ಬ್ರೇಕಿಂಗ್ ನ್ಯೂಸ್
25-02-23 01:06 pm Bangalore Correspondent ಕರ್ನಾಟಕ
ಬೆಂಗಳೂರು, ಫೆ.25: ಸಾಮಾಜಿಕ ಜಾಲತಾಣದಲ್ಲಿ ಪರಸ್ಪರ ಕಿತ್ತಾಡಿಕೊಂಡ ಐಪಿಎಸ್ ಅಧಿಕಾರಿ ಡಿ.ರೂಪಾ ಮೌದ್ಗಿಲ್ ಹಾಗೂ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆ ನಡೆಸುವಂತೆ ಸಿಎಂ ಬಸವರಾಜ ಬೊಮ್ಮಾಯಿ ಆದೇಶ ಮಾಡಿದ್ದಾರೆ. ಮುಖ್ಯಮಂತ್ರಿ ಸೂಚನೆ ಮೇರೆಗೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಇಬ್ಬರು ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ ಹೊರಡಿಸಿದ್ದಾರೆ.
ರೋಹಿಣಿ ವಿರುದ್ಧ ಐಪಿಎಸ್ ಅಧಿಕಾರಿ ಡಿ.ರೂಪಾ ಅವರು ಫೇಸ್ಬುಕ್ ಮೂಲಕ 20 ಅಂಶಗಳನ್ನು ಉಲ್ಲೇಖಿಸಿ ಆರೋಪ ಮಾಡಿದ್ದಲ್ಲದೆ, ಕೆಲವು ಖಾಸಗಿ ಫೋಟೋಗಳನ್ನು ಜಾಲತಾಣದಲ್ಲಿ ಹಂಚಿಕೊಂಡಿದ್ದರು. ಹಿರಿಯ ಐಎಎಸ್ ಅಧಿಕಾರಿಗಳಿಗೆ ತನ್ನ ಖಾಸಗಿ ಫೋಟೋಗಳನ್ನು ಕಳಿಸಿಕೊಟ್ಟು ಬ್ಲಾಕ್ಮೇಲ್ ಮಾಡುತ್ತಾರೆಂದು ಆರೋಪ ಮಾಡಿದ್ದರು. ಈ ವಿಚಾರ ಮಾಧ್ಯಮದಲ್ಲಿ ಭಾರೀ ಸುದ್ದಿಗೆ ಗ್ರಾಸವಾಗಿತ್ತು.

ಈ ಬಗ್ಗೆ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರು ಫೆಬ್ರವರಿ 20ರಂದು ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾಗೆ ದೂರು ನೀಡಿದ್ದರು. ಐಪಿಎಸ್ ಅಧಿಕಾರಿ ಡಿ. ರೂಪಾ ಮೌದ್ಗಿಲ್ ಕೂಡ ರೋಹಿಣಿ ವಿರುದ್ಧ ಪ್ರತಿ ದೂರು ನೀಡಿದ್ದರು. ವಿಧಾನಸೌಧದಲ್ಲಿರುವ ಸಿಎಸ್ ಕಚೇರಿಯಲ್ಲಿ ವಂದಿತಾ ಶರ್ಮಾರನ್ನು ಭೇಟಿಯಾಗಿದ್ದ ಡಿ.ರೂಪಾ, ಸುಮಾರು 35 ನಿಮಿಷ ಸಿಎಸ್ ಜೊತೆ ಚರ್ಚಿಸಿ ರೋಹಿಣಿ ಸಿಂಧೂರಿ ವಿರುದ್ಧ ದಾಖಲೆ ಸಮೇತ ದೂರು ಕೊಟ್ಟಿದ್ದರು. ಇಬ್ಬರಿಗೂ ಮುಖ್ಯ ಕಾರ್ಯದರ್ಶಿ ಜಾಲತಾಣದಲ್ಲಿ ಯಾವುದೇ ಅಭಿಪ್ರಾಯ ಹಂಚಿಕೊಳ್ಳದಂತೆ ಸೂಚನೆ ನೀಡಿದ್ದರೂ, ರೂಪಾ ಮೌದ್ಗಿಲ್ ಆನಂತರವೂ ಪೋಸ್ಟ್ ಹಾಕಿದ್ದರು.
ಇಬ್ಬರು ಅಧಿಕಾರಿಗಳ ಜಡೆ ಜಗಳ ಸುದ್ದಿಯ ಕೇಂದ್ರ ಬಿಂದುವಾಗಿದ್ದಲ್ಲದೆ, ರಾಜ್ಯ ಸರ್ಕಾರಕ್ಕೂ ಮುಜುಗರ ಉಂಟುಮಾಡಿತ್ತು. ವಿಪಕ್ಷ ನಾಯಕರು ರಾಜ್ಯದ ಆಡಳಿತ ಸ್ಥಿತಿಯ ಬಗ್ಗೆ ಟೀಕೆಯನ್ನೂ ಮಾಡಿದ್ದರು. ಇದರಂತೆ, ಮುಖ್ಯಮಂತ್ರಿ ಇಬ್ಬರ ಬಗ್ಗೆಯೂ ತನಿಖೆಗೆ ಆದೇಶ ಮಾಡಿ ಜಡೆಜಗಳಕ್ಕೆ ತಾತ್ಕಾಲಿಕ ಅಂತ್ಯ ಹಾಡಿದ್ದಾರೆ.
The Karnataka government has ordered a departmental inquiry against IAS officer Rohini Sindhuri and IPS officer D. Roopa Moudgil over their public spat, sources said on Saturday.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm