ಬ್ರೇಕಿಂಗ್ ನ್ಯೂಸ್
05-03-23 01:00 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.5 : ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಬಳಿಕ ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿಯನ್ನು ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ಶನಿವಾರ ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಮಡಿಕೇರಿ ಮೂಲದ ತುಫೈಲ್ ಎಂದು ಗುರುತಿಸಲಾಗಿದೆ. ಶನಿವಾರ ರಾತ್ರಿ 9.30ರ ಸುಮಾರಿಗೆ ನಗರದ ಅಮೃತಹಳ್ಳಿ ಠಾಣೆ ವ್ಯಾಪ್ತಿಯ ದಾಸರಹಳ್ಳಿಯಲ್ಲಿ ಆರೋಪಿಯನ್ನು ಬಂಧಿಸಲಾಗಿದೆ.
ಎನ್ಐಎ ಅಧಿಕಾರಿಗಳು ಆರೋಪಿ ತುಫೈಲ್ ಬಗ್ಗೆ ಸುಳಿವು ಕೊಟ್ಟವರಿಗೆ ರೂ. 5 ಲಕ್ಷ ಹಣ ಬಹುಮಾನ ಘೋಷಣೆ ಮಾಡಿದ್ದರು. ನಿನ್ನೆ ರಾತ್ರಿ ಖಚಿತ ಮಾಹಿತಿ ಮೇರೆಗೆ ಸುಮಾರು 10ಕ್ಕೂ ಹೆಚ್ಚು ಎನ್ಐಎ ಅಧಿಕಾರಿಗಳು ತುಫೈಲ್ ಮನೆ ಬಳಿಗೆ ಹೋಗಿದ್ದಾರೆ. ಇಬ್ಬರು ಅಧಿಕಾರಿಗಳು ಫ್ಲಂಬರ್ ಕಾರ್ಮಿಕರ ಸೋಗಿನಲ್ಲಿ ಮನೆಯ ಒಳನುಗ್ಗಿದ್ದರು. ಈ ವೇಳೆ ತುಫೈಲ್ ಮನೆ ಒಳಗೆ ಮಟನ್ ಕತ್ತರಿಸುತ್ತಿರುವುದು ಕಂಡುಬಂದಿದೆ.

ಒಳಗೆ ಬಂದಿದ್ದ ಅಧಿಕಾರಿಗಳು ಆರೋಪಿ ತುಫೈಲ್ ಅನ್ನುವುದನ್ನು ದೃಢಪಡಿಸುತ್ತಿದ್ದಂತೆ ಮತ್ತಿಬ್ಬರು ಅಧಿಕಾರಿಗಳು ಒಳಗೆ ಬಂದಿದ್ದರು. ಇದನ್ನು ನೋಡಿದ ತುಫೈಲ್, ಚಾಕುವಿನಿಂದ ಹಲ್ಲೆ ಮಾಡಲು ಮುಂದಾಗಿದ್ದಾನೆ. ಇದರ ಬೆನ್ನಲ್ಲೇ ಇತರೇ ಅಧಿಕಾರಿಗಳು ಏಕಕಾಲಕ್ಕೆ ಮನೆಗೆ ನುಗ್ಗಿದ್ದು ಆರೋಪಿಯನ್ನು ಲಾಕ್ ಮಾಡಿದ್ದಾರೆ.
ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಐದು ಮಂದಿ ಪ್ರಮುಖ ಆರೋಪಿಗಳು ಎನ್ಐಎ ಅಧಿಕಾರಿಗಳ ಕೈಗೆ ಸಿಗದೆ ತಲೆಮರೆಸಿಕೊಂಡಿದ್ದರು. ಆ ಪೈಕಿ ಮಡಿಕೇರಿಯ ತುಫೈಲ್ ಹತ್ಯೆಗೈದ ನಾಲ್ವರು ಪರಾರಿಯಾಗಲು ಮತ್ತು ಅಡಗುತಾಣಕ್ಕೆ ಸಹಕಾರ ನೀಡಿದ್ದ ಎನ್ನಲಾಗಿದೆ.
Praveen Nettaru murder NIA arrests another accused in Bengaluru posing as plumber. The National Investigation Agency (NIA) has arrested a wanted criminal, who was carrying a reward of Rs five lakh on his head in connection with the murder of Karnataka BJP Yuva Morcha leader Praveen Nettaru.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm