ಬ್ರೇಕಿಂಗ್ ನ್ಯೂಸ್
03-03-23 06:02 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.3: ತಮ್ಮ ಪುತ್ರ ಹಾಗೂ ಕೆಎಎಸ್ ಅಧಿಕಾರಿ ಪ್ರಶಾಂತ್ ಮಾಡಾಳ್ ವಿರುದ್ಧ ನಡೆದ ಲೋಕಾಯುಕ್ತ ದಾಳಿಯ ಕಾರಣಕ್ಕೆ, ಚನ್ನಗಿರಿ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರು ಕರ್ನಾಟಕ ಸಾಬೂನು ಹಾಗೂ ಮಾರ್ಜಕ ನಿಯಮಿತ (ಕೆಎಸ್ಡಿಎಲ್) ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಲೋಕಾಯುಕ್ತ ದಾಳಿಯಿಂದ ರಾಜ್ಯ ಸರ್ಕಾರಕ್ಕೆ ಎದುರಾಗುವ ಮುಜುಗರವನ್ನು ತಪ್ಪಿಸಲು, ಕೆಎಸ್ಡಿಎಲ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಮಾಡಾಳ್ ವಿರೂಪಾಕ್ಷಪ್ಪ ಅವರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚನೆ ನೀಡಿದ್ದರು ಎನ್ನಲಾಗಿದೆ.
ಈ ಹಿನ್ನೆಲೆಯಲ್ಲಿ ತಮ್ಮ ಆಪ್ತರ ಮೂಲಕ ಕೆಎಸ್ಡಿಎಲ್ ನಿಗಮ ಮಂಡಳಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಪತ್ರವನ್ನು, ಮಾಡಾಳ್ ವಿರೂಪಾಪಕ್ಷಪ್ಪ ಅವರಿಗೆ ಸಿಎಂ ಸೂಚನೆ ನೀಡಿದ್ದರು.

ಈ ಹಿನ್ನೆಲೆಯಲ್ಲಿ ತಮ್ಮ ಆಪ್ತರ ಮೂಲಕ ಸಿಎಂ ಕಚೇರಿಗೆ ರಾಜೀನಾಮೆ ಪತ್ರವನ್ನು ಮಾಡಾಳ್ ವಿರೂಪಾಕ್ಷಪ್ಪ ಸಲ್ಲಿಕೆ ಮಾಡಿದ್ದಾರೆ. ಪತ್ರದಲ್ಲಿ, ''2.03.2023ರಂದು ನಡೆದ ಲೋಕಾಯುಕ್ತ ದಾಳಿಗೂ ನನಗೂ ಸಂಬಂಧವಿಲ್ಲ. ಇದು ನನ್ನ ಕುಟುಂಬದ ವಿರುದ್ಧ ಹೆಣೆಯಲಾಗಿರುವ ಷಡ್ಯಂತ್ರ. ಆದರೂ ನನ್ನ ಮೇಲೆ ಆಪಾದನೆ ಬಂದಿರುವುದರಿಂದ. ನಾನು ನೈತಿಕ ಹೊಣೆ ಹೊತ್ತು ಕೆಎಸ್ಡಿಲ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುತ್ತಿದ್ದೇನೆ..'' ಎಂದು ವಿರೂಪಾಕ್ಷಪ್ಪ ಉಲ್ಲೇಖ ಮಾಡಿದ್ದಾರೆ.
ಶ್ರೇಯಸ್ ಕಶ್ಯಪ್ ಅವರು ನೀಡಿದ್ದ ದೂರಿನ ಅನ್ವಯ ಲೋಕಾಯುಕ್ತ ಪೊಲೀಸರು ಎಫ್ಐಆರ್ ದಾಖಲಿಸಿದ್ದು, ಮಾಡಾಳ್ ವಿರೂಪಾಕ್ಷಪ್ಪ ಎ1(ಮೊದಲ ಆರೋಪಿ) ಆಗಿದ್ದು, ಮಾಡಾಳ್ ವಿರೂಪಾಕ್ಷಪ್ಪ ಪುತ್ರ ಮಾಡಾಳ್ ಪ್ರಶಾಂತ್ ಎ2(2ನೇ ಆರೋಪಿ), ಕೆಎಸ್ಡಿಎಲ್ ಅಕೌಂಟೆಂಟ್ ಸುರೇಂದ್ರ ಎ3, ಮಾಡಾಳ್ ಪ್ರಶಾಂತ್ ಸಂಬಂಧಿ ಸಿದ್ದೇಶ್ ಎ4, ಅರೋಮಾ ಕಂಪನಿ ಸಿಬ್ಬಂದಿ ಆಲ್ಬರ್ಟ್ ನಿಕೋಲಾ ಎ5, ಅರೋಮಾ ಕಂಪನಿ ಸಿಬ್ಬಂದಿ ಗಂಗಾಧರ ಎ6 ಆಗಿದ್ದಾರೆ.
ತಮ್ಮ ವಿರುದ್ಧ ಎಫ್ಐಆರ್ ದಾಖಲಾಗುತ್ತಿದ್ದಂತೆ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಬಂಧನ ಭೀತಿ ಎದುರಾಗಿದ್ದು, ಜಾಮೀನು ಪಡೆಯಲು ಕಸರತ್ತು ನಡೆಸುತ್ತಿದ್ದಾರೆ.
ಇನ್ನೊಂದೆಡೆ ಶಾಸಕರಿಗಾಗಿ ಲೋಕಾಯುಕ್ತ ಪೊಲೀಸರ ಮೂರು ತಂಡಗಳಿಂದ ಹುಟುಕಾಟ ನಡೆಸಲಾಗುತ್ತಿದೆ. ಚನ್ನೇಶಪುರ ಗ್ರಾಮದಲ್ಲಿರುವ ಶಾಸಕರ ನಿವಾಸ, ಮಾವಿನಹೊಳೆ ಬಳಿ ಇರುವ ಮಾಡಾಳ್ ಕುಟುಂಬದ ಕ್ರಷರ್ ಕಚೇರಿ, ಮಾವಿನಕಟ್ಟೆ ಗ್ರಾಮದ ಬಳಿ ಇರುವ ತೋಟದ ಮನೆ ಮೇಲೆ ದಾಳಿ ನಡೆಸಿರುವ ಲೋಕಾಯುಕ್ತ ಪೊಲೀಸರು ಶೋಧ ಕಾರ್ಯ ಮುಂದುವರಿಸಿದ್ದು, 20 ಮಂದಿಯಿಂದ ಪರಿಶೀಲನೆ ನಡೆಯುತ್ತಿದೆ. ದಾಳಿ ವೇಳೆ ಚಿನ್ನ, ಅಪಾರ ಪ್ರಮಾಣದ ಆಸ್ತಿ ಪತ್ರಗಳು ಪತ್ತೆಯಾಗಿವೆ ಎನ್ನಲಾಗಿದೆ.
Facing heat from the anti-corruption wing of Lokayukta, Karnataka BJP MLA Madal Virupakshappa has resigned as the chairman of Karnataka Soaps and Detergents Limited, the manufacturer of Mysore Sandal Soap.
17-04-26 01:39 pm
HK News Staffer
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
ಆದಿಚುಂಚನಗಿರಿಯಲ್ಲಿ 80 ಕೋಟಿ ವೆಚ್ಚದ ಮಂದಿರ ಉದ್ಘಾಟ...
15-04-26 07:05 pm
17-04-26 11:27 am
HK News Staffer
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
17-04-26 12:33 pm
HK News Staffer
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
ಆಟೋದಲ್ಲಿ ಒಡವೆಗಳಿದ್ದ ಬ್ಯಾಗ್ ಬಿಟ್ಟು ಹೋಗಿದ್ದ ಮಹಿ...
13-04-26 11:39 pm
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
Mangalore Live Accident Nantoor: ಓವರ್ ಸ್ಪೀಡ್...
12-04-26 09:05 pm
16-04-26 10:36 pm
HK News Staffer
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am
ಯೋಗೀಶಗೌಡ ಕೊಲೆ ಕೇಸಲ್ಲಿ ಕಾಂಗ್ರೆಸ್ ಶಾಸಕ ಅಪರಾಧಿ ;...
15-04-26 11:40 pm