ಬ್ರೇಕಿಂಗ್ ನ್ಯೂಸ್
08-03-23 03:22 pm HK News Desk ಕರ್ನಾಟಕ
ಶಿವಮೊಗ್ಗ, ಮಾ.8 : ಮಂಗಳೂರು ಕುಕ್ಕರ್ ಬಾಂಬ್ ಬ್ಲಾಸ್ಟ್ ಪ್ರಕರಣದ ಪ್ರಮುಖ ಆರೋಪಿ ಮಹಮ್ಮದ್ ಶಾರೀಕ್ ನನ್ನು ಎನ್ಐಎ ಅಧಿಕಾರಿಗಳು ಮತ್ತು ಪೊಲೀಸರು ಶಿವಮೊಗ್ಗಕ್ಕೆ ಕರೆತಂದು ಸ್ಥಳ ಮಹಜರು ನಡೆಸಿದ್ದಾರೆ.
ತೀರ್ಥಹಳ್ಳಿ ಮತ್ತು ಶಿವಮೊಗ್ಗ ಆಸುಪಾಸಿನಲ್ಲಿ ಬಾಂಬ್ ಬ್ಲಾಸ್ಟ್ ಟ್ರಯಲ್ ಮಾಡಿದ್ದ ಪ್ರಕರಣದಲ್ಲಿಯೂ ಶಾರೀಕ್ ಆರೋಪಿಯಾಗಿದ್ದು ಆ ಹಿನ್ನೆಲೆಯಲ್ಲೂ ವಿಚಾರಣೆ ನಡೆಸಲಾಗುತ್ತಿದೆ. ತೀರ್ಥಹಳ್ಳಿ ಸೊಪ್ಪುಗುಡ್ಡೆ ಮೂಲದ ಶಾರೀಕ್ ಕುಕ್ಕರ್ ಬಾಂಬ್ ಸ್ಫೋಟದಲ್ಲಿ ಗಂಭೀರ ಗಾಯಗೊಂಡು ಗುಣಮುಖನಾಗಿದ್ದಾನೆ. ಎರಡು ದಿನಗಳ ಹಿಂದೆ ಆತನನ್ನು ವಶಕ್ಕೆ ಪಡೆದಿರುವ ಎನ್ಐಎ ಅಧಿಕಾರಿಗಳು ಪ್ರಕರಣದ ವಿಚಾರಣೆಯನ್ನು ತೀವ್ರಗೊಳಿಸಿದ್ದಾರೆ.
ಶಿವಮೊಗ್ಗದ ಕೆಎಸ್ ಆರ್ ಟಿಸಿ ಬಸ್ ನಿಲ್ದಾಣದ ಎದುರು, ಶಾರೀಕ್ ನಿವಾಸದ ಬಳಿ ಒಯ್ದು ತನಿಖೆ ನಡೆಸಿದ್ದಾರೆ. ಈ ವೇಳೆ ಸೊಪ್ಪುಗುಡ್ಡೆಯ ಶಾರಿಕ್ ನಿವಾಸಕ್ಕೆ ಬೀಗ ಹಾಕಲಾಗಿತ್ತು. ಶಾರಿಕ್ ಚಿಕ್ಕಮ್ಮ ಬ್ರಹ್ಮಾವರಕ್ಕೆ ತೆರಳಿದ್ದರಿಂದ ಮನೆಯ ಎದುರೇ ಸ್ಥಳ ಮಹಜರು ನಡೆಸಿದ್ದಾರೆ. ಶಾರೀಕ್, ಮಾಝ್ ಮುನೀರ್, ಸಯ್ಯದ್ ಯಾಸೀನ್ ಸೇರಿಕೊಂಡು ತುಂಗಾ ತೀರದಲ್ಲಿ ಬಾಂಬ್ ಟ್ರಯಲ್ ಮಾಡಿರುವುದು ಕಳೆದ ಸೆಪ್ಟೆಂಬರ್ ತಿಂಗಳಲ್ಲಿ ಬಯಲಾಗಿತ್ತು. ಮಾಝ್, ಯಾಸಿನ್ ಪೊಲೀಸರ ಬಲೆಗೆ ಬಿದ್ದಿದ್ದರೆ, ಶಾರೀಕ್ ತಲೆಮರೆಸಿಕೊಂಡಿದ್ದ. ಆನಂತರ ಮೈಸೂರಿನಲ್ಲಿ ಹೆಸರು ಬದಲಿಸಿ ಅಡಗಿಕೊಂಡಿದ್ದ. ಅಲ್ಲಿಂದಲೇ ಕುಕ್ಕರ್ ಬಾಂಬ್ ತಯಾರಿಸಿ ಮಂಗಳೂರಿಗೆ ಹಿಡಿದು ತಂದಿದ್ದಾಗ ಬ್ಲಾಸ್ಟ್ ಆಗಿತ್ತು. ಹಾಗಾಗಿ ಬಾಂಬ್ ಟ್ರಯಲ್ ಮಾಡಿದ್ದ ಜಾಗಕ್ಕೆ ಶಾರೀಕ್ ನನ್ನು ಶಿವಮೊಗ್ಗ ಪೊಲೀಸರು ಕರೆದೊಯ್ದು ತನಿಖೆ ನಡೆಸಿದ್ದಾರೆ.
Cooker blast case, NIA officers take Bomber Mohammed Shariq to Shivamogga for spot Mahazar.
13-09-25 10:19 am
HK News Desk
Shikaripura Bike Accident: ಬೈಕ್ಗೆ ಡಿಕ್ಕಿ ಹೊಡ...
12-09-25 08:26 pm
Yatnal, Maddur: ರಾಜ್ಯದಲ್ಲಿ ಹೊಸ ಹಿಂದು ಪಾರ್ಟಿ ಕ...
12-09-25 03:04 pm
ಸಾಹಸಸಿಂಹ ವಿಷ್ಣುವರ್ಧನ್, ಹಿರಿಯ ನಟಿ ಬಿ.ಸರೋಜಾದೇವಿ...
11-09-25 10:11 pm
ಈದ್ ಮೆರವಣಿಗೆ : ಶಿವಮೊಗ್ಗದಲ್ಲಿ ಪಾಕಿಸ್ತಾನ್ ಜಿಂದಾ...
09-09-25 10:52 pm
12-09-25 11:33 am
HK News Desk
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
12-09-25 10:58 pm
Mangalore Correspondent
Mahesh Vikram Hegde Arrested, Post Card Kanna...
12-09-25 09:25 pm
Sameer Md, Dharmasthala: ವಿದೇಶದಿಂದ ಫಂಡ್ ಬಂದಿ...
12-09-25 08:53 pm
RTI Dharmasthala Hostels, Mahesh Thimarodi: ಧ...
12-09-25 07:43 pm
Mangalore Road Accident, Pothole, Survery: ರಸ...
12-09-25 05:34 pm
13-09-25 11:36 am
Mangalore Correspondent
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm
Mangalore Police, Arrest: ಉರ್ವಾದಲ್ಲಿ ಪೊಲೀಸ್ ಕ...
11-09-25 09:13 pm