ಬ್ರೇಕಿಂಗ್ ನ್ಯೂಸ್
02-03-23 06:22 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.2: ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗೆ ಹಿಜಾಬ್ ಧರಿಸಿ ಹಾಜರಾಗಲು ಅನುಮತಿ ನೀಡಬೇಕೆಂಬ ಮುಸ್ಲಿಂ ವಿದ್ಯಾರ್ಥಿನಿಯರ ಮನವಿಯನ್ನು ಪರಿಗಣಿಸಲು ಶಿಕ್ಷಣ ಇಲಾಖೆ ನಿರಾಕರಿಸಿದೆ. ಈ ಕುರಿತ ಮನವಿಯನ್ನು ಪರಿಗಣಿಸದಂತೆ ಪದವಿಪೂರ್ವ ಕಾಲೇಜುಗಳ ಪ್ರಾಂಶುಪಾಲರಿಗೆ ಶಿಕ್ಷಣ ಸಚಿವ ಬಿಸಿ ನಾಗೇಶ್ ಸೂಚಿಸಿದ್ದಾರೆ.
ಹಿಜಾಬ್ ಧರಿಸಿ ಪರೀಕ್ಷೆ ಬರೆಯಲು ಅನುಮತಿ ನೀಡುವಂತೆ ಉಡುಪಿ, ಚಿಕ್ಕಬಳ್ಳಾಪುರ, ಚಾಮರಾಜನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ಪದವಿಪೂರ್ವ ಕಾಲೇಜುಗಳ ಕೆಲವು ಮುಸ್ಲಿಂ ವಿದ್ಯಾರ್ಥಿನಿಯರು ಶಿಕ್ಷಣ ಇಲಾಖೆ ಮತ್ತು ಆಯಾ ಕಾಲೇಜುಗಳ ಪ್ರಾಂಶುಪಾಲರಿಗೆ ಮನವಿ ಸಲ್ಲಿಸಿದ್ದರು. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸಚಿವ ನಾಗೇಶ್, ಹಿಜಾಬ್ ವಿಷಯವು ಸುಪ್ರೀಂ ಕೋರ್ಟ್ನಲ್ಲಿದೆ. ಹೀಗಾಗಿ, ಪರೀಕ್ಷೆ ಸಮಯದಲ್ಲಿ ಹಿಜಾಬ್ ಧರಿಸಲು ಅನುಮತಿ ನೀಡುವ ಪ್ರಶ್ನೆ ಬರುವುದಿಲ್ಲ ಎಂದಿದ್ದಾರೆ. ಅಲ್ಲದೆ, ಹಿಜಾಬ್ ಕಾರಣಕ್ಕೆ ಯಾವುದೇ ವಿದ್ಯಾರ್ಥಿನಿ ಪರೀಕ್ಷೆಗೆ ಗೈರಾಗುತ್ತಾರೆ ಎಂದು ಭಾವಿಸುವುದಿಲ್ಲ ಎಂದು ಹೇಳಿದ್ದಾರೆ.

ಹಿಜಾಬ್ ಧರಿಸುವುದು ಇಸ್ಲಾಮಿಕ್ ನಂಬಿಕೆಯ ಅಗತ್ಯ ಧಾರ್ಮಿಕ ಆಚರಣೆಯ ಭಾಗ ಅಲ್ಲ ಎಂದು ರಾಜ್ಯ ಹೈಕೋರ್ಟ್ ಕಳೆದ ವರ್ಷ ಮಾರ್ಚ್ನಲ್ಲಿ ಅಭಿಪ್ರಾಯಪಟ್ಟಿತ್ತು. ಅಲ್ಲದೆ, ವಿದ್ಯಾರ್ಥಿಗಳು ಆಯಾ ಕಾಲೇಜು ಆಡಳಿತ ನಿಗದಿಪಡಿಸಿದ ಸಮವಸ್ತ್ರವನ್ನೇ ಧರಿಸಬೇಕು ಎಂದು 2022ರ ಫೆ.5ರಂದು ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶವನ್ನು ಹೈಕೋರ್ಟ್ ಎತ್ತಿಹಿಡಿದಿತ್ತು. ಇದರಿಂದ ಹಿಜಾಬ್ ಪರ ಹೋರಾಟಗಾರರಿಗೆ ಹಿನ್ನಡೆಯಾಗಿತ್ತು. ಹೈಕೋರ್ಟ್ ಆದೇಶವನ್ನು ಸುಪ್ರೀಂ ಕೋರ್ಟ್ನಲ್ಲಿ ಪ್ರಶ್ನಿಸಿದ್ದು ಸದ್ಯ ವಿಚಾರಣೆ ಹಂತದಲ್ಲಿದೆ. ಈ ನಡುವೆ, ಹಿಜಾಬ್ ಧರಿಸಿ ಪರೀಕ್ಷೆ ಬರೆಯಲು ಅನುಮತಿ ನೀಡಬೇಕೆಂದು ಸುಪ್ರೀಂ ಕೋರ್ಟಿನಲ್ಲಿಯೂ ಅರ್ಜಿ ಸಲ್ಲಿಸಲಾಗಿದೆ. ಆ ಕುರಿತ ತೀರ್ಪು ಇನ್ನೂ ಬಂದಿಲ್ಲ. ಇದೇ ಮಾರ್ಚ್ 10ರಿಂದ ಪಿಯುಸಿ ವಾರ್ಷಿಕ ಪರೀಕ್ಷೆ ನಡೆಯಲಿದೆ.
Karnataka education board denies Writing exams with hijab Muslim Students
17-04-26 01:39 pm
HK News Staffer
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
ಆದಿಚುಂಚನಗಿರಿಯಲ್ಲಿ 80 ಕೋಟಿ ವೆಚ್ಚದ ಮಂದಿರ ಉದ್ಘಾಟ...
15-04-26 07:05 pm
17-04-26 11:27 am
HK News Staffer
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
17-04-26 12:33 pm
HK News Staffer
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
ಆಟೋದಲ್ಲಿ ಒಡವೆಗಳಿದ್ದ ಬ್ಯಾಗ್ ಬಿಟ್ಟು ಹೋಗಿದ್ದ ಮಹಿ...
13-04-26 11:39 pm
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
Mangalore Live Accident Nantoor: ಓವರ್ ಸ್ಪೀಡ್...
12-04-26 09:05 pm
16-04-26 10:36 pm
HK News Staffer
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am
ಯೋಗೀಶಗೌಡ ಕೊಲೆ ಕೇಸಲ್ಲಿ ಕಾಂಗ್ರೆಸ್ ಶಾಸಕ ಅಪರಾಧಿ ;...
15-04-26 11:40 pm