ್ತೊಂದು ಹೆಜ್ಜೆ ಮುಂದೆ ಹೋಗಿ ರೂಪಾ ವಿರುದ್ಧ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದು, ರೂಪಾ ಮೌದ್ಗಿಲ್ ಮಾನಹಾನಿ ಹೇಳಿಕೆ ನೀಡದಂತೆ ನಿರ್ಬಂಧಕಾಜ್ಞೆ ನಿಡಲು ಮನವಿ ಮಾಡಿದ್ದಾರೆ. ಆದ್ರೆ, ಬೆಂಗಳೂರಿನ 74ನೇ ಸಿಟಿ ಸಿವಿಲ್ ಕೋರ್ಟ್ ಕೋರ್ಟ್ ಆದೇಶವನ್ನು ನಾಳೆ ಫೆ 22ಕ್ಕೆ ಕಾಯ್ದಿರಿಸಿದೆ.
ರೂಪಾ ವಿರುದ್ಧ ನಿರ್ಬಂಧಕಾಜ್ಞೆ ನೀಡಲು ಸಿಂಧೂರಿ ಮನವಿ ಮಾಡಿದ್ದು, ಇದನ್ನು ಮಧ್ಯಂತರ ಆದೇಶವನ್ನು 74ನೇ ಸಿಟಿ ಸಿವಿಲ್ ಕೋರ್ಟ್ ಕಾಯ್ದಿರಿಸಿದ್ದು, ನಿರ್ಬಂಧಕಾಜ್ಞೆ ನೀಡಬೇಕೇ ಬೇಡವೇ ಎಂದು ನಾಳೆ ತೀರ್ಪು ಪ್ರಕಟಿಸಲಿದೆ.ಇದರಿಂದ ನ್ಯಾಯಾಲಯ ಏನು ತೀರ್ಪು ನೀಡಲಿದೆ ಎನ್ನುವುದು ಕುತೂಹಲ ಮೂಡಿಸಿದೆ.
ರೂಪಾ ಮೌದ್ಗಿಲ್ ಸೈಬರ್ ಅಪರಾಧ ವಿಭಾಗದ ಮುಖ್ಯಸ್ಥರಾಗಿದ್ದರು. ಐಪಿಎಸ್ ಅಧಿಕಾರ ದುರುಪಯೋಗಪಡಿಸಿಕೊಂಡಿರುವ ಸಾಧ್ಯತೆಯಿದೆ. ಮೊಬೈಲ್ನಲ್ಲಿನ ಮಾಹಿತಿ ಕಾನೂನುಬಾಹಿರವಾಗಿ ಪಡೆದುಕೊಂಡಿದ್ದಾರೆ. ಡಿ.ರೂಪಾ ಕ್ರಮ ಸಂಪೂರ್ಣ ಕಾನೂನುಬಾಹಿರ ಎಂದು ರೋಹಿಣಿ ಪರ ವಕೀಲರು ವಾದ ಮಂಡಿಸಿದರು.
ರೋಹಿಣಿ ಸಿಂಧೂರಿ ಅವರ ಖಾಸಗಿ ಫೋಟೋಗಳನ್ನು ರೂಪಾ ಫೇಸ್ ಬುಕ್ ನಲ್ಲಿ ಪ್ರಕಟಿಸಿದ್ದಾರೆ. ಅಲ್ಲದೇ ಅವರ ಖಾಸಗಿ ಮೊಬೈಲ್ ನಂಬರ್ ಅನ್ನೂ ಬಹಿರಂಗಪಡಿಸಿದ್ದಾರೆ. ಇದರಿಂದಾಗಿ ನೂರಾರು ಅಪರಿಚಿತರು ಕರೆ ಮಾಡುತ್ತಿದ್ದಾರೆ. ರೂಪಾ ವೈಯಕ್ತಿಕ ತೇಜೋವಧೆ ಮಾಡುತ್ತಿದ್ದಾರೆ. ಫೇಸ್ ಬುಕ್ ನಲ್ಲಿ ಮಾನಹಾನಿಕರ ಹೇಳಿಕೆ ನೀಡುತ್ತಿದ್ದಾರೆ. ಕಾನೂನಿನ ಚೌಕಟ್ಟನ್ನು ಮೀರಿ ರೂಪಾ ಹೇಳಿಕೆ ನೀಡುತ್ತಿದ್ದಾರೆ ಎಂದು ಕೋರ್ಟ್ ನಲ್ಲಿ ರೋಹಿಣಿ ಸಿಂಧೂರಿ ಪರ ವಾದಮಂಡನೆ ಮಾಡಿದ್ದಾರೆ.
Rohini Sindhuri moves to court against IPS officer Roopa for using her private photos on social media Requests for injection order against roopa for misuse of personal photos even amid orders of chief secretary.
22-06-26 08:18 pm
HK News Staffer
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
23-06-26 12:21 pm
HK News Staffer
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
23-06-26 11:49 am
HK News Staffer
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
23-06-26 12:57 pm
HK News Staffer
ಅಕ್ರಮ ಪೊಲೀಸ್ ಕ್ಲಿಯರೆನ್ಸ್ ; ಮೂರೇ ದಿನದಲ್ಲಿ ಸಿಸಿ...
22-06-26 10:21 pm
ಉಡುಪಿಯಲ್ಲಿ ಮಕ್ಕಳಿಲ್ಲದ ದಂಪತಿಗೆ ಮಗು ಮಾರಾಟ; ವೈದ್...
22-06-26 08:01 pm
ಹಂದಿ ಜ್ವರಕ್ಕೆ ಕಾರವಾರದ ವ್ಯಕ್ತಿ ಮಂಗಳೂರಿನಲ್ಲಿ ಬಲ...
22-06-26 07:58 pm
Brahmarakootlu toll fight: ಟೋಲ್ ತಪ್ಪಿಸಲು ಬ್ರಹ...
22-06-26 12:53 pm