ಬ್ರೇಕಿಂಗ್ ನ್ಯೂಸ್
08-03-23 03:22 pm HK News Desk ಕರ್ನಾಟಕ
ಶಿವಮೊಗ್ಗ, ಮಾ.8 : ಮಂಗಳೂರು ಕುಕ್ಕರ್ ಬಾಂಬ್ ಬ್ಲಾಸ್ಟ್ ಪ್ರಕರಣದ ಪ್ರಮುಖ ಆರೋಪಿ ಮಹಮ್ಮದ್ ಶಾರೀಕ್ ನನ್ನು ಎನ್ಐಎ ಅಧಿಕಾರಿಗಳು ಮತ್ತು ಪೊಲೀಸರು ಶಿವಮೊಗ್ಗಕ್ಕೆ ಕರೆತಂದು ಸ್ಥಳ ಮಹಜರು ನಡೆಸಿದ್ದಾರೆ.
ತೀರ್ಥಹಳ್ಳಿ ಮತ್ತು ಶಿವಮೊಗ್ಗ ಆಸುಪಾಸಿನಲ್ಲಿ ಬಾಂಬ್ ಬ್ಲಾಸ್ಟ್ ಟ್ರಯಲ್ ಮಾಡಿದ್ದ ಪ್ರಕರಣದಲ್ಲಿಯೂ ಶಾರೀಕ್ ಆರೋಪಿಯಾಗಿದ್ದು ಆ ಹಿನ್ನೆಲೆಯಲ್ಲೂ ವಿಚಾರಣೆ ನಡೆಸಲಾಗುತ್ತಿದೆ. ತೀರ್ಥಹಳ್ಳಿ ಸೊಪ್ಪುಗುಡ್ಡೆ ಮೂಲದ ಶಾರೀಕ್ ಕುಕ್ಕರ್ ಬಾಂಬ್ ಸ್ಫೋಟದಲ್ಲಿ ಗಂಭೀರ ಗಾಯಗೊಂಡು ಗುಣಮುಖನಾಗಿದ್ದಾನೆ. ಎರಡು ದಿನಗಳ ಹಿಂದೆ ಆತನನ್ನು ವಶಕ್ಕೆ ಪಡೆದಿರುವ ಎನ್ಐಎ ಅಧಿಕಾರಿಗಳು ಪ್ರಕರಣದ ವಿಚಾರಣೆಯನ್ನು ತೀವ್ರಗೊಳಿಸಿದ್ದಾರೆ.
ಶಿವಮೊಗ್ಗದ ಕೆಎಸ್ ಆರ್ ಟಿಸಿ ಬಸ್ ನಿಲ್ದಾಣದ ಎದುರು, ಶಾರೀಕ್ ನಿವಾಸದ ಬಳಿ ಒಯ್ದು ತನಿಖೆ ನಡೆಸಿದ್ದಾರೆ. ಈ ವೇಳೆ ಸೊಪ್ಪುಗುಡ್ಡೆಯ ಶಾರಿಕ್ ನಿವಾಸಕ್ಕೆ ಬೀಗ ಹಾಕಲಾಗಿತ್ತು. ಶಾರಿಕ್ ಚಿಕ್ಕಮ್ಮ ಬ್ರಹ್ಮಾವರಕ್ಕೆ ತೆರಳಿದ್ದರಿಂದ ಮನೆಯ ಎದುರೇ ಸ್ಥಳ ಮಹಜರು ನಡೆಸಿದ್ದಾರೆ. ಶಾರೀಕ್, ಮಾಝ್ ಮುನೀರ್, ಸಯ್ಯದ್ ಯಾಸೀನ್ ಸೇರಿಕೊಂಡು ತುಂಗಾ ತೀರದಲ್ಲಿ ಬಾಂಬ್ ಟ್ರಯಲ್ ಮಾಡಿರುವುದು ಕಳೆದ ಸೆಪ್ಟೆಂಬರ್ ತಿಂಗಳಲ್ಲಿ ಬಯಲಾಗಿತ್ತು. ಮಾಝ್, ಯಾಸಿನ್ ಪೊಲೀಸರ ಬಲೆಗೆ ಬಿದ್ದಿದ್ದರೆ, ಶಾರೀಕ್ ತಲೆಮರೆಸಿಕೊಂಡಿದ್ದ. ಆನಂತರ ಮೈಸೂರಿನಲ್ಲಿ ಹೆಸರು ಬದಲಿಸಿ ಅಡಗಿಕೊಂಡಿದ್ದ. ಅಲ್ಲಿಂದಲೇ ಕುಕ್ಕರ್ ಬಾಂಬ್ ತಯಾರಿಸಿ ಮಂಗಳೂರಿಗೆ ಹಿಡಿದು ತಂದಿದ್ದಾಗ ಬ್ಲಾಸ್ಟ್ ಆಗಿತ್ತು. ಹಾಗಾಗಿ ಬಾಂಬ್ ಟ್ರಯಲ್ ಮಾಡಿದ್ದ ಜಾಗಕ್ಕೆ ಶಾರೀಕ್ ನನ್ನು ಶಿವಮೊಗ್ಗ ಪೊಲೀಸರು ಕರೆದೊಯ್ದು ತನಿಖೆ ನಡೆಸಿದ್ದಾರೆ.
Cooker blast case, NIA officers take Bomber Mohammed Shariq to Shivamogga for spot Mahazar.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm