ಬ್ರೇಕಿಂಗ್ ನ್ಯೂಸ್
05-03-23 01:00 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.5 : ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಬಳಿಕ ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿಯನ್ನು ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ಶನಿವಾರ ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಮಡಿಕೇರಿ ಮೂಲದ ತುಫೈಲ್ ಎಂದು ಗುರುತಿಸಲಾಗಿದೆ. ಶನಿವಾರ ರಾತ್ರಿ 9.30ರ ಸುಮಾರಿಗೆ ನಗರದ ಅಮೃತಹಳ್ಳಿ ಠಾಣೆ ವ್ಯಾಪ್ತಿಯ ದಾಸರಹಳ್ಳಿಯಲ್ಲಿ ಆರೋಪಿಯನ್ನು ಬಂಧಿಸಲಾಗಿದೆ.
ಎನ್ಐಎ ಅಧಿಕಾರಿಗಳು ಆರೋಪಿ ತುಫೈಲ್ ಬಗ್ಗೆ ಸುಳಿವು ಕೊಟ್ಟವರಿಗೆ ರೂ. 5 ಲಕ್ಷ ಹಣ ಬಹುಮಾನ ಘೋಷಣೆ ಮಾಡಿದ್ದರು. ನಿನ್ನೆ ರಾತ್ರಿ ಖಚಿತ ಮಾಹಿತಿ ಮೇರೆಗೆ ಸುಮಾರು 10ಕ್ಕೂ ಹೆಚ್ಚು ಎನ್ಐಎ ಅಧಿಕಾರಿಗಳು ತುಫೈಲ್ ಮನೆ ಬಳಿಗೆ ಹೋಗಿದ್ದಾರೆ. ಇಬ್ಬರು ಅಧಿಕಾರಿಗಳು ಫ್ಲಂಬರ್ ಕಾರ್ಮಿಕರ ಸೋಗಿನಲ್ಲಿ ಮನೆಯ ಒಳನುಗ್ಗಿದ್ದರು. ಈ ವೇಳೆ ತುಫೈಲ್ ಮನೆ ಒಳಗೆ ಮಟನ್ ಕತ್ತರಿಸುತ್ತಿರುವುದು ಕಂಡುಬಂದಿದೆ.

ಒಳಗೆ ಬಂದಿದ್ದ ಅಧಿಕಾರಿಗಳು ಆರೋಪಿ ತುಫೈಲ್ ಅನ್ನುವುದನ್ನು ದೃಢಪಡಿಸುತ್ತಿದ್ದಂತೆ ಮತ್ತಿಬ್ಬರು ಅಧಿಕಾರಿಗಳು ಒಳಗೆ ಬಂದಿದ್ದರು. ಇದನ್ನು ನೋಡಿದ ತುಫೈಲ್, ಚಾಕುವಿನಿಂದ ಹಲ್ಲೆ ಮಾಡಲು ಮುಂದಾಗಿದ್ದಾನೆ. ಇದರ ಬೆನ್ನಲ್ಲೇ ಇತರೇ ಅಧಿಕಾರಿಗಳು ಏಕಕಾಲಕ್ಕೆ ಮನೆಗೆ ನುಗ್ಗಿದ್ದು ಆರೋಪಿಯನ್ನು ಲಾಕ್ ಮಾಡಿದ್ದಾರೆ.
ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಐದು ಮಂದಿ ಪ್ರಮುಖ ಆರೋಪಿಗಳು ಎನ್ಐಎ ಅಧಿಕಾರಿಗಳ ಕೈಗೆ ಸಿಗದೆ ತಲೆಮರೆಸಿಕೊಂಡಿದ್ದರು. ಆ ಪೈಕಿ ಮಡಿಕೇರಿಯ ತುಫೈಲ್ ಹತ್ಯೆಗೈದ ನಾಲ್ವರು ಪರಾರಿಯಾಗಲು ಮತ್ತು ಅಡಗುತಾಣಕ್ಕೆ ಸಹಕಾರ ನೀಡಿದ್ದ ಎನ್ನಲಾಗಿದೆ.
Praveen Nettaru murder NIA arrests another accused in Bengaluru posing as plumber. The National Investigation Agency (NIA) has arrested a wanted criminal, who was carrying a reward of Rs five lakh on his head in connection with the murder of Karnataka BJP Yuva Morcha leader Praveen Nettaru.
12-11-25 11:10 pm
Bangalore Correspondent
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
12-11-25 02:54 pm
HK News Desk
ದೆಹಲಿ ಘಟನೆ, ಆತ್ಮಹತ್ಯಾ ಬಾಂಬರ್ ಆಗಿರಲಿಲ್ಲ, ಆಕಸ್ಮ...
11-11-25 10:56 pm
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
13-11-25 01:44 pm
HK Staffer
Mangalore NMPT, Dinesh Gundu Rao, Congress, B...
12-11-25 06:56 pm
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
12-11-25 12:32 pm
Mangalore Correspondent
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm