ಬ್ರೇಕಿಂಗ್ ನ್ಯೂಸ್
23-10-20 12:28 pm Bangalore Correspondent ಕರ್ನಾಟಕ
ಬೆಂಗಳೂರು, ಅಕ್ಟೋಬರ್ 23: ಕೊನೆಗೂ ಪದವಿ ಮತ್ತು ಸ್ನಾತಕೋತ್ತರ ಕಾಲೇಜುಗಳನ್ನು ಆರಂಭಿಸಲು ರಾಜ್ಯ ಸರಕಾರ ಗ್ರೀನ್ ಸಿಗ್ನಲ್ ನೀಡಿದೆ. ಈ ಬಗ್ಗೆ ಶಿಕ್ಷಣ ಇಲಾಖೆ ಅಧಿಕಾರಿಗಳು, ಸಂಪುಟ ಸಚಿವರ ಜೊತೆ ಮುಖ್ಯಮಂತ್ರಿ ಯಡಿಯೂರಪ್ಪ ಮಹತ್ವದ ಸಭೆ ನಡೆಸಿದ್ದು, ನವೆಂಬರ್ 17ರಿಂದ ಕಾಲೇಜು ಆರಂಭಿಸಲು ನಿರ್ಧಾರಕ್ಕೆ ಬಂದಿದ್ದಾರೆ.
ಈ ಬಗ್ಗೆ ಉನ್ನತ ಶಿಕ್ಷಣ ಸಚಿವರೂ ಮತ್ತು ಡಿಸಿಎಂ ಆಗಿರುವ ಡಾ.ಅಶ್ವತ್ಥ ನಾರಾಯಣ, ಮಾಧ್ಯಮಕ್ಕೆ ಮಾಹಿತಿ ನೀಡಿದ್ದು, ಕೋವಿಡ್ ನಿಯಮ ಮತ್ತು ಮಾರ್ಗಸೂಚಿಗಳನ್ನು ಪಾಲಿಸಿಕೊಂಡೇ ಪದವಿ, ಇಂಜಿನಿಯರಿಂಗ್, ಡಿಪ್ಲೊಮಾ ಕಾಲೇಜು ನಡೆಸಲು ಅನುಮತಿ ನೀಡಲಾಗಿದೆ ಎಂದು ಹೇಳಿದ್ದಾರೆ.

ಮೊದಲಿಗೆ ಪದವಿ ಮತ್ತು ಸ್ನಾತಕೋತ್ತರ ಕಾಲೇಜುಗಳನ್ನು ಆರಂಭಿಸಲು ರಾಜ್ಯ ಸರಕಾರ ಗ್ರೀನ್ ಸಿಗ್ನಲ್ ನೀಡಿದೆ. ಒಟ್ಟು ಪಠ್ಯದಲ್ಲಿ 33 ಶೇಕಡಾದಷ್ಟು ಪಠ್ಯವನ್ನು ಕಡಿತ ಮಾಡಲು ಶಿಕ್ಷಣ ಇಲಾಖೆ ಅಧಿಕಾರಿಗಳು ಪ್ರಸ್ತಾಪಿಸಿದ್ದಾರೆ ಎನ್ನಲಾಗುತ್ತಿದೆ. ಆದರೆ, ಪ್ರಥಮ ಮತ್ತು ದ್ವಿತೀಯ ಪಿಯು ವಿಭಾಗದಲ್ಲಿ ವಿಜ್ಞಾನ ವಿಭಾಗದ ಫಿಸಿಕ್ಸ್ , ಕೆಮಿಸ್ಟ್ರಿ ಮತ್ತು ಗಣಿತ ಶಾಸ್ತ್ರ ವಿಷಯದಲ್ಲಿ ಪಠ್ಯ ಕಡಿತ ಮಾಡುವುದು ಬೇಡ ಎಂದು ಪಠ್ಯ ಪುಸ್ತಕ ರಚನಾ ಸಮಿತಿಯ ಸದಸ್ಯರು ಪ್ರಸ್ತಾಪ ಇಟ್ಟಿದ್ದಾರೆ. ಕಾಲೇಜು ಆರಂಭ ವಿಚಾರದಲ್ಲಿ ಯಾವೆಲ್ಲ ಸೂಚನೆ ಪಾಲಿಸಬೇಕು ಮತ್ತು ಕಲಿಕಾ ಪಠ್ಯಗಳ ಬಗ್ಗೆ ಇನ್ನೆರಡು ದಿನದಲ್ಲಿ ರಾಜ್ಯ ಸರಕಾರದಿಂದ ಅಧಿಕೃತ ಆದೇಶ ಹೊರಬೀಳುವ ಸಾಧ್ಯತೆಯಿದೆ.
ಕಳೆದ ಏಳು ತಿಂಗಳ ಬಳಿಕ ಕಾಲೇಜು ಆರಂಭಕ್ಕೆ ಗ್ರೀನ್ ಸಿಗ್ನಲ್ ಸಿಕ್ಕಂತಾಗಿದೆ. ಮಾರ್ಚ್ 22ರಂದು ಲಾಕ್ಡೌನ್ ಘೋಷಣೆಯಾದ ಬಳಿಕ ಶಾಲೆ, ಕಾಲೇಜುಗಳು ಸ್ಥಗಿತಗೊಂಡಿದ್ದವು. ಆನಂತರ ಕೆಲವು ವಿಭಾಗದ ಪರೀಕ್ಷೆಗಳನ್ನೂ ಅರ್ಧಕ್ಕೆ ಕಡಿತಗೊಳಿಸಲಾಗಿತ್ತು. ಪದವಿ ಮತ್ತು ಸ್ನಾತಕೋತ್ತರ ವಿಭಾಗಗಳಿಗೆ ಕಳೆದ ತಿಂಗಳಷ್ಟೇ ಅಂತಿಮ ಪರೀಕ್ಷೆಗಳನ್ನು ಪೂರ್ತಿ ಮಾಡಲಾಗಿತ್ತು. ಈಗ ಕಾಲೇಜುಗಳಲ್ಲಿ ಅಡ್ಮಿಶನ್ ಪ್ರಕ್ರಿಯೆ ನಡೆಯುತ್ತಿದ್ದು, ಮೊದಲಿಗೆ ಉನ್ನತ ಶಿಕ್ಷಣ ಕಾಲೇಜುಗಳನ್ನು ಆರಂಭಿಸಲು ರಾಜ್ಯ ಸರಕಾರ ನಿರ್ಧರಿಸಿದೆ. ನವೆಂಬರ್ ತಿಂಗಳಾಂತ್ಯಕ್ಕೆ ಡಿಸೆಂಬರ್ ನಲ್ಲಿ ಪಿಯು ಮತ್ತು ಪ್ರೌಢಶಾಲೆ ಆರಂಭಗೊಳ್ಳುವ ಸಾಧ್ಯತೆಯಿದೆ.
16-03-26 05:52 pm
HK News Staffer
ಐಎಎಸ್ ಅಧಿಕಾರಿಯೆಂದು ಪೋಸು ಕೊಟ್ಟು ಜನಸಾಮಾನ್ಯರಿಗೆ,...
16-03-26 03:36 pm
Chitradurga Accident: ಚಿತ್ರದುರ್ಗದಲ್ಲಿ ಭೀಕರ ಅಪ...
15-03-26 04:27 pm
ಲಿವರ್ ಸಿರೋಸಿಸ್ ಕಾಯಿಲೆಗೆ ತುತ್ತಾಗಿದ್ದ ತಂದೆ ; ತನ...
14-03-26 10:14 pm
ಮಲೆನಾಡಿಗೆ ಇಂಡಿಗೋ ಆಘಾತ ; ವಿಮಾನ ದುರಂತ ಹಿನ್ನೆಲೆ,...
13-03-26 12:09 pm
16-03-26 09:30 pm
HK News Staffer
ಇರಾನ್ ದಾಳಿ ಬಗ್ಗೆ ಎಐ ವಿಡಿಯೋ ಆಧರಿತ ಸುಳ್ಳು ಸುದ್ದ...
16-03-26 02:44 pm
ಯುಪಿಎಸ್ಸಿ ಪಾಸ್, ಐಎಎಸ್ ಅಧಿಕಾರಿ ಆಗುತ್ತೇನೆಂದು ನಂ...
16-03-26 12:38 pm
ಒಡಿಶಾದ ಕಟಕ್ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ ; I...
16-03-26 12:34 pm
ಇರಾನ್ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ರಷ್ಯಾಕ್ಕೆ ;...
15-03-26 05:37 pm
16-03-26 09:48 pm
Mangaluru Staffer
Moodbidri Inspector Sandesh, Police: ಮೂಡುಬಿದ್...
16-03-26 07:20 pm
Gas Tanker Accident: ಕಟಪಾಡಿ ಹೆದ್ದಾರಿಯಲ್ಲಿ ಗ್ಯ...
16-03-26 02:46 pm
Besant Evening College, Blood Donation: ಬೆಸೆಂ...
15-03-26 09:10 pm
Udupi Accident: ತಾಯಿ-ಮಗ ತೆರಳುತ್ತಿದ್ದ ಸ್ಕೂಟರ್...
14-03-26 09:26 pm
15-03-26 12:49 pm
HK News Desk
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am