ಬ್ರೇಕಿಂಗ್ ನ್ಯೂಸ್
09-03-23 04:51 pm HK News Desk ಕರ್ನಾಟಕ
ಯಾದಗಿರಿ, ಮಾ.9: ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಭ್ರಷ್ಟಾಚಾರ ಪ್ರಕರಣ ನಮ್ಮ ಪಕ್ಷಕ್ಕೆ ಮುಜುಗರ ತಂದಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಬೇಸರ ವ್ಯಕ್ತಪಡಿಸಿದ್ದಾರೆ.
ಯಾದಗಿರಿಯ ಶಹಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಡಾಳ್ ವಿರೂಪಾಕ್ಷಪ್ಪ ಪ್ರಕರಣದಲ್ಲಿ ಕಾನೂನು ತನ್ನ ಕೆಲಸ ಮಾಡ್ತಿದೆ. ಯಾರನ್ನೂ ರಕ್ಷಿಸುವ ಅಥವಾ ಟಾರ್ಗೆಟ್ ಮಾಡೋ ಕೆಲಸ ಮಾಡಲ್ಲ. ಇದೇ ಪರಿಸ್ಥಿತಿ ಕಾಂಗ್ರೆಸ್ ಶಾಸಕರಿಗೆ ಆಗಿದ್ದರೆ ಇ.ಡಿ, ಐಟಿ, ಸಿಬಿಐ ಆಯ್ತು ಈಗ ಲೋಕಾಯುಕ್ತಗೂ ಛೂ ಬಿಟ್ಟಿದ್ದಾರೆ ಅಂತಿದ್ರು. ಯಾರೇ ತಪ್ಪು ಮಾಡಿದ್ರೂ ಶಿಕ್ಷೆ ಅನುಭವಿಸ್ತಾರೆ ಎಂದು ಹೇಳಿದ್ದಾರೆ.

ಮಲೆನಾಡಿಗೂ ಕಾಲಿಟ್ಟ ಕುಕ್ಕರ್ ಪಾಲಿಟಿಕ್ಸ್- ಕಾಂಗ್ರೆಸ್ ಶಾಸಕರ ನಡೆಗೆ ತೀವ್ರ ಆಕ್ರೋಶ ;
ಅಭಿವೃದ್ಧಿ ಕಾರ್ಯದಿಂದ ಮತ ಕೇಳುವ ಬದಲು ಕುಕ್ಕರ್ ನೀಡಿ ಮತ ಕೇಳುತ್ತಿರುವ ಹಾಲಿ ಕಾಂಗ್ರೆಸ್ ಶಾಸಕರ ವಿರುದ್ಧ ಮತದಾರರು ಆಕ್ರೋಶ ವ್ಯಕ್ತಪಡಿಸಿದ ಘಟನೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ನಡೆದಿದೆ.
ಜಿಲ್ಲೆಯ ಶೃಂಗೇರಿ ವಿಧಾನಸಭಾ ಕ್ಷೇತ್ರದಲ್ಲಿ ಈ ಘಟನೆ ನಡೆದಿದ್ದು, ಶೃಂಗೇರಿ ಶಾಸಕ ಹಾಗೂ ಜಿಲ್ಲೆಯ ಏಕೈಕ ಕಾಂಗ್ರೆಸ್ ಶಾಸಕ ಟಿ.ಡಿ.ರಾಜೇಗೌಡ ಕ್ಷೇತ್ರದಾದ್ಯಂತ ಕುಕ್ಕರ್ ರಾಜಕೀಯ ಆರಂಭಿಸಿದ್ದಾರೆ. ಕೇತ್ರದಾದ್ಯಂತ ಸುಮಾರು ಒಂದು ಲಕ್ಷಕ್ಕೂ ಅಧಿಕ ಕುಕ್ಕರ್ ವಿತರಣೆ ಮಾಡಿದ್ದು, ಜನಸಾಮಾನ್ಯರು ಈಗ ಕುಕ್ಕರ್ ನೀಡಿ ಮತ ಕೇಳುವುದಾದರೆ ಕಳೆದ ಐದು ವರ್ಷದಿಂದ ಮಾಡಿದ್ದೇನು ಎಂದು ಪ್ರಶ್ನಿಸಿದ್ದಾರೆ.
ಮಲೆನಾಡಿನ ಗಾಂಧಿ ಎಂದೇ ಹೆಸರಾಗಿದ್ದ ಗೋವಿಂದೇ ಗೌಡರ ಕ್ಷೇತ್ರದಲ್ಲಿ ಕಾಂಗ್ರೆಸ್ ಮುಖಂಡರು ಕುಕ್ಕರ್ ಆಮಿಷವೊಡ್ಡಿ ಮತ ನೀಡುವಂತೆ ಜನರಲ್ಲಿ ಮನವಿ ಮಾಡಿದ್ದರು. ಚುನಾವಣೆಯ ಹಿನ್ನೆಲೆ, ಕಾಂಗ್ರೆಸ್ ಮುಖಂಡ ಬೇಗಾರು ರಮೇಶ್ ನೇತೃತ್ವದಲ್ಲಿ ಟಿ.ಡಿ.ರಾಜೇಗೌಡರ ಭಾವಚಿತ್ರವುಳ್ಳ ಕುಕ್ಕರ್ ಅನ್ನು ಮನೆ-ಮನೆಗೆ ವಿತರಿಸಿ, ಅವರೊಂದಿಗೆ ಫೋಟೋ ಹೊಡೆಸಿಕೊಂಡಿದ್ದರು. ಹಾಲಿ ಶಾಸಕರ ಈ ನಡೆಗೆ ಸಾಮಾಜಿಕ ಜಾಲತಾಣದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ.
ಚಿಕ್ಕಮಗಳೂರಿನಲ್ಲಿ ಮೂರು ತಾಲೂಕು ಸೇರಿ ಶೃಂಗೇರಿ ವಿಧಾನಸಭಾ ಕ್ಷೇತ್ರವಾಗಿದೆ. ಮೂರೂ ತಾಲೂಕಿನಲ್ಲೂ ಕಳೆದ ಎರಡು ಮೂರು ವರ್ಷಗಳಿಂದ ಭಾರೀ ಮಳೆಗೆ ಜನ ಮನೆ-ಮಠ ಕಳೆದುಕೊಂಡಿದ್ದಾರೆ. ಹಲವರಿಗೆ ಇನ್ನೂ ಸೂಕ್ತ ರೀತಿಯಲ್ಲಿ ಪರಿಹಾರ ಬರಲಿಲ್ಲ. ಮಳೆಯಿಂದ ನಾಶಗೊಂಡಿದ್ದ ಮೂಲಭೂತ ಸೌಕರ್ಯಗಳು ಇಂದಿಗೂ ದುರಸ್ಥಿಗೊಂಡಿಲ್ಲ. ಈಗ ಚುನಾವಣೆ ಬಂತು ಎಂದು ಅಭಿವೃದ್ಧಿ ಕೆಲಸ ಬಿಟ್ಟು ಕುಕ್ಕರ್ ಕೊಟ್ಟು ಮತ ಕೇಳುತ್ತಿದ್ದಾರೆ ಎಂದು ಮತದಾರರು ಶಾಸಕರ ವಿರುದ್ಧ ಅಸಮಾಧಾನ ಹೊರಹಾಕಿದರು.
ಕುಕ್ಕರ್ ಬೇಡ. ನಮ್ಮ ಮನೆಯಲ್ಲಿಯೇ ಇದೆ. ಕ್ಷೇತ್ರದ ಸಮಸ್ಯೆಗಳ ಬಗ್ಗೆ ಕಾಳಜಿ ವಹಿಸಿ ಅವುಗಳನ್ನು ಬಗೆಹರಿಸುವ ಮೂಲಕ ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸಿ ಎಂದು ಶಾಸಕರಿಗೆ ಜನರು ಸಲಹೆ ನೀಡಿದರು.
BJP leaders admit ’embarrassed’ over welcome to MLA facing Lokayukta case says CT Ravi. Soon after BJP MLA Madal Virupakshappa was granted anticipatory bail by the Karnataka High Court Tuesday in connection with a bribery case, his supporters took out a procession in his constituency. On Wednesday, they poured milk on a photograph of Virupakshappa at a temple in the Sulegere village, Davanagere district.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm