ಬ್ರೇಕಿಂಗ್ ನ್ಯೂಸ್
08-03-23 03:22 pm HK News Desk ಕರ್ನಾಟಕ
ಶಿವಮೊಗ್ಗ, ಮಾ.8 : ಮಂಗಳೂರು ಕುಕ್ಕರ್ ಬಾಂಬ್ ಬ್ಲಾಸ್ಟ್ ಪ್ರಕರಣದ ಪ್ರಮುಖ ಆರೋಪಿ ಮಹಮ್ಮದ್ ಶಾರೀಕ್ ನನ್ನು ಎನ್ಐಎ ಅಧಿಕಾರಿಗಳು ಮತ್ತು ಪೊಲೀಸರು ಶಿವಮೊಗ್ಗಕ್ಕೆ ಕರೆತಂದು ಸ್ಥಳ ಮಹಜರು ನಡೆಸಿದ್ದಾರೆ.
ತೀರ್ಥಹಳ್ಳಿ ಮತ್ತು ಶಿವಮೊಗ್ಗ ಆಸುಪಾಸಿನಲ್ಲಿ ಬಾಂಬ್ ಬ್ಲಾಸ್ಟ್ ಟ್ರಯಲ್ ಮಾಡಿದ್ದ ಪ್ರಕರಣದಲ್ಲಿಯೂ ಶಾರೀಕ್ ಆರೋಪಿಯಾಗಿದ್ದು ಆ ಹಿನ್ನೆಲೆಯಲ್ಲೂ ವಿಚಾರಣೆ ನಡೆಸಲಾಗುತ್ತಿದೆ. ತೀರ್ಥಹಳ್ಳಿ ಸೊಪ್ಪುಗುಡ್ಡೆ ಮೂಲದ ಶಾರೀಕ್ ಕುಕ್ಕರ್ ಬಾಂಬ್ ಸ್ಫೋಟದಲ್ಲಿ ಗಂಭೀರ ಗಾಯಗೊಂಡು ಗುಣಮುಖನಾಗಿದ್ದಾನೆ. ಎರಡು ದಿನಗಳ ಹಿಂದೆ ಆತನನ್ನು ವಶಕ್ಕೆ ಪಡೆದಿರುವ ಎನ್ಐಎ ಅಧಿಕಾರಿಗಳು ಪ್ರಕರಣದ ವಿಚಾರಣೆಯನ್ನು ತೀವ್ರಗೊಳಿಸಿದ್ದಾರೆ.
ಶಿವಮೊಗ್ಗದ ಕೆಎಸ್ ಆರ್ ಟಿಸಿ ಬಸ್ ನಿಲ್ದಾಣದ ಎದುರು, ಶಾರೀಕ್ ನಿವಾಸದ ಬಳಿ ಒಯ್ದು ತನಿಖೆ ನಡೆಸಿದ್ದಾರೆ. ಈ ವೇಳೆ ಸೊಪ್ಪುಗುಡ್ಡೆಯ ಶಾರಿಕ್ ನಿವಾಸಕ್ಕೆ ಬೀಗ ಹಾಕಲಾಗಿತ್ತು. ಶಾರಿಕ್ ಚಿಕ್ಕಮ್ಮ ಬ್ರಹ್ಮಾವರಕ್ಕೆ ತೆರಳಿದ್ದರಿಂದ ಮನೆಯ ಎದುರೇ ಸ್ಥಳ ಮಹಜರು ನಡೆಸಿದ್ದಾರೆ. ಶಾರೀಕ್, ಮಾಝ್ ಮುನೀರ್, ಸಯ್ಯದ್ ಯಾಸೀನ್ ಸೇರಿಕೊಂಡು ತುಂಗಾ ತೀರದಲ್ಲಿ ಬಾಂಬ್ ಟ್ರಯಲ್ ಮಾಡಿರುವುದು ಕಳೆದ ಸೆಪ್ಟೆಂಬರ್ ತಿಂಗಳಲ್ಲಿ ಬಯಲಾಗಿತ್ತು. ಮಾಝ್, ಯಾಸಿನ್ ಪೊಲೀಸರ ಬಲೆಗೆ ಬಿದ್ದಿದ್ದರೆ, ಶಾರೀಕ್ ತಲೆಮರೆಸಿಕೊಂಡಿದ್ದ. ಆನಂತರ ಮೈಸೂರಿನಲ್ಲಿ ಹೆಸರು ಬದಲಿಸಿ ಅಡಗಿಕೊಂಡಿದ್ದ. ಅಲ್ಲಿಂದಲೇ ಕುಕ್ಕರ್ ಬಾಂಬ್ ತಯಾರಿಸಿ ಮಂಗಳೂರಿಗೆ ಹಿಡಿದು ತಂದಿದ್ದಾಗ ಬ್ಲಾಸ್ಟ್ ಆಗಿತ್ತು. ಹಾಗಾಗಿ ಬಾಂಬ್ ಟ್ರಯಲ್ ಮಾಡಿದ್ದ ಜಾಗಕ್ಕೆ ಶಾರೀಕ್ ನನ್ನು ಶಿವಮೊಗ್ಗ ಪೊಲೀಸರು ಕರೆದೊಯ್ದು ತನಿಖೆ ನಡೆಸಿದ್ದಾರೆ.
Cooker blast case, NIA officers take Bomber Mohammed Shariq to Shivamogga for spot Mahazar.
15-01-26 05:56 pm
HK News Desk
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
15-01-26 10:24 pm
Mangalore Correspondent
ಗೋ ಸೇವೆಗೆ ಜನಸಾಮಾನ್ಯರು ಕೊಡುಗೆ ನೀಡಲು ವೇದಿಕೆ ; ಕ...
15-01-26 10:07 pm
ದಕ್ಷಿಣ ಕನ್ನಡದ ಸರ್ಕಾರಿ ಶಾಲೆಗಳಿಗೆ ಇಸ್ರೇಲ್ ಡಿಜಿ...
15-01-26 09:04 pm
ಮನರೇಗಾ ಜಾರಿಗೆ ಒತ್ತಾಯಿಸಿ ಸುಳ್ಯದಿಂದ ಮುಲ್ಕಿಗೆ ಪಾ...
15-01-26 08:12 pm
ಜ.18ರಂದು ಮಂಗಳೂರಿನಲ್ಲಿ ಪ್ರಪ್ರಥಮ ಜಾಗತಿಕ ಬಿಲ್ಲವರ...
15-01-26 04:01 pm
15-01-26 11:07 pm
Bangalore Correspondent
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm