ಬ್ರೇಕಿಂಗ್ ನ್ಯೂಸ್
25-02-23 01:06 pm Bangalore Correspondent ಕರ್ನಾಟಕ
ಬೆಂಗಳೂರು, ಫೆ.25: ಸಾಮಾಜಿಕ ಜಾಲತಾಣದಲ್ಲಿ ಪರಸ್ಪರ ಕಿತ್ತಾಡಿಕೊಂಡ ಐಪಿಎಸ್ ಅಧಿಕಾರಿ ಡಿ.ರೂಪಾ ಮೌದ್ಗಿಲ್ ಹಾಗೂ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆ ನಡೆಸುವಂತೆ ಸಿಎಂ ಬಸವರಾಜ ಬೊಮ್ಮಾಯಿ ಆದೇಶ ಮಾಡಿದ್ದಾರೆ. ಮುಖ್ಯಮಂತ್ರಿ ಸೂಚನೆ ಮೇರೆಗೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಇಬ್ಬರು ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ ಹೊರಡಿಸಿದ್ದಾರೆ.
ರೋಹಿಣಿ ವಿರುದ್ಧ ಐಪಿಎಸ್ ಅಧಿಕಾರಿ ಡಿ.ರೂಪಾ ಅವರು ಫೇಸ್ಬುಕ್ ಮೂಲಕ 20 ಅಂಶಗಳನ್ನು ಉಲ್ಲೇಖಿಸಿ ಆರೋಪ ಮಾಡಿದ್ದಲ್ಲದೆ, ಕೆಲವು ಖಾಸಗಿ ಫೋಟೋಗಳನ್ನು ಜಾಲತಾಣದಲ್ಲಿ ಹಂಚಿಕೊಂಡಿದ್ದರು. ಹಿರಿಯ ಐಎಎಸ್ ಅಧಿಕಾರಿಗಳಿಗೆ ತನ್ನ ಖಾಸಗಿ ಫೋಟೋಗಳನ್ನು ಕಳಿಸಿಕೊಟ್ಟು ಬ್ಲಾಕ್ಮೇಲ್ ಮಾಡುತ್ತಾರೆಂದು ಆರೋಪ ಮಾಡಿದ್ದರು. ಈ ವಿಚಾರ ಮಾಧ್ಯಮದಲ್ಲಿ ಭಾರೀ ಸುದ್ದಿಗೆ ಗ್ರಾಸವಾಗಿತ್ತು.

ಈ ಬಗ್ಗೆ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರು ಫೆಬ್ರವರಿ 20ರಂದು ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾಗೆ ದೂರು ನೀಡಿದ್ದರು. ಐಪಿಎಸ್ ಅಧಿಕಾರಿ ಡಿ. ರೂಪಾ ಮೌದ್ಗಿಲ್ ಕೂಡ ರೋಹಿಣಿ ವಿರುದ್ಧ ಪ್ರತಿ ದೂರು ನೀಡಿದ್ದರು. ವಿಧಾನಸೌಧದಲ್ಲಿರುವ ಸಿಎಸ್ ಕಚೇರಿಯಲ್ಲಿ ವಂದಿತಾ ಶರ್ಮಾರನ್ನು ಭೇಟಿಯಾಗಿದ್ದ ಡಿ.ರೂಪಾ, ಸುಮಾರು 35 ನಿಮಿಷ ಸಿಎಸ್ ಜೊತೆ ಚರ್ಚಿಸಿ ರೋಹಿಣಿ ಸಿಂಧೂರಿ ವಿರುದ್ಧ ದಾಖಲೆ ಸಮೇತ ದೂರು ಕೊಟ್ಟಿದ್ದರು. ಇಬ್ಬರಿಗೂ ಮುಖ್ಯ ಕಾರ್ಯದರ್ಶಿ ಜಾಲತಾಣದಲ್ಲಿ ಯಾವುದೇ ಅಭಿಪ್ರಾಯ ಹಂಚಿಕೊಳ್ಳದಂತೆ ಸೂಚನೆ ನೀಡಿದ್ದರೂ, ರೂಪಾ ಮೌದ್ಗಿಲ್ ಆನಂತರವೂ ಪೋಸ್ಟ್ ಹಾಕಿದ್ದರು.
ಇಬ್ಬರು ಅಧಿಕಾರಿಗಳ ಜಡೆ ಜಗಳ ಸುದ್ದಿಯ ಕೇಂದ್ರ ಬಿಂದುವಾಗಿದ್ದಲ್ಲದೆ, ರಾಜ್ಯ ಸರ್ಕಾರಕ್ಕೂ ಮುಜುಗರ ಉಂಟುಮಾಡಿತ್ತು. ವಿಪಕ್ಷ ನಾಯಕರು ರಾಜ್ಯದ ಆಡಳಿತ ಸ್ಥಿತಿಯ ಬಗ್ಗೆ ಟೀಕೆಯನ್ನೂ ಮಾಡಿದ್ದರು. ಇದರಂತೆ, ಮುಖ್ಯಮಂತ್ರಿ ಇಬ್ಬರ ಬಗ್ಗೆಯೂ ತನಿಖೆಗೆ ಆದೇಶ ಮಾಡಿ ಜಡೆಜಗಳಕ್ಕೆ ತಾತ್ಕಾಲಿಕ ಅಂತ್ಯ ಹಾಡಿದ್ದಾರೆ.
The Karnataka government has ordered a departmental inquiry against IAS officer Rohini Sindhuri and IPS officer D. Roopa Moudgil over their public spat, sources said on Saturday.
22-06-26 08:18 pm
HK News Staffer
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
23-06-26 12:21 pm
HK News Staffer
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
23-06-26 11:49 am
HK News Staffer
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
23-06-26 02:15 pm
HK News Staffer
ಮಗಳಿಗೆ ಬುದ್ಧಿ ಹೇಳಿದ್ದೇ ತಪ್ಪಾಯ್ತಾ ? ಲಿವ್-ಇನ್...
23-06-26 12:57 pm
ಅಕ್ರಮ ಪೊಲೀಸ್ ಕ್ಲಿಯರೆನ್ಸ್ ; ಮೂರೇ ದಿನದಲ್ಲಿ ಸಿಸಿ...
22-06-26 10:21 pm
ಉಡುಪಿಯಲ್ಲಿ ಮಕ್ಕಳಿಲ್ಲದ ದಂಪತಿಗೆ ಮಗು ಮಾರಾಟ; ವೈದ್...
22-06-26 08:01 pm
ಹಂದಿ ಜ್ವರಕ್ಕೆ ಕಾರವಾರದ ವ್ಯಕ್ತಿ ಮಂಗಳೂರಿನಲ್ಲಿ ಬಲ...
22-06-26 07:58 pm