ಬ್ರೇಕಿಂಗ್ ನ್ಯೂಸ್
10-03-23 03:26 pm Bengaluru Correspondent ಕರ್ನಾಟಕ
ಬೆಂಗಳೂರು, ಮಾ.10: ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಚುನಾವಣಾ ಪ್ರಚಾರ ಸಮಿತಿಯನ್ನು ಮಾಡಿದ್ದು ಅಧ್ಯಕ್ಷರಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನೇ ಮಾಡಿದೆ. ಅಧ್ಯಕ್ಷರಾಗುತ್ತಾರೆ ಎಂಬ ನಿರೀಕ್ಷೆಯಲ್ಲಿದ್ದ ಯಡಿಯೂರಪ್ಪ ಕೇವಲ ಸದಸ್ಯ ಸ್ಥಾನಕ್ಕೆ ಸೀಮಿತರಾಗಿದ್ದಾರೆ.
ಇದೇ ವೇಳೆ, ಚುನಾವಣಾ ನಿರ್ವಹಣಾ ಸಮಿತಿ ಘೋಷಿಸಲಾಗಿದ್ದು, ಅಚ್ಚರಿಯೆಂಬಂತೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರನ್ನು ಸಂಚಾಲಕಿ ಹುದ್ದೆಗೆ ನೇಮಕ ಮಾಡಲಾಗಿದೆ. ಆಮೂಲಕ ಶೋಭಾ ಕರಂದ್ಲಾಜೆ ರಾಜ್ಯ ರಾಜಕಾರಣಕ್ಕೆ ಮರು ಎಂಟ್ರಿಯಾಗಲಿದ್ದಾರೆ ಎಂಬ ಮಾತು ಕೇಳಿಬಂದಿದೆ.



ಪ್ರಚಾರ ಸಮಿತಿಗೆ 25 ಸದಸ್ಯರನ್ನು ನೇಮಕ ಮಾಡಲಾಗಿದೆ. ನಿರ್ವಹಣಾ ಸಮಿತಿಯಲ್ಲಿ 14 ಸದಸ್ಯರು ಇರಲಿದ್ದಾರೆ. ಕೆಲವರನ್ನು ಎರಡೂ ಸಮಿತಿಯಲ್ಲಿ ಸೇರಿಸಲಾಗಿದೆ. ಬಿಎಸ್ವೈ ಅವರ ಆಪ್ತೆಯಾಗಿರುವ ಶೋಭಾ ಅವರನ್ನು ಚುನಾವಣಾ ನಿರ್ವಹಣಾ ಸಮಿತಿಯ ಸಂಚಾಲಕಿ ಹುದ್ದೆಗೆ ತರುವ ಮೂಲಕ ಸಂತೈಸುವ ಕೆಲಸ ಮಾಡಿದ್ದಾರೆ. ಮೊನ್ನೆ ಶಿವಮೊಗ್ಗಕ್ಕೆ ಬಂದಿದ್ದ ಪ್ರಧಾನಿ ಮೋದಿ, ಬಿಎಸ್ವೈ ಅವರ ಕೈ ಹಿಡಿದುಕೊಂಡು ಹೋಗಿದ್ದು, ಯಡಿಯೂರಪ್ಪ ಅವರೇ ನಮ್ಮ ನಾಯಕ ಎಂದು ಹೇಳಿದ್ದು ಪ್ರಚಾರ ಸಮಿತಿಗೆ ಯಡಿಯೂರಪ್ಪ ಅವರನ್ನೇ ಅಧ್ಯಕ್ಷರನ್ನಾಗಿಸುತ್ತಾರೆ ಎಂಬ ನಿರೀಕ್ಷೆ ಅಭಿಮಾನಿಗಳಲ್ಲಿ ಮೂಡಿತ್ತು. ಲಿಂಗಾಯತರನ್ನು ಸಂತೈಸಲು ಸಿಎಂ ಬೊಮ್ಮಾಯಿ ಅವರನ್ನೇ ಅಧ್ಯಕ್ಷರನ್ನಾಗಿಸಿ, ಯಡಿಯೂರಪ್ಪ ಅವರನ್ನು ಜೊತೆಗೆ ಕೂರಿಸಿ ಸರಿದೂಗಿಸುವ ಕೆಲಸ ಮಾಡಲಾಗಿದೆ.
ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರನ್ನು ಚುನಾವಣಾ ನಿರ್ವಹಣಾ ಸಮಿತಿಗೆ ಸಂಚಾಲಕಿ ಮಾಡುವ ಮೂಲಕ ಶೋಭಕ್ಕೆ ಪೂರ್ತಿಯಾಗಿ ರಾಜ್ಯ ರಾಜಕಾರಣಕ್ಕೆ ಮರಳುವುದು ಖಚಿತವಾಗಿದೆ. ಕಳೆದ ಬಾರಿ ಸಿಎಂ ಬದಲಾವಣೆಯ ಕೂಗು ಕೇಳಿಬಂದಿದ್ದಾಗ ಶೋಭಾ ಹೆಸರು ಮುಂಚೂಣಿಯಲ್ಲಿ ಕೇಳಿಬಂದಿತ್ತು. ಶೋಭಾ ಅವರು ಸಿಎಂ ಆಗಲಿದ್ದಾರೆ ಎಂದೂ ಹೇಳಲಾಗಿತ್ತು. ಸಿಟಿ ರವಿಯ ಸ್ಪೀಡ್ ಹೆಚ್ಚಿದೆ ಅನ್ನುವ ಕಾರಣಕ್ಕೆ ಆರೆಸ್ಸೆಸ್ ಆಯ್ಕೆ ಗೌಡ ಜನಾಂಗದ ನಾಯಕಿ ಶೋಭಾ ಅನ್ನುವುದಿತ್ತು. ಇದೀಗ ಚುನಾವಣೆ ಹೊತ್ತಿಗೆ ಶೋಭಕ್ಕನಿಗೆ ನಿರ್ವಹಣಾ ಸಮಿತಿಯಲ್ಲಿ ಸ್ಥಾನ ನೀಡಿರುವುದು ಮತ್ತೆ ವಿಧಾನಸಭೆಗೆ ಸ್ಪರ್ಧಿಸಲಿದ್ದಾರೆಯೇ ಎಂಬ ಅನುಮಾನ ಮೂಡಿದೆ
While former Karnataka Chief Minister B S Yediyurappa was named in the BJP’s Karnataka election committee on Friday, his long-time confidante and Union Minister Shobha Karandlaje is set to head the party’s election management committee.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm