ಬ್ರೇಕಿಂಗ್ ನ್ಯೂಸ್
22-10-20 11:53 am Headline Karnataka News Network ಕರ್ನಾಟಕ
ಬೆಂಗಳೂರು, ಅಕ್ಟೋಬರ್ 22: ಚಿರಂಜೀವಿ ಸಂರ್ಜಾ ಪತ್ನಿ, ನಟಿ ಮೇಘನಾ ರಾಜ್ ಅವರಿಗೆ ಹೆರಿಗೆಯಾಗಿದ್ದು, ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಇದರಿಂದಾಗಿ ಸರ್ಜಾ ಕುಟುಂಬದಲ್ಲಿ ಸಂಭ್ರಮ ಮನೆ ಮಾಡಿದೆ. ನಿಶ್ಚಿತಾರ್ಥದ ದಿನವೇ ಮಗುವಿಗೆ ಜನ್ಮ ನೀಡಿರುವುದು ಇನ್ನೂ ವಿಶೇಷವಾಗಿದೆ.
ಜೂನಿಯರ್ ಚಿರು ಕುರಿತು ಅಕ್ಟೋಬರ್ 16ರಂದು ಧ್ರುವ ಸರ್ಜಾ ವಿಡಿಯೋ ಮಾಡುವ ವೆಲ್ ಕಮ್ ಹೇಳಿದ್ದರು. ಅವರ ನಿರೀಕ್ಷೆಯಂತೆ ಚಿರಂಜೀವಿ ಸರ್ಜಾ ಪತ್ನಿ ಮೇಘನಾ ರಾಜ್ ಗಂಡು ಮಗುವಿಗೆ ಜನ್ಮ ನೀಡಿದ್ದು, ಈ ಮೂಲಕ ಜೂನಿಯರ್ ಚಿರು ಆಗಮಿಸಿದಂತಾಗಿದೆ. ಇನ್ನೂ ವಿಶೇಷ ಎಂಬಂತೆ ಚಿರು, ಮೇಘನಾ ನಿಶ್ಚಿತಾರ್ಥದ ದಿನವೇ ಮರಿ ಚಿರು ಆಗಮನ ಸರ್ಜಾ ಕುಟುಂಬಸ್ಥರಲ್ಲಿ ತುಂಬಾ ಸಂತಸವನ್ನುಂಟು ಮಾಡಿದೆ. ಕುಟುಂಬ ಎಲ್ಲ ಸದಸ್ಯರು ಸಂಭ್ರಮಿಸುತ್ತಿದ್ದಾರೆ.
ಚಿರಂಜೀವಿ ಸರ್ಜಾ ಜೂನ್ 7 ರಂದು ಹೃದಯಾಘಾತವಾಗಿ ವಿಧಿವಶರಾಗಿದ್ದಾರೆ. ಅವರು ಸಾವನ್ನಪ್ಪಿದ ದಿನವೇ ಮೆಘನಾ ರಾಜ್ ಸರ್ಜಾ ಗರ್ಭಿಣಿಯಾಗಿರುವ ಕುರಿತ ಸುದ್ದಿ ಹೊರ ಬಿದ್ದಿತ್ತು. ಅದಾದ ಬಳಿಕ ಅವರು ಮನೆಯಲ್ಲೇ ಕಾಲ ಕಳೆಯುವ ಮೂಲಕ ಕಾಳಜಿ ವಹಿಸಿದ್ದರು. ಈ ವೇಳೆ ಸ್ಯಾಂಡಲ್ವುಡ್ನ ಹಲವು ನಟ, ನಟಿಯರು ಗಣ್ಯರು ಹಾಗೂ ಸ್ನೇಹಿತರು ಮೇಘನಾ ಅವರನ್ನು ಭೇಟಿ ನೀಡಿ ಆರೋಗ್ಯ ವಿಚಾರಿಸಿ ಧೈರ್ಯ ತುಂಬಿದ್ದರು. ಇದೀಗ ಮೇಘನಾ ಅವರಿಗೆ ಮಗು ಹುಟ್ಟಿರುವುದರಿಂದ ಇಡೀ ಸ್ಯಾಂಡಲ್ವುಡ್ನಲ್ಲೇ ಸಂತಸ ಮನೆ ಮಾಡಿದೆ.


ಈ ಹಿಂದೆ ನಟ ಧ್ರುವ ಸರ್ಜಾ ವಿಡಿಯೋ ಮೂಲಕ ಈ ಬಗ್ಗೆ ಸುಳಿವು ನೀಡಿದ್ದರು. ಜೂನಿಯರ್ ಚಿರು ಆಗಮನದ ಕುರಿತು ತಿಳಿಸಿ, ವಿಡಿಯೋದಲ್ಲಿ ಸರ್ಜಾ ಕುಟುಂಬದ ವಿವಿಧ ಹಿರಿಯರು ಹಾಗೂ ಗಣ್ಯರನ್ನು ಸಹ ತೋರಿಸಲಾಗಿತ್ತು. ಹ್ಯಾಪಿ ವೆಲ್ ಕಮ್ ಚಿರು ಎಂದು ಅರ್ಜುನ್ ಸರ್ಜಾ ಸಹ ಸ್ವಾಗತಿಸಿದ್ದರು. ಈ ವೀಡಿಯೋ ಕುರಿತು ಸಾಕಷ್ಟು ಚರ್ಚೆ ಸಹ ನಡೆದಿತ್ತು.
ಅಕ್ಟೋಬರ್ 17 ಚಿರು ಹುಟ್ಟುಬ್ಬದ ದಿನವಾಗಿದ್ದು, ಇದೇ ದಿನ ಮೇಘನಾ ಜೂನಿಯರ್ ಚಿರುಗೆ ಜನ್ಮ ನೀಡಲಿದ್ದಾರಾ ಎಂಬ ಸುದ್ದಿ ಧ್ರುವ ಹಂಚಿಕೊಂಡ ವಿಡಿಯೋ ಬಳಿಕ ಹರಿದಾಡಿತ್ತು. ವಿಡಿಯೋ ಪೋಸ್ಟ್ ಮಾಡಿ ಸಾಲುಗಳನ್ನು ಬರೆದಿದ್ದ ಧ್ರುವ, ಹ್ಯಾಪಿ ಬರ್ತ್ ಡೇ ಚಿರು ಎಂದು ಹಾರ್ಟ್ ಸಿಂಬಲ್ ಹಾಕಿದ್ದರು. ಮೈ ಲವ್ ಫಾರ್ ಎವರ್, ಜೂನಿಯರ್ ಚಿರು ಕಮಿಂಗ್ ಸೂನ್ ಎಂದು ಬರೆದು ತೋಳುಗಳ ಎಮೋಜಿ ಹಾಕಿದ್ದರು. ಈ ಪೋಸ್ಟ್ ನ್ನು ಸರ್ಜಾ ಕುಟುಂಬದ ಬಹುತೇಕರಿಗೆ ಟ್ಯಾಗ್ ಮಾಡಲಾಗಿತ್ತು. ಕೊನೆಗೆ ಜೈ ಹನುಮಾನ್ ಎಂದಿದ್ದರು.
19-06-26 04:18 pm
HK News Staffer
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
ಆರೆಸ್ಸೆಸ್ ನೋಂದಣಿ ; ಪ್ರಿಯಾಂಕ ಖರ್ಗೆ ಪತ್ರಕ್ಕೆ ಸಾ...
18-06-26 01:25 pm
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
19-06-26 09:05 pm
HK News Staffer
ಬೆಂಗಳೂರು -ಮಂಗಳೂರು 5 ಗಂಟೆ ಪ್ರಯಾಣದ ಕನಸಿಗೆ ಬ್ರೇಕ...
19-06-26 07:48 pm
ಬಂಗ್ಲೆಗುಡ್ಡೆ ಅಸ್ಥಿಪಂಜರಗಳ ಗುರುತು ಪತ್ತೆಗಿಳಿದ ಎಸ...
19-06-26 03:31 pm
Mangalore police suspend, Bajpe: ಅಸ್ಸಾಂ ಕಾರ್ಮ...
19-06-26 12:24 pm
Bejai, Kadri Water Issue: ಬಿಜೈ, ಕದ್ರಿಗೆ ಕಲುಷಿ...
18-06-26 12:33 pm
19-06-26 09:07 pm
HK News Staffer
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm
Bhatkal News: ಭಟ್ಕಳದಲ್ಲಿ ಮತ್ತೆ ಕೋಮು ಸಂಘರ್ಷ ;...
18-06-26 01:20 pm
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm