ಬ್ರೇಕಿಂಗ್ ನ್ಯೂಸ್
07-03-23 12:37 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.6 : ಬೇಸಿಗೆ ಇನ್ನೂ ಪ್ರಖರವಾಗುವ ಮುನ್ನವೇ ರಾಜ್ಯ ಹಾಗೂ ರಾಜ್ಯಧಾನಿಯಲ್ಲಿ ಉಷ್ಣಾಂಶ ಹೆಚ್ಚಾಗಿದ್ದು, ಬಿಸಿಗಾಳಿಯ ಅಲೆಗಳು ಕಂಡುಬಂದಿವೆ.
ಹೀಗಾಗಿ ಆರೋಗ್ಯದ ಬಗ್ಗೆ ಎಲ್ಲರೂ ಸಾಕಷ್ಟು ಮುನ್ನೆಚ್ಚರಿಕೆ ವಹಿಸಲು ಆರೋಗ್ಯ ಇಲಾಖೆ ಸೂಚನೆ ನೀಡಿದೆ.
ಅಧಿಕ ಉಷ್ಣಾಂಶದಿಂದ ನಾನಾ ರೀತಿಯ ಅನಾರೋಗ್ಯ ಪರಿಸ್ಥಿತಿಗಳು ಸಂಭವಿಸುವ ಸಾಧ್ಯತೆ ಇದೆ. ಅದರಲ್ಲೂ ವೃದ್ಧರು, ಮಕ್ಕಳು, ದುರ್ಬಲ ಆರೋಗ್ಯವುಳ್ಳವರು ಇನ್ನಷ್ಟು ಎಚ್ಚರಿಕೆ ವಹಿಸಬೇಕು ಎಂದು ಆರೋಗ್ಯ ಇಲಾಖೆ ಹಲವು ಸಲಹೆಗಳನ್ನು ನೀಡಿ ಸುತ್ತೋಲೆ ಹೊರಡಿಸಿದೆ.
ರಾಜಧಾನಿಯಲ್ಲಿ ಕಳೆದ ಎರಡು ದಿನಗಳಿಂದ ಬೇಸಿಗೆಯ ಧಗೆ ಉಲ್ಬಣಿಸಿದೆ. ಉಷ್ಣಾಂಶವು ಗರಿಷ್ಠ 32 ಡಿಗ್ರಿ ಸೆಲ್ಸಿಯಸ್ ತಲುಪಿದೆ. ಇಲ್ಲಿ ಮುಂದಿನ 48 ಗಂಟೆಗಳಲ್ಲಿ ಮೇಲ್ಮೈ ಬಿಸಿ ಗಾಳಿ ಬೀಸುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಈ ಮುನ್ನೆಚ್ಚರಿಕೆಗಳನ್ನು ಪಾಲಿಸಿ:
ಬಾಯಾರಿಕೆ ಇಲ್ಲದಿದ್ದರೂ ಪದೇ ಪದೆ ನೀರು ಕುಡಿಯಬೇಕು. ಪ್ರಯಾಣ ಸಮಯದಲ್ಲೂ ನೀರು ತೆಗೆದುಕೊಂಡು ಹೋಗಬೇಕು.ದೇಹವು ನಿರ್ಜಲೀಕರಣಗೊಳ್ಳಲು ಬಿಡಬಾರದು.
ರಾಜ್ಯದಲ್ಲಿ ಬಿಸಿಲು ಬೇಗೆ ಹೆಚ್ಚುತ್ತಿದ್ದಂತೆ ಋುತುಮಾನದ ಕಾಯಿಲೆಗಳಾದ ಕಾಲರಾ, ವಿಷಮಶೀತ ಜ್ವರ, ಕಣ್ಣಿನ ತೊಂದರೆ, ವೈರಲ್ ಸೋಂಕು, ನಿರ್ಜಲೀಕರಣ, ಹೊಟ್ಟೆ ನೋವು, ಡೆಂಗೆ, ಚಿಕನ್ ಫಾಕ್ಸ್, ಬಿಸಿನಿಲಿಂದ ತಲೆ ಸುತ್ತು, ಮೂಗಿನಲ್ಲಿ ರಕ್ತ ಸುರಿಯುವುದು, ಅತಿಯಾದ ಸೂರ್ಯಕಿರಣಗಳಿಂದ ಚರ್ಮ ಸಮಸ್ಯೆಗಳು ಹೆಚ್ಚಾಗಿ ಜನರನ್ನು ಕಾಡುತ್ತಿವೆ. ಈ ಹಿನ್ನೆಲೆಯಲ್ಲಿ ರೋಗ ನಿಯಂತ್ರಣಕ್ಕೆ ಸರಕಾರಿ ಆರೋಗ್ಯ ಕೇಂದ್ರಗಳಲ್ಲಿ ಕ್ಲಿನಿಕಲ್ ಮತ್ತು ಎನರ್ಜಿ ಆಡಿಟಿಂಗ್ ಮಾಡಲು ರಾಜ್ಯ ತಾಂತ್ರಿಕ ಸಲಹಾ ಸಮಿತಿಯು (ಟಿಎಸಿ) ಆರೋಗ್ಯ ಇಲಾಖೆಗೆ ಶಿಫಾರಸು ಮಾಡಿದೆ.
ಕರಾವಳಿಯಲ್ಲಿ ಮಳೆ ಸಾಧ್ಯತೆ:
ಕರಾವಳಿಯಲ್ಲಿ ಮಳೆ ಬರುವ ಸಾಧ್ಯತೆ ಕೂಡ ಜಾಸ್ತಿಯಾಗಿದೆ. ಈಗಾಗಲೇ ಗುಜರಾತ್ನಲ್ಲಿ ಮಳೆಯ ಸೂಚನೆ ನೀಡಲಾಗಿದೆ. ಭಾನುವಾರದಿಂದ ಮಹಾರಾಷ್ಟ್ರದಲ್ಲೂ ಮಳೆ ನಿರೀಕ್ಷೆಯನ್ನು ಐಎಂಡಿ ನೀಡಿದೆ. ಈ ಎರಡು ರಾಜ್ಯಗಳಲ್ಲಿ ಮಳೆಯಾದರೆ ನಂತರ ನಿಧಾನವಾಗಿ ಇದರ ಪರಿಣಾಮದಿಂದ ಕರಾವಳಿ ಭಾಗದಲ್ಲೂ ತುಂತುರು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮೂಲಗಳು ತಿಳಿಸಿವೆ.
Rising temperature in karnataka and coastal regions, viral infections spread, safety alert by weather department.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm