ಬ್ರೇಕಿಂಗ್ ನ್ಯೂಸ್
08-03-23 03:22 pm HK News Desk ಕರ್ನಾಟಕ
ಶಿವಮೊಗ್ಗ, ಮಾ.8 : ಮಂಗಳೂರು ಕುಕ್ಕರ್ ಬಾಂಬ್ ಬ್ಲಾಸ್ಟ್ ಪ್ರಕರಣದ ಪ್ರಮುಖ ಆರೋಪಿ ಮಹಮ್ಮದ್ ಶಾರೀಕ್ ನನ್ನು ಎನ್ಐಎ ಅಧಿಕಾರಿಗಳು ಮತ್ತು ಪೊಲೀಸರು ಶಿವಮೊಗ್ಗಕ್ಕೆ ಕರೆತಂದು ಸ್ಥಳ ಮಹಜರು ನಡೆಸಿದ್ದಾರೆ.
ತೀರ್ಥಹಳ್ಳಿ ಮತ್ತು ಶಿವಮೊಗ್ಗ ಆಸುಪಾಸಿನಲ್ಲಿ ಬಾಂಬ್ ಬ್ಲಾಸ್ಟ್ ಟ್ರಯಲ್ ಮಾಡಿದ್ದ ಪ್ರಕರಣದಲ್ಲಿಯೂ ಶಾರೀಕ್ ಆರೋಪಿಯಾಗಿದ್ದು ಆ ಹಿನ್ನೆಲೆಯಲ್ಲೂ ವಿಚಾರಣೆ ನಡೆಸಲಾಗುತ್ತಿದೆ. ತೀರ್ಥಹಳ್ಳಿ ಸೊಪ್ಪುಗುಡ್ಡೆ ಮೂಲದ ಶಾರೀಕ್ ಕುಕ್ಕರ್ ಬಾಂಬ್ ಸ್ಫೋಟದಲ್ಲಿ ಗಂಭೀರ ಗಾಯಗೊಂಡು ಗುಣಮುಖನಾಗಿದ್ದಾನೆ. ಎರಡು ದಿನಗಳ ಹಿಂದೆ ಆತನನ್ನು ವಶಕ್ಕೆ ಪಡೆದಿರುವ ಎನ್ಐಎ ಅಧಿಕಾರಿಗಳು ಪ್ರಕರಣದ ವಿಚಾರಣೆಯನ್ನು ತೀವ್ರಗೊಳಿಸಿದ್ದಾರೆ.
ಶಿವಮೊಗ್ಗದ ಕೆಎಸ್ ಆರ್ ಟಿಸಿ ಬಸ್ ನಿಲ್ದಾಣದ ಎದುರು, ಶಾರೀಕ್ ನಿವಾಸದ ಬಳಿ ಒಯ್ದು ತನಿಖೆ ನಡೆಸಿದ್ದಾರೆ. ಈ ವೇಳೆ ಸೊಪ್ಪುಗುಡ್ಡೆಯ ಶಾರಿಕ್ ನಿವಾಸಕ್ಕೆ ಬೀಗ ಹಾಕಲಾಗಿತ್ತು. ಶಾರಿಕ್ ಚಿಕ್ಕಮ್ಮ ಬ್ರಹ್ಮಾವರಕ್ಕೆ ತೆರಳಿದ್ದರಿಂದ ಮನೆಯ ಎದುರೇ ಸ್ಥಳ ಮಹಜರು ನಡೆಸಿದ್ದಾರೆ. ಶಾರೀಕ್, ಮಾಝ್ ಮುನೀರ್, ಸಯ್ಯದ್ ಯಾಸೀನ್ ಸೇರಿಕೊಂಡು ತುಂಗಾ ತೀರದಲ್ಲಿ ಬಾಂಬ್ ಟ್ರಯಲ್ ಮಾಡಿರುವುದು ಕಳೆದ ಸೆಪ್ಟೆಂಬರ್ ತಿಂಗಳಲ್ಲಿ ಬಯಲಾಗಿತ್ತು. ಮಾಝ್, ಯಾಸಿನ್ ಪೊಲೀಸರ ಬಲೆಗೆ ಬಿದ್ದಿದ್ದರೆ, ಶಾರೀಕ್ ತಲೆಮರೆಸಿಕೊಂಡಿದ್ದ. ಆನಂತರ ಮೈಸೂರಿನಲ್ಲಿ ಹೆಸರು ಬದಲಿಸಿ ಅಡಗಿಕೊಂಡಿದ್ದ. ಅಲ್ಲಿಂದಲೇ ಕುಕ್ಕರ್ ಬಾಂಬ್ ತಯಾರಿಸಿ ಮಂಗಳೂರಿಗೆ ಹಿಡಿದು ತಂದಿದ್ದಾಗ ಬ್ಲಾಸ್ಟ್ ಆಗಿತ್ತು. ಹಾಗಾಗಿ ಬಾಂಬ್ ಟ್ರಯಲ್ ಮಾಡಿದ್ದ ಜಾಗಕ್ಕೆ ಶಾರೀಕ್ ನನ್ನು ಶಿವಮೊಗ್ಗ ಪೊಲೀಸರು ಕರೆದೊಯ್ದು ತನಿಖೆ ನಡೆಸಿದ್ದಾರೆ.
Cooker blast case, NIA officers take Bomber Mohammed Shariq to Shivamogga for spot Mahazar.
22-06-26 08:18 pm
HK News Staffer
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
23-06-26 12:21 pm
HK News Staffer
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
23-06-26 03:18 pm
HK News Staffer
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
23-06-26 02:15 pm
HK News Staffer
ಮಗಳಿಗೆ ಬುದ್ಧಿ ಹೇಳಿದ್ದೇ ತಪ್ಪಾಯ್ತಾ ? ಲಿವ್-ಇನ್...
23-06-26 12:57 pm
ಅಕ್ರಮ ಪೊಲೀಸ್ ಕ್ಲಿಯರೆನ್ಸ್ ; ಮೂರೇ ದಿನದಲ್ಲಿ ಸಿಸಿ...
22-06-26 10:21 pm
ಉಡುಪಿಯಲ್ಲಿ ಮಕ್ಕಳಿಲ್ಲದ ದಂಪತಿಗೆ ಮಗು ಮಾರಾಟ; ವೈದ್...
22-06-26 08:01 pm
ಹಂದಿ ಜ್ವರಕ್ಕೆ ಕಾರವಾರದ ವ್ಯಕ್ತಿ ಮಂಗಳೂರಿನಲ್ಲಿ ಬಲ...
22-06-26 07:58 pm