ಬ್ರೇಕಿಂಗ್ ನ್ಯೂಸ್
10-03-23 03:13 pm Bengaluru Correspondent ಕರ್ನಾಟಕ
ಬೆಂಗಳೂರು, ಮಾ.10: ವದಂತಿ, ಗೊಂದಲದ ಬಳಿಕ ಕಡೆಗೂ ಸುಮಲತಾ ಅಂಬರೀಶ್ ತನ್ನ ಮುಂದಿನ ನಡೆಯನ್ನು ಘೋಷಿಸಿದ್ದಾರೆ. ಮಂಡ್ಯದ ಅಭಿವೃದ್ಧಿಗಾಗಿ ಮೋದಿ ಅವರಿಗೆ ನನ್ನ ಬೆಂಬಲ ಎನ್ನುವ ಮೂಲಕ ಬಿಜೆಪಿ ಸೇರುವ ಇಂಗಿತ ವ್ಯಕ್ತಪಡಿಸಿದ್ದಾರೆ.
ತಾಂತ್ರಿಕ ಕಾರಣಗಳಿಂದಾಗಿ ಪಕ್ಷೇತರ ಗೆದ್ದಿದ್ದ ಸುಮಲತಾ ಅಂಬರೀಶ್ ಬಿಜೆಪಿಗೆ ಸೇರ್ಪಡೆಯಾಗೋದು ಸದ್ಯಕ್ಕೆ ಅನುಮಾನ ಎಂದು ಹೇಳಲಾಗಿತ್ತು. ಅದೇ ರೀತಿಯಲ್ಲಿ ಮಹತ್ವದ ಸುದ್ದಿಗೋಷ್ಟಿ ಕರೆದು ತನ್ನ ಬೆಂಬಲ ಬಿಜೆಪಿಗೆ ಎಂದು ಘೋಷಣೆ ಮಾಡಿದ್ದಾರೆ. ಆದರೆ ಸದ್ಯಕ್ಕೆ ಬಿಜೆಪಿ ಸೇರ್ಪಡೆಯಾಗಲ್ಲ ಎಂದು ಹೇಳಿದ್ದಾರೆ. ಮಂಡ್ಯ ಕ್ಷೇತ್ರದ ಅಭಿವೃದ್ಧಿ ಬಗ್ಗೆ ಮಾತನಾಡಿದ ಅಂಬಿ ಪತ್ನಿ, ತಾನು ಸ್ವಾರ್ಥಿಯಾಗಿದ್ದರೆ ಅವಕಾಶವನ್ನು ಬಳಸಿ ತನ್ನ ಲಾಭಕ್ಕಾಗಿ ಕೆಲಸ ಮಾಡಬಹುದಿತ್ತು. ಗೆದ್ದ ಆರು ತಿಂಗಳಲ್ಲಿ ಬಿಜೆಪಿಗೆ ಹೋಗಬಹುದಿತ್ತು. ಪಕ್ಷೇತರ ನೆಲೆಯಲ್ಲಿ ನನಗೆ ಮತ ನೀಡಿದ್ದಾರೆ. ನನ್ನ ಮಂಡ್ಯದ ಅಭಿವೃದ್ಧಿಯೇ ನನಗೆ ಮುಖ್ಯವಾಗಿತ್ತು. ಜಿಲ್ಲೆಯ ಅಭಿವೃದ್ಧಿಗಾಗಿ ಮೋದಿ ನೇತೃತ್ವದ ಬಿಜೆಪಿಗೆ ಬೆಂಬಲ ಘೋಷಿಸುತ್ತಿದ್ದೇನೆ ಎಂದಿದ್ದಾರೆ.
ಇದೇ ವೇಳೆ, ಪರೋಕ್ಷವಾಗಿ ಎಚ್ಡಿಕೆ, ಕುಟುಂಬ ರಾಜಕಾರಣದ ಆಕ್ರೋಶ ವ್ಯಕ್ತಪಡಿಸಿದರು. ಚುನಾವಣೆ ಸಂದರ್ಭದಲ್ಲಿ ನನ್ನ ವಿರುದ್ಧ ಕೆಲವರು ಅಪಪ್ರಚಾರ ಮಾಡಿದರು. ಆದರೆ ಜನ ನನ್ನ ಕೈಬಿಡಲಿಲ್ಲ. ಅಂಬರೀಶ್ ಪತ್ನಿಯೆಂದು ನನ್ನನ್ನು ಸ್ವೀಕಾರ ಮಾಡಿದರು. ನಾನು ರಾಜಕೀಯ ಬೇಕಾದರೆ ಬಿಡ್ತೀನಿ, ಸ್ವಾಭಿಮಾನ ಬಿಡಲ್ಲ ಎಂದು ಸುಮಲತಾ ಹೇಳಿದ್ದಾರೆ. ಮಗ ಅಭಿಷೇಕ್ ರಾಜಕೀಯಕ್ಕೆ ಎಂಟ್ರಿ ನೀಡುತ್ತಾರೆಯೇ ಎಂಬ ಪ್ರಶ್ನೆಗೆ, ತಾನು ರಾಜಕೀಯದಲ್ಲಿ ಇರುವವರೆಗೆ ಯಾವುದೇ ಕಾರಣಕ್ಕೂ ನನ್ನ ಮಗ ಅಭಿಷೇಕ್ ಈ ಕ್ಷೇತ್ರಕ್ಕೆ ಬರುವುದಿಲ್ಲ ಎಂದಿದ್ದಾರೆ. ಕುಟುಂಬ ರಾಜಕಾರಣ ನಾನು ಮಾಡೋದಿಲ್ಲ. ಚಾಮುಂಡಿ ತಾಯಿ ಆಣೆಯಾಗಿ ಹೇಳ್ತೀನಿ, ಮಗನಿಗೆ ಟಿಕೆಟ್ ಬೇಕೆಂದು ಕೇಳಿಲ್ಲ. ನಾನು ರಾಜಕಾರಣದಲ್ಲಿ ಇರೋ ವರೆಗೂ ಮಗನನ್ನು ರಾಜಕೀಯಕ್ಕೆ ತರೋದಿಲ್ಲ ಎನ್ನುವ ಮೂಲಕ ತನ್ನ ವಿರುದ್ಧ ಕಳೆದ ಚುನಾವಣೆಯಲ್ಲಿ ತೊಡೆ ತಟ್ಟಿದ್ದ ಜೆಡಿಎಸ್ ವಿರುದ್ಧ ಟಾಂಗ್ ನೀಡಿದರು
Actor and Member of Parliament Sumalatha Ambareesh announced that she will extend her support to the Bharatiya Janata Party (BJP) in the upcoming assembly elections. Sumalatha had called for a press meet at her residence in Mandya ahead of Prime Minister Narendra Modi’s visit to the district on March 12. Chief Minister Basavaraj Bommai had earlier said that discussions were held with Sumalatha to induct her into BJP and that the process was underway. She maintained that her decision was taken keeping the development of Mandya district in mind.
13-09-25 10:19 am
HK News Desk
Shikaripura Bike Accident: ಬೈಕ್ಗೆ ಡಿಕ್ಕಿ ಹೊಡ...
12-09-25 08:26 pm
Yatnal, Maddur: ರಾಜ್ಯದಲ್ಲಿ ಹೊಸ ಹಿಂದು ಪಾರ್ಟಿ ಕ...
12-09-25 03:04 pm
ಸಾಹಸಸಿಂಹ ವಿಷ್ಣುವರ್ಧನ್, ಹಿರಿಯ ನಟಿ ಬಿ.ಸರೋಜಾದೇವಿ...
11-09-25 10:11 pm
ಈದ್ ಮೆರವಣಿಗೆ : ಶಿವಮೊಗ್ಗದಲ್ಲಿ ಪಾಕಿಸ್ತಾನ್ ಜಿಂದಾ...
09-09-25 10:52 pm
12-09-25 11:33 am
HK News Desk
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
12-09-25 10:58 pm
Mangalore Correspondent
Mahesh Vikram Hegde Arrested, Post Card Kanna...
12-09-25 09:25 pm
Sameer Md, Dharmasthala: ವಿದೇಶದಿಂದ ಫಂಡ್ ಬಂದಿ...
12-09-25 08:53 pm
RTI Dharmasthala Hostels, Mahesh Thimarodi: ಧ...
12-09-25 07:43 pm
Mangalore Road Accident, Pothole, Survery: ರಸ...
12-09-25 05:34 pm
12-09-25 11:07 pm
Mangalore Correspondent
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm
Mangalore Police, Arrest: ಉರ್ವಾದಲ್ಲಿ ಪೊಲೀಸ್ ಕ...
11-09-25 09:13 pm
Mangalore Fake Documents, Crime, Arrest: ಸರ್ಕ...
11-09-25 08:52 pm