ಬ್ರೇಕಿಂಗ್ ನ್ಯೂಸ್
22-10-20 11:53 am Headline Karnataka News Network ಕರ್ನಾಟಕ
ಬೆಂಗಳೂರು, ಅಕ್ಟೋಬರ್ 22: ಚಿರಂಜೀವಿ ಸಂರ್ಜಾ ಪತ್ನಿ, ನಟಿ ಮೇಘನಾ ರಾಜ್ ಅವರಿಗೆ ಹೆರಿಗೆಯಾಗಿದ್ದು, ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಇದರಿಂದಾಗಿ ಸರ್ಜಾ ಕುಟುಂಬದಲ್ಲಿ ಸಂಭ್ರಮ ಮನೆ ಮಾಡಿದೆ. ನಿಶ್ಚಿತಾರ್ಥದ ದಿನವೇ ಮಗುವಿಗೆ ಜನ್ಮ ನೀಡಿರುವುದು ಇನ್ನೂ ವಿಶೇಷವಾಗಿದೆ.
ಜೂನಿಯರ್ ಚಿರು ಕುರಿತು ಅಕ್ಟೋಬರ್ 16ರಂದು ಧ್ರುವ ಸರ್ಜಾ ವಿಡಿಯೋ ಮಾಡುವ ವೆಲ್ ಕಮ್ ಹೇಳಿದ್ದರು. ಅವರ ನಿರೀಕ್ಷೆಯಂತೆ ಚಿರಂಜೀವಿ ಸರ್ಜಾ ಪತ್ನಿ ಮೇಘನಾ ರಾಜ್ ಗಂಡು ಮಗುವಿಗೆ ಜನ್ಮ ನೀಡಿದ್ದು, ಈ ಮೂಲಕ ಜೂನಿಯರ್ ಚಿರು ಆಗಮಿಸಿದಂತಾಗಿದೆ. ಇನ್ನೂ ವಿಶೇಷ ಎಂಬಂತೆ ಚಿರು, ಮೇಘನಾ ನಿಶ್ಚಿತಾರ್ಥದ ದಿನವೇ ಮರಿ ಚಿರು ಆಗಮನ ಸರ್ಜಾ ಕುಟುಂಬಸ್ಥರಲ್ಲಿ ತುಂಬಾ ಸಂತಸವನ್ನುಂಟು ಮಾಡಿದೆ. ಕುಟುಂಬ ಎಲ್ಲ ಸದಸ್ಯರು ಸಂಭ್ರಮಿಸುತ್ತಿದ್ದಾರೆ.
ಚಿರಂಜೀವಿ ಸರ್ಜಾ ಜೂನ್ 7 ರಂದು ಹೃದಯಾಘಾತವಾಗಿ ವಿಧಿವಶರಾಗಿದ್ದಾರೆ. ಅವರು ಸಾವನ್ನಪ್ಪಿದ ದಿನವೇ ಮೆಘನಾ ರಾಜ್ ಸರ್ಜಾ ಗರ್ಭಿಣಿಯಾಗಿರುವ ಕುರಿತ ಸುದ್ದಿ ಹೊರ ಬಿದ್ದಿತ್ತು. ಅದಾದ ಬಳಿಕ ಅವರು ಮನೆಯಲ್ಲೇ ಕಾಲ ಕಳೆಯುವ ಮೂಲಕ ಕಾಳಜಿ ವಹಿಸಿದ್ದರು. ಈ ವೇಳೆ ಸ್ಯಾಂಡಲ್ವುಡ್ನ ಹಲವು ನಟ, ನಟಿಯರು ಗಣ್ಯರು ಹಾಗೂ ಸ್ನೇಹಿತರು ಮೇಘನಾ ಅವರನ್ನು ಭೇಟಿ ನೀಡಿ ಆರೋಗ್ಯ ವಿಚಾರಿಸಿ ಧೈರ್ಯ ತುಂಬಿದ್ದರು. ಇದೀಗ ಮೇಘನಾ ಅವರಿಗೆ ಮಗು ಹುಟ್ಟಿರುವುದರಿಂದ ಇಡೀ ಸ್ಯಾಂಡಲ್ವುಡ್ನಲ್ಲೇ ಸಂತಸ ಮನೆ ಮಾಡಿದೆ.


ಈ ಹಿಂದೆ ನಟ ಧ್ರುವ ಸರ್ಜಾ ವಿಡಿಯೋ ಮೂಲಕ ಈ ಬಗ್ಗೆ ಸುಳಿವು ನೀಡಿದ್ದರು. ಜೂನಿಯರ್ ಚಿರು ಆಗಮನದ ಕುರಿತು ತಿಳಿಸಿ, ವಿಡಿಯೋದಲ್ಲಿ ಸರ್ಜಾ ಕುಟುಂಬದ ವಿವಿಧ ಹಿರಿಯರು ಹಾಗೂ ಗಣ್ಯರನ್ನು ಸಹ ತೋರಿಸಲಾಗಿತ್ತು. ಹ್ಯಾಪಿ ವೆಲ್ ಕಮ್ ಚಿರು ಎಂದು ಅರ್ಜುನ್ ಸರ್ಜಾ ಸಹ ಸ್ವಾಗತಿಸಿದ್ದರು. ಈ ವೀಡಿಯೋ ಕುರಿತು ಸಾಕಷ್ಟು ಚರ್ಚೆ ಸಹ ನಡೆದಿತ್ತು.
ಅಕ್ಟೋಬರ್ 17 ಚಿರು ಹುಟ್ಟುಬ್ಬದ ದಿನವಾಗಿದ್ದು, ಇದೇ ದಿನ ಮೇಘನಾ ಜೂನಿಯರ್ ಚಿರುಗೆ ಜನ್ಮ ನೀಡಲಿದ್ದಾರಾ ಎಂಬ ಸುದ್ದಿ ಧ್ರುವ ಹಂಚಿಕೊಂಡ ವಿಡಿಯೋ ಬಳಿಕ ಹರಿದಾಡಿತ್ತು. ವಿಡಿಯೋ ಪೋಸ್ಟ್ ಮಾಡಿ ಸಾಲುಗಳನ್ನು ಬರೆದಿದ್ದ ಧ್ರುವ, ಹ್ಯಾಪಿ ಬರ್ತ್ ಡೇ ಚಿರು ಎಂದು ಹಾರ್ಟ್ ಸಿಂಬಲ್ ಹಾಕಿದ್ದರು. ಮೈ ಲವ್ ಫಾರ್ ಎವರ್, ಜೂನಿಯರ್ ಚಿರು ಕಮಿಂಗ್ ಸೂನ್ ಎಂದು ಬರೆದು ತೋಳುಗಳ ಎಮೋಜಿ ಹಾಕಿದ್ದರು. ಈ ಪೋಸ್ಟ್ ನ್ನು ಸರ್ಜಾ ಕುಟುಂಬದ ಬಹುತೇಕರಿಗೆ ಟ್ಯಾಗ್ ಮಾಡಲಾಗಿತ್ತು. ಕೊನೆಗೆ ಜೈ ಹನುಮಾನ್ ಎಂದಿದ್ದರು.
16-03-26 05:52 pm
HK News Staffer
ಐಎಎಸ್ ಅಧಿಕಾರಿಯೆಂದು ಪೋಸು ಕೊಟ್ಟು ಜನಸಾಮಾನ್ಯರಿಗೆ,...
16-03-26 03:36 pm
Chitradurga Accident: ಚಿತ್ರದುರ್ಗದಲ್ಲಿ ಭೀಕರ ಅಪ...
15-03-26 04:27 pm
ಲಿವರ್ ಸಿರೋಸಿಸ್ ಕಾಯಿಲೆಗೆ ತುತ್ತಾಗಿದ್ದ ತಂದೆ ; ತನ...
14-03-26 10:14 pm
ಮಲೆನಾಡಿಗೆ ಇಂಡಿಗೋ ಆಘಾತ ; ವಿಮಾನ ದುರಂತ ಹಿನ್ನೆಲೆ,...
13-03-26 12:09 pm
16-03-26 09:30 pm
HK News Staffer
ಇರಾನ್ ದಾಳಿ ಬಗ್ಗೆ ಎಐ ವಿಡಿಯೋ ಆಧರಿತ ಸುಳ್ಳು ಸುದ್ದ...
16-03-26 02:44 pm
ಯುಪಿಎಸ್ಸಿ ಪಾಸ್, ಐಎಎಸ್ ಅಧಿಕಾರಿ ಆಗುತ್ತೇನೆಂದು ನಂ...
16-03-26 12:38 pm
ಒಡಿಶಾದ ಕಟಕ್ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ ; I...
16-03-26 12:34 pm
ಇರಾನ್ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ರಷ್ಯಾಕ್ಕೆ ;...
15-03-26 05:37 pm
16-03-26 09:48 pm
Mangaluru Staffer
Moodbidri Inspector Sandesh, Police: ಮೂಡುಬಿದ್...
16-03-26 07:20 pm
Gas Tanker Accident: ಕಟಪಾಡಿ ಹೆದ್ದಾರಿಯಲ್ಲಿ ಗ್ಯ...
16-03-26 02:46 pm
Besant Evening College, Blood Donation: ಬೆಸೆಂ...
15-03-26 09:10 pm
Udupi Accident: ತಾಯಿ-ಮಗ ತೆರಳುತ್ತಿದ್ದ ಸ್ಕೂಟರ್...
14-03-26 09:26 pm
15-03-26 12:49 pm
HK News Desk
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am