ಬ್ರೇಕಿಂಗ್ ನ್ಯೂಸ್
28-02-23 03:06 pm HK News Desk ಕರ್ನಾಟಕ
ಶಿವಮೊಗ್ಗ, ಫೆ.28 : ರಾಷ್ಟ್ರೀಯ ರಕ್ಷಾ ಯೂನಿವರ್ಸಿಟಿ ನಮ್ಮ ರಾಜ್ಯಕ್ಕೆ ಸ್ಯಾಂಕ್ಷನ್ ಆಗಿದೆ. ಅದಕ್ಕಾಗಿ ಶಿವಮೊಗ್ಗ ಜಿಲ್ಲೆಯ ನವುಲೆಯಲ್ಲಿ 8 ಎಕರೆ ಜಾಗ ಗುರುತಿಸಲಾಗಿದೆ. ಅಲ್ಲಿ ಸುಸಜ್ಜಿತ ಕಟ್ಟಡ, ಮೂಲಸೌಕರ್ಯ ಇರುವಂತಹ ಕ್ಯಾಂಪಸ್ ರಚಿಸಲಾಗುವುದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.
ಈ ಸಲದ ಶೈಕ್ಷಣಿಕ ವರ್ಷದಲ್ಲಿ ಕೇಂದ್ರ ಆರಂಭಕ್ಕೆ ರಾಗಿಗುಡ್ಡದಲ್ಲಿ ಕಟ್ಟಡ ನೀಡಲಾಗಿದೆ. ಮಿಲಿಟರಿ ಮತ್ತು ಆಂತರಿಕ ಭದ್ರತಾ ವ್ಯವಸ್ಥೆಗೆ ಸಂಬಂಧಪಟ್ಟಂತೆ ಬೋಧನೆ ಇಲ್ಲಿ ಆಗುತ್ತದೆ. ಸೈಬರ್ ಸೇರಿದಂತೆ, ವಿವಿಧ ಕೋರ್ಸುಗಳು ಇಲ್ಲಿ ಬರಲಿದೆ. ಪಿಯುಸಿ ಬಳಿಕದ ಕೋರ್ಸ್ ಇದಾಗಿದ್ದು ಶಿವಮೊಗ್ಗದ ವಿದ್ಯಾರ್ಥಿಗಳಿಗೆ ಹೊಸ ದಿಕ್ಕು ತೋರಿಸಲಿದೆ. ಇತ್ತೀಚೆಗೆ ಅಹಮದಾಬಾದ್ ನಲ್ಲಿ ಈ ಯೂನಿವರ್ಸಿಟಿ ಇರುವಲ್ಲಿಗೆ ಭೇಟಿ ಕೊಟ್ಟಿದ್ದೆವು. ಅಹಮದಾಬಾದ್ ಬಿಟ್ಟರೆ, ಶಿವಮೊಗ್ಗದಲ್ಲೇ ಈ ಕೇಂದ್ರ ಆರಂಭವಾಗುತ್ತಿದೆ.
ಕರ್ನಾಟಕ ಪೊಲೀಸ್ ಗೆ ಪ್ರತಿ ವರ್ಷ 5 ಸಾವಿರ ಜನರನ್ನು ತೆಗೆದುಕೊಳ್ಳುತ್ತೇವೆ. ಹೀಗಾಗಿ ಈ ಯೂನಿವರ್ಸಿಟಿ ನಮಗೆ ಉಪಯೋಗಕ್ಕೆ ಬರುತ್ತದೆ. ಇಲ್ಲಿ ಕೋರ್ಸ್ ಮುಗಿಸಿದ ಅಭ್ಯರ್ಥಿಗಳು ನೇರವಾಗಿ ಪೊಲೀಸ್ ಡ್ಯೂಟಿಗೆ ಹೋಗಬಹುದಾಗಿದೆ. ಎಕ್ಸಾಂ ಬರೆದು ಪೊಲೀಸ್ ಇಲಾಖೆ ಸೇರಿದವರಿಗೆ 8 ತಿಂಗಳ ಕಾಲ ಟ್ರೈನಿಂಗ್ ನೀಡುತ್ತೇವೆ. ಅದರ ಬದಲಾಗಿ ಈ ಕೋರ್ಸ್ ಪರ್ಯಾಯವಾಗಿದೆ ಎಂದು ಹೇಳಿದರು.
ಸರ್ಕಾರಿ ನೌಕರರ ಮುಷ್ಕರ ಬಗ್ಗೆ ಕೇಳಿದ ಪ್ರಶ್ನೆಗೆ, ಈ ಬಗ್ಗೆ ಮುಖ್ಯಮಂತ್ರಿಗಳು ಪ್ರತಿಕ್ರಿಯೆ ನೀಡಲಿದ್ದಾರೆ. ಕಾನೂನು ಸುವ್ಯವಸ್ಥೆ ನೀಡಲು ಇಲಾಖೆ ಸಜ್ಜಾಗಿದೆ. ಸರ್ಕಾರಿ ನೌಕರರು ಕಾನೂನು ಸುವ್ಯವಸ್ಥೆ ಹಾಳು ಮಾಡುವುದಿಲ್ಲ ಎಂದರು.

ಪಿ.ಎಸ್.ಐ. ಮರು ನೇಮಕಾತಿ ಕುರಿತ ಪ್ರಶ್ನೆಗೆ, ಕೋರ್ಟ್ ಆರ್ಡರ್ ನಿರೀಕ್ಷೆ ಮಾಡುತ್ತಿದ್ದೇವೆ. ಸುಪ್ರೀಂ ಕೋರ್ಟ್ ನಲ್ಲಿ ಈ ವಿಚಾರವಿದೆ. ಅದು ಬಂದ ಬಳಿಕ ತೀರ್ಮಾನ ತೆಗೆದುಕೊಳ್ಳುತ್ತೇವೆ ಎಂದರು. ರೌಡಿ ಶೀಟರ್ ಪಟ್ಟಿಯಿಂದ ಅತಿ ಹೆಚ್ಚು ರೌಡಿಗಳನ್ನು ಬಿಟ್ಟಿರುವ ಬಗ್ಗೆ ಕೇಳಿದ ಪ್ರಶ್ನೆಗೆ, ನಾವು ಕಾನೂನಾತ್ಮಕವಾಗಿ ಕ್ರಮ ತೆಗೆದುಕೊಳ್ಳುತ್ತೇವೆ. ಕೆಲವರನ್ನ ರಾಜಕೀಯವಾಗಿ ರೌಡಿ ಪಟ್ಟಿಗೆ ಸೇರಿಸುತ್ತಾರೆ. ಹಾಗಾಗಿ ಅವರ ಬ್ಯಾಕ್ ಗ್ರೌಂಡ್ ನೋಡಿಕೊಂಡು ಪಟ್ಟಿಯಿಂದ ಕೈಬಿಡಲಾಗಿದೆ ಎಂದರು.
Raksha University to come up in Shivamogga, allotments to police department made easier.
17-04-26 01:39 pm
HK News Staffer
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
ಆದಿಚುಂಚನಗಿರಿಯಲ್ಲಿ 80 ಕೋಟಿ ವೆಚ್ಚದ ಮಂದಿರ ಉದ್ಘಾಟ...
15-04-26 07:05 pm
17-04-26 11:27 am
HK News Staffer
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
17-04-26 12:33 pm
HK News Staffer
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
ಆಟೋದಲ್ಲಿ ಒಡವೆಗಳಿದ್ದ ಬ್ಯಾಗ್ ಬಿಟ್ಟು ಹೋಗಿದ್ದ ಮಹಿ...
13-04-26 11:39 pm
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
Mangalore Live Accident Nantoor: ಓವರ್ ಸ್ಪೀಡ್...
12-04-26 09:05 pm
16-04-26 10:36 pm
HK News Staffer
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am
ಯೋಗೀಶಗೌಡ ಕೊಲೆ ಕೇಸಲ್ಲಿ ಕಾಂಗ್ರೆಸ್ ಶಾಸಕ ಅಪರಾಧಿ ;...
15-04-26 11:40 pm