ಬ್ರೇಕಿಂಗ್ ನ್ಯೂಸ್
05-03-23 01:00 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.5 : ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಬಳಿಕ ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿಯನ್ನು ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ಶನಿವಾರ ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಮಡಿಕೇರಿ ಮೂಲದ ತುಫೈಲ್ ಎಂದು ಗುರುತಿಸಲಾಗಿದೆ. ಶನಿವಾರ ರಾತ್ರಿ 9.30ರ ಸುಮಾರಿಗೆ ನಗರದ ಅಮೃತಹಳ್ಳಿ ಠಾಣೆ ವ್ಯಾಪ್ತಿಯ ದಾಸರಹಳ್ಳಿಯಲ್ಲಿ ಆರೋಪಿಯನ್ನು ಬಂಧಿಸಲಾಗಿದೆ.
ಎನ್ಐಎ ಅಧಿಕಾರಿಗಳು ಆರೋಪಿ ತುಫೈಲ್ ಬಗ್ಗೆ ಸುಳಿವು ಕೊಟ್ಟವರಿಗೆ ರೂ. 5 ಲಕ್ಷ ಹಣ ಬಹುಮಾನ ಘೋಷಣೆ ಮಾಡಿದ್ದರು. ನಿನ್ನೆ ರಾತ್ರಿ ಖಚಿತ ಮಾಹಿತಿ ಮೇರೆಗೆ ಸುಮಾರು 10ಕ್ಕೂ ಹೆಚ್ಚು ಎನ್ಐಎ ಅಧಿಕಾರಿಗಳು ತುಫೈಲ್ ಮನೆ ಬಳಿಗೆ ಹೋಗಿದ್ದಾರೆ. ಇಬ್ಬರು ಅಧಿಕಾರಿಗಳು ಫ್ಲಂಬರ್ ಕಾರ್ಮಿಕರ ಸೋಗಿನಲ್ಲಿ ಮನೆಯ ಒಳನುಗ್ಗಿದ್ದರು. ಈ ವೇಳೆ ತುಫೈಲ್ ಮನೆ ಒಳಗೆ ಮಟನ್ ಕತ್ತರಿಸುತ್ತಿರುವುದು ಕಂಡುಬಂದಿದೆ.

ಒಳಗೆ ಬಂದಿದ್ದ ಅಧಿಕಾರಿಗಳು ಆರೋಪಿ ತುಫೈಲ್ ಅನ್ನುವುದನ್ನು ದೃಢಪಡಿಸುತ್ತಿದ್ದಂತೆ ಮತ್ತಿಬ್ಬರು ಅಧಿಕಾರಿಗಳು ಒಳಗೆ ಬಂದಿದ್ದರು. ಇದನ್ನು ನೋಡಿದ ತುಫೈಲ್, ಚಾಕುವಿನಿಂದ ಹಲ್ಲೆ ಮಾಡಲು ಮುಂದಾಗಿದ್ದಾನೆ. ಇದರ ಬೆನ್ನಲ್ಲೇ ಇತರೇ ಅಧಿಕಾರಿಗಳು ಏಕಕಾಲಕ್ಕೆ ಮನೆಗೆ ನುಗ್ಗಿದ್ದು ಆರೋಪಿಯನ್ನು ಲಾಕ್ ಮಾಡಿದ್ದಾರೆ.
ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಐದು ಮಂದಿ ಪ್ರಮುಖ ಆರೋಪಿಗಳು ಎನ್ಐಎ ಅಧಿಕಾರಿಗಳ ಕೈಗೆ ಸಿಗದೆ ತಲೆಮರೆಸಿಕೊಂಡಿದ್ದರು. ಆ ಪೈಕಿ ಮಡಿಕೇರಿಯ ತುಫೈಲ್ ಹತ್ಯೆಗೈದ ನಾಲ್ವರು ಪರಾರಿಯಾಗಲು ಮತ್ತು ಅಡಗುತಾಣಕ್ಕೆ ಸಹಕಾರ ನೀಡಿದ್ದ ಎನ್ನಲಾಗಿದೆ.
Praveen Nettaru murder NIA arrests another accused in Bengaluru posing as plumber. The National Investigation Agency (NIA) has arrested a wanted criminal, who was carrying a reward of Rs five lakh on his head in connection with the murder of Karnataka BJP Yuva Morcha leader Praveen Nettaru.
22-06-26 08:18 pm
HK News Staffer
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
23-06-26 12:21 pm
HK News Staffer
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
23-06-26 03:18 pm
HK News Staffer
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
23-06-26 02:15 pm
HK News Staffer
ಮಗಳಿಗೆ ಬುದ್ಧಿ ಹೇಳಿದ್ದೇ ತಪ್ಪಾಯ್ತಾ ? ಲಿವ್-ಇನ್...
23-06-26 12:57 pm
ಅಕ್ರಮ ಪೊಲೀಸ್ ಕ್ಲಿಯರೆನ್ಸ್ ; ಮೂರೇ ದಿನದಲ್ಲಿ ಸಿಸಿ...
22-06-26 10:21 pm
ಉಡುಪಿಯಲ್ಲಿ ಮಕ್ಕಳಿಲ್ಲದ ದಂಪತಿಗೆ ಮಗು ಮಾರಾಟ; ವೈದ್...
22-06-26 08:01 pm
ಹಂದಿ ಜ್ವರಕ್ಕೆ ಕಾರವಾರದ ವ್ಯಕ್ತಿ ಮಂಗಳೂರಿನಲ್ಲಿ ಬಲ...
22-06-26 07:58 pm