ಬ್ರೇಕಿಂಗ್ ನ್ಯೂಸ್
28-02-23 03:06 pm HK News Desk ಕರ್ನಾಟಕ
ಶಿವಮೊಗ್ಗ, ಫೆ.28 : ರಾಷ್ಟ್ರೀಯ ರಕ್ಷಾ ಯೂನಿವರ್ಸಿಟಿ ನಮ್ಮ ರಾಜ್ಯಕ್ಕೆ ಸ್ಯಾಂಕ್ಷನ್ ಆಗಿದೆ. ಅದಕ್ಕಾಗಿ ಶಿವಮೊಗ್ಗ ಜಿಲ್ಲೆಯ ನವುಲೆಯಲ್ಲಿ 8 ಎಕರೆ ಜಾಗ ಗುರುತಿಸಲಾಗಿದೆ. ಅಲ್ಲಿ ಸುಸಜ್ಜಿತ ಕಟ್ಟಡ, ಮೂಲಸೌಕರ್ಯ ಇರುವಂತಹ ಕ್ಯಾಂಪಸ್ ರಚಿಸಲಾಗುವುದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.
ಈ ಸಲದ ಶೈಕ್ಷಣಿಕ ವರ್ಷದಲ್ಲಿ ಕೇಂದ್ರ ಆರಂಭಕ್ಕೆ ರಾಗಿಗುಡ್ಡದಲ್ಲಿ ಕಟ್ಟಡ ನೀಡಲಾಗಿದೆ. ಮಿಲಿಟರಿ ಮತ್ತು ಆಂತರಿಕ ಭದ್ರತಾ ವ್ಯವಸ್ಥೆಗೆ ಸಂಬಂಧಪಟ್ಟಂತೆ ಬೋಧನೆ ಇಲ್ಲಿ ಆಗುತ್ತದೆ. ಸೈಬರ್ ಸೇರಿದಂತೆ, ವಿವಿಧ ಕೋರ್ಸುಗಳು ಇಲ್ಲಿ ಬರಲಿದೆ. ಪಿಯುಸಿ ಬಳಿಕದ ಕೋರ್ಸ್ ಇದಾಗಿದ್ದು ಶಿವಮೊಗ್ಗದ ವಿದ್ಯಾರ್ಥಿಗಳಿಗೆ ಹೊಸ ದಿಕ್ಕು ತೋರಿಸಲಿದೆ. ಇತ್ತೀಚೆಗೆ ಅಹಮದಾಬಾದ್ ನಲ್ಲಿ ಈ ಯೂನಿವರ್ಸಿಟಿ ಇರುವಲ್ಲಿಗೆ ಭೇಟಿ ಕೊಟ್ಟಿದ್ದೆವು. ಅಹಮದಾಬಾದ್ ಬಿಟ್ಟರೆ, ಶಿವಮೊಗ್ಗದಲ್ಲೇ ಈ ಕೇಂದ್ರ ಆರಂಭವಾಗುತ್ತಿದೆ.
ಕರ್ನಾಟಕ ಪೊಲೀಸ್ ಗೆ ಪ್ರತಿ ವರ್ಷ 5 ಸಾವಿರ ಜನರನ್ನು ತೆಗೆದುಕೊಳ್ಳುತ್ತೇವೆ. ಹೀಗಾಗಿ ಈ ಯೂನಿವರ್ಸಿಟಿ ನಮಗೆ ಉಪಯೋಗಕ್ಕೆ ಬರುತ್ತದೆ. ಇಲ್ಲಿ ಕೋರ್ಸ್ ಮುಗಿಸಿದ ಅಭ್ಯರ್ಥಿಗಳು ನೇರವಾಗಿ ಪೊಲೀಸ್ ಡ್ಯೂಟಿಗೆ ಹೋಗಬಹುದಾಗಿದೆ. ಎಕ್ಸಾಂ ಬರೆದು ಪೊಲೀಸ್ ಇಲಾಖೆ ಸೇರಿದವರಿಗೆ 8 ತಿಂಗಳ ಕಾಲ ಟ್ರೈನಿಂಗ್ ನೀಡುತ್ತೇವೆ. ಅದರ ಬದಲಾಗಿ ಈ ಕೋರ್ಸ್ ಪರ್ಯಾಯವಾಗಿದೆ ಎಂದು ಹೇಳಿದರು.
ಸರ್ಕಾರಿ ನೌಕರರ ಮುಷ್ಕರ ಬಗ್ಗೆ ಕೇಳಿದ ಪ್ರಶ್ನೆಗೆ, ಈ ಬಗ್ಗೆ ಮುಖ್ಯಮಂತ್ರಿಗಳು ಪ್ರತಿಕ್ರಿಯೆ ನೀಡಲಿದ್ದಾರೆ. ಕಾನೂನು ಸುವ್ಯವಸ್ಥೆ ನೀಡಲು ಇಲಾಖೆ ಸಜ್ಜಾಗಿದೆ. ಸರ್ಕಾರಿ ನೌಕರರು ಕಾನೂನು ಸುವ್ಯವಸ್ಥೆ ಹಾಳು ಮಾಡುವುದಿಲ್ಲ ಎಂದರು.

ಪಿ.ಎಸ್.ಐ. ಮರು ನೇಮಕಾತಿ ಕುರಿತ ಪ್ರಶ್ನೆಗೆ, ಕೋರ್ಟ್ ಆರ್ಡರ್ ನಿರೀಕ್ಷೆ ಮಾಡುತ್ತಿದ್ದೇವೆ. ಸುಪ್ರೀಂ ಕೋರ್ಟ್ ನಲ್ಲಿ ಈ ವಿಚಾರವಿದೆ. ಅದು ಬಂದ ಬಳಿಕ ತೀರ್ಮಾನ ತೆಗೆದುಕೊಳ್ಳುತ್ತೇವೆ ಎಂದರು. ರೌಡಿ ಶೀಟರ್ ಪಟ್ಟಿಯಿಂದ ಅತಿ ಹೆಚ್ಚು ರೌಡಿಗಳನ್ನು ಬಿಟ್ಟಿರುವ ಬಗ್ಗೆ ಕೇಳಿದ ಪ್ರಶ್ನೆಗೆ, ನಾವು ಕಾನೂನಾತ್ಮಕವಾಗಿ ಕ್ರಮ ತೆಗೆದುಕೊಳ್ಳುತ್ತೇವೆ. ಕೆಲವರನ್ನ ರಾಜಕೀಯವಾಗಿ ರೌಡಿ ಪಟ್ಟಿಗೆ ಸೇರಿಸುತ್ತಾರೆ. ಹಾಗಾಗಿ ಅವರ ಬ್ಯಾಕ್ ಗ್ರೌಂಡ್ ನೋಡಿಕೊಂಡು ಪಟ್ಟಿಯಿಂದ ಕೈಬಿಡಲಾಗಿದೆ ಎಂದರು.
Raksha University to come up in Shivamogga, allotments to police department made easier.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm