ಬ್ರೇಕಿಂಗ್ ನ್ಯೂಸ್
23-10-20 12:28 pm Bangalore Correspondent ಕರ್ನಾಟಕ
ಬೆಂಗಳೂರು, ಅಕ್ಟೋಬರ್ 23: ಕೊನೆಗೂ ಪದವಿ ಮತ್ತು ಸ್ನಾತಕೋತ್ತರ ಕಾಲೇಜುಗಳನ್ನು ಆರಂಭಿಸಲು ರಾಜ್ಯ ಸರಕಾರ ಗ್ರೀನ್ ಸಿಗ್ನಲ್ ನೀಡಿದೆ. ಈ ಬಗ್ಗೆ ಶಿಕ್ಷಣ ಇಲಾಖೆ ಅಧಿಕಾರಿಗಳು, ಸಂಪುಟ ಸಚಿವರ ಜೊತೆ ಮುಖ್ಯಮಂತ್ರಿ ಯಡಿಯೂರಪ್ಪ ಮಹತ್ವದ ಸಭೆ ನಡೆಸಿದ್ದು, ನವೆಂಬರ್ 17ರಿಂದ ಕಾಲೇಜು ಆರಂಭಿಸಲು ನಿರ್ಧಾರಕ್ಕೆ ಬಂದಿದ್ದಾರೆ.
ಈ ಬಗ್ಗೆ ಉನ್ನತ ಶಿಕ್ಷಣ ಸಚಿವರೂ ಮತ್ತು ಡಿಸಿಎಂ ಆಗಿರುವ ಡಾ.ಅಶ್ವತ್ಥ ನಾರಾಯಣ, ಮಾಧ್ಯಮಕ್ಕೆ ಮಾಹಿತಿ ನೀಡಿದ್ದು, ಕೋವಿಡ್ ನಿಯಮ ಮತ್ತು ಮಾರ್ಗಸೂಚಿಗಳನ್ನು ಪಾಲಿಸಿಕೊಂಡೇ ಪದವಿ, ಇಂಜಿನಿಯರಿಂಗ್, ಡಿಪ್ಲೊಮಾ ಕಾಲೇಜು ನಡೆಸಲು ಅನುಮತಿ ನೀಡಲಾಗಿದೆ ಎಂದು ಹೇಳಿದ್ದಾರೆ.

ಮೊದಲಿಗೆ ಪದವಿ ಮತ್ತು ಸ್ನಾತಕೋತ್ತರ ಕಾಲೇಜುಗಳನ್ನು ಆರಂಭಿಸಲು ರಾಜ್ಯ ಸರಕಾರ ಗ್ರೀನ್ ಸಿಗ್ನಲ್ ನೀಡಿದೆ. ಒಟ್ಟು ಪಠ್ಯದಲ್ಲಿ 33 ಶೇಕಡಾದಷ್ಟು ಪಠ್ಯವನ್ನು ಕಡಿತ ಮಾಡಲು ಶಿಕ್ಷಣ ಇಲಾಖೆ ಅಧಿಕಾರಿಗಳು ಪ್ರಸ್ತಾಪಿಸಿದ್ದಾರೆ ಎನ್ನಲಾಗುತ್ತಿದೆ. ಆದರೆ, ಪ್ರಥಮ ಮತ್ತು ದ್ವಿತೀಯ ಪಿಯು ವಿಭಾಗದಲ್ಲಿ ವಿಜ್ಞಾನ ವಿಭಾಗದ ಫಿಸಿಕ್ಸ್ , ಕೆಮಿಸ್ಟ್ರಿ ಮತ್ತು ಗಣಿತ ಶಾಸ್ತ್ರ ವಿಷಯದಲ್ಲಿ ಪಠ್ಯ ಕಡಿತ ಮಾಡುವುದು ಬೇಡ ಎಂದು ಪಠ್ಯ ಪುಸ್ತಕ ರಚನಾ ಸಮಿತಿಯ ಸದಸ್ಯರು ಪ್ರಸ್ತಾಪ ಇಟ್ಟಿದ್ದಾರೆ. ಕಾಲೇಜು ಆರಂಭ ವಿಚಾರದಲ್ಲಿ ಯಾವೆಲ್ಲ ಸೂಚನೆ ಪಾಲಿಸಬೇಕು ಮತ್ತು ಕಲಿಕಾ ಪಠ್ಯಗಳ ಬಗ್ಗೆ ಇನ್ನೆರಡು ದಿನದಲ್ಲಿ ರಾಜ್ಯ ಸರಕಾರದಿಂದ ಅಧಿಕೃತ ಆದೇಶ ಹೊರಬೀಳುವ ಸಾಧ್ಯತೆಯಿದೆ.
ಕಳೆದ ಏಳು ತಿಂಗಳ ಬಳಿಕ ಕಾಲೇಜು ಆರಂಭಕ್ಕೆ ಗ್ರೀನ್ ಸಿಗ್ನಲ್ ಸಿಕ್ಕಂತಾಗಿದೆ. ಮಾರ್ಚ್ 22ರಂದು ಲಾಕ್ಡೌನ್ ಘೋಷಣೆಯಾದ ಬಳಿಕ ಶಾಲೆ, ಕಾಲೇಜುಗಳು ಸ್ಥಗಿತಗೊಂಡಿದ್ದವು. ಆನಂತರ ಕೆಲವು ವಿಭಾಗದ ಪರೀಕ್ಷೆಗಳನ್ನೂ ಅರ್ಧಕ್ಕೆ ಕಡಿತಗೊಳಿಸಲಾಗಿತ್ತು. ಪದವಿ ಮತ್ತು ಸ್ನಾತಕೋತ್ತರ ವಿಭಾಗಗಳಿಗೆ ಕಳೆದ ತಿಂಗಳಷ್ಟೇ ಅಂತಿಮ ಪರೀಕ್ಷೆಗಳನ್ನು ಪೂರ್ತಿ ಮಾಡಲಾಗಿತ್ತು. ಈಗ ಕಾಲೇಜುಗಳಲ್ಲಿ ಅಡ್ಮಿಶನ್ ಪ್ರಕ್ರಿಯೆ ನಡೆಯುತ್ತಿದ್ದು, ಮೊದಲಿಗೆ ಉನ್ನತ ಶಿಕ್ಷಣ ಕಾಲೇಜುಗಳನ್ನು ಆರಂಭಿಸಲು ರಾಜ್ಯ ಸರಕಾರ ನಿರ್ಧರಿಸಿದೆ. ನವೆಂಬರ್ ತಿಂಗಳಾಂತ್ಯಕ್ಕೆ ಡಿಸೆಂಬರ್ ನಲ್ಲಿ ಪಿಯು ಮತ್ತು ಪ್ರೌಢಶಾಲೆ ಆರಂಭಗೊಳ್ಳುವ ಸಾಧ್ಯತೆಯಿದೆ.
19-06-26 04:18 pm
HK News Staffer
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
ಆರೆಸ್ಸೆಸ್ ನೋಂದಣಿ ; ಪ್ರಿಯಾಂಕ ಖರ್ಗೆ ಪತ್ರಕ್ಕೆ ಸಾ...
18-06-26 01:25 pm
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
19-06-26 09:05 pm
HK News Staffer
ಬೆಂಗಳೂರು -ಮಂಗಳೂರು 5 ಗಂಟೆ ಪ್ರಯಾಣದ ಕನಸಿಗೆ ಬ್ರೇಕ...
19-06-26 07:48 pm
ಬಂಗ್ಲೆಗುಡ್ಡೆ ಅಸ್ಥಿಪಂಜರಗಳ ಗುರುತು ಪತ್ತೆಗಿಳಿದ ಎಸ...
19-06-26 03:31 pm
Mangalore police suspend, Bajpe: ಅಸ್ಸಾಂ ಕಾರ್ಮ...
19-06-26 12:24 pm
Bejai, Kadri Water Issue: ಬಿಜೈ, ಕದ್ರಿಗೆ ಕಲುಷಿ...
18-06-26 12:33 pm
19-06-26 09:07 pm
HK News Staffer
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm
Bhatkal News: ಭಟ್ಕಳದಲ್ಲಿ ಮತ್ತೆ ಕೋಮು ಸಂಘರ್ಷ ;...
18-06-26 01:20 pm
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm