ಬ್ರೇಕಿಂಗ್ ನ್ಯೂಸ್
07-03-23 12:37 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.6 : ಬೇಸಿಗೆ ಇನ್ನೂ ಪ್ರಖರವಾಗುವ ಮುನ್ನವೇ ರಾಜ್ಯ ಹಾಗೂ ರಾಜ್ಯಧಾನಿಯಲ್ಲಿ ಉಷ್ಣಾಂಶ ಹೆಚ್ಚಾಗಿದ್ದು, ಬಿಸಿಗಾಳಿಯ ಅಲೆಗಳು ಕಂಡುಬಂದಿವೆ.
ಹೀಗಾಗಿ ಆರೋಗ್ಯದ ಬಗ್ಗೆ ಎಲ್ಲರೂ ಸಾಕಷ್ಟು ಮುನ್ನೆಚ್ಚರಿಕೆ ವಹಿಸಲು ಆರೋಗ್ಯ ಇಲಾಖೆ ಸೂಚನೆ ನೀಡಿದೆ.
ಅಧಿಕ ಉಷ್ಣಾಂಶದಿಂದ ನಾನಾ ರೀತಿಯ ಅನಾರೋಗ್ಯ ಪರಿಸ್ಥಿತಿಗಳು ಸಂಭವಿಸುವ ಸಾಧ್ಯತೆ ಇದೆ. ಅದರಲ್ಲೂ ವೃದ್ಧರು, ಮಕ್ಕಳು, ದುರ್ಬಲ ಆರೋಗ್ಯವುಳ್ಳವರು ಇನ್ನಷ್ಟು ಎಚ್ಚರಿಕೆ ವಹಿಸಬೇಕು ಎಂದು ಆರೋಗ್ಯ ಇಲಾಖೆ ಹಲವು ಸಲಹೆಗಳನ್ನು ನೀಡಿ ಸುತ್ತೋಲೆ ಹೊರಡಿಸಿದೆ.
ರಾಜಧಾನಿಯಲ್ಲಿ ಕಳೆದ ಎರಡು ದಿನಗಳಿಂದ ಬೇಸಿಗೆಯ ಧಗೆ ಉಲ್ಬಣಿಸಿದೆ. ಉಷ್ಣಾಂಶವು ಗರಿಷ್ಠ 32 ಡಿಗ್ರಿ ಸೆಲ್ಸಿಯಸ್ ತಲುಪಿದೆ. ಇಲ್ಲಿ ಮುಂದಿನ 48 ಗಂಟೆಗಳಲ್ಲಿ ಮೇಲ್ಮೈ ಬಿಸಿ ಗಾಳಿ ಬೀಸುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಈ ಮುನ್ನೆಚ್ಚರಿಕೆಗಳನ್ನು ಪಾಲಿಸಿ:
ಬಾಯಾರಿಕೆ ಇಲ್ಲದಿದ್ದರೂ ಪದೇ ಪದೆ ನೀರು ಕುಡಿಯಬೇಕು. ಪ್ರಯಾಣ ಸಮಯದಲ್ಲೂ ನೀರು ತೆಗೆದುಕೊಂಡು ಹೋಗಬೇಕು.ದೇಹವು ನಿರ್ಜಲೀಕರಣಗೊಳ್ಳಲು ಬಿಡಬಾರದು.
ರಾಜ್ಯದಲ್ಲಿ ಬಿಸಿಲು ಬೇಗೆ ಹೆಚ್ಚುತ್ತಿದ್ದಂತೆ ಋುತುಮಾನದ ಕಾಯಿಲೆಗಳಾದ ಕಾಲರಾ, ವಿಷಮಶೀತ ಜ್ವರ, ಕಣ್ಣಿನ ತೊಂದರೆ, ವೈರಲ್ ಸೋಂಕು, ನಿರ್ಜಲೀಕರಣ, ಹೊಟ್ಟೆ ನೋವು, ಡೆಂಗೆ, ಚಿಕನ್ ಫಾಕ್ಸ್, ಬಿಸಿನಿಲಿಂದ ತಲೆ ಸುತ್ತು, ಮೂಗಿನಲ್ಲಿ ರಕ್ತ ಸುರಿಯುವುದು, ಅತಿಯಾದ ಸೂರ್ಯಕಿರಣಗಳಿಂದ ಚರ್ಮ ಸಮಸ್ಯೆಗಳು ಹೆಚ್ಚಾಗಿ ಜನರನ್ನು ಕಾಡುತ್ತಿವೆ. ಈ ಹಿನ್ನೆಲೆಯಲ್ಲಿ ರೋಗ ನಿಯಂತ್ರಣಕ್ಕೆ ಸರಕಾರಿ ಆರೋಗ್ಯ ಕೇಂದ್ರಗಳಲ್ಲಿ ಕ್ಲಿನಿಕಲ್ ಮತ್ತು ಎನರ್ಜಿ ಆಡಿಟಿಂಗ್ ಮಾಡಲು ರಾಜ್ಯ ತಾಂತ್ರಿಕ ಸಲಹಾ ಸಮಿತಿಯು (ಟಿಎಸಿ) ಆರೋಗ್ಯ ಇಲಾಖೆಗೆ ಶಿಫಾರಸು ಮಾಡಿದೆ.
ಕರಾವಳಿಯಲ್ಲಿ ಮಳೆ ಸಾಧ್ಯತೆ:
ಕರಾವಳಿಯಲ್ಲಿ ಮಳೆ ಬರುವ ಸಾಧ್ಯತೆ ಕೂಡ ಜಾಸ್ತಿಯಾಗಿದೆ. ಈಗಾಗಲೇ ಗುಜರಾತ್ನಲ್ಲಿ ಮಳೆಯ ಸೂಚನೆ ನೀಡಲಾಗಿದೆ. ಭಾನುವಾರದಿಂದ ಮಹಾರಾಷ್ಟ್ರದಲ್ಲೂ ಮಳೆ ನಿರೀಕ್ಷೆಯನ್ನು ಐಎಂಡಿ ನೀಡಿದೆ. ಈ ಎರಡು ರಾಜ್ಯಗಳಲ್ಲಿ ಮಳೆಯಾದರೆ ನಂತರ ನಿಧಾನವಾಗಿ ಇದರ ಪರಿಣಾಮದಿಂದ ಕರಾವಳಿ ಭಾಗದಲ್ಲೂ ತುಂತುರು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮೂಲಗಳು ತಿಳಿಸಿವೆ.
Rising temperature in karnataka and coastal regions, viral infections spread, safety alert by weather department.
15-01-26 05:56 pm
HK News Desk
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
15-01-26 10:24 pm
Mangalore Correspondent
ಗೋ ಸೇವೆಗೆ ಜನಸಾಮಾನ್ಯರು ಕೊಡುಗೆ ನೀಡಲು ವೇದಿಕೆ ; ಕ...
15-01-26 10:07 pm
ದಕ್ಷಿಣ ಕನ್ನಡದ ಸರ್ಕಾರಿ ಶಾಲೆಗಳಿಗೆ ಇಸ್ರೇಲ್ ಡಿಜಿ...
15-01-26 09:04 pm
ಮನರೇಗಾ ಜಾರಿಗೆ ಒತ್ತಾಯಿಸಿ ಸುಳ್ಯದಿಂದ ಮುಲ್ಕಿಗೆ ಪಾ...
15-01-26 08:12 pm
ಜ.18ರಂದು ಮಂಗಳೂರಿನಲ್ಲಿ ಪ್ರಪ್ರಥಮ ಜಾಗತಿಕ ಬಿಲ್ಲವರ...
15-01-26 04:01 pm
15-01-26 11:07 pm
Bangalore Correspondent
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm