ಬ್ರೇಕಿಂಗ್ ನ್ಯೂಸ್
11-03-23 11:00 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.11 : ಬಿಜೆಪಿ ಪಾಲಿನ ಭದ್ರ ಮತಬ್ಯಾಂಕ್ ಎನಿಸಿಕೊಂಡಿದ್ದ ಲಿಂಗಾಯತ ಸಮುದಾಯದ ಮುಖಂಡರನ್ನು ಸೆಳೆಯಲು ಕಾಂಗ್ರೆಸ್ ಪಕ್ಷ ''ಆಪರೇಷನ್ ಲಿಂಗಾಯತ ಲೀಡರ್ಸ್'' ಆರಂಭಿಸಿದೆ. ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಜೊತೆ ಗುರುತಿಸಿಕೊಂಡಿರುವ ನಾಯಕರನ್ನು ಹೆಚ್ಚಿನ ಸಂಖ್ಯೆಯಲ್ಲಿ ಕಾಂಗ್ರೆಸ್ ಸೆಳೆಯತೊಡಗಿದೆ.

ಬಿಜೆಪಿಯಲ್ಲಿರುವ ಹಳೆ ಮೈಸೂರು ಭಾಗದ ಪ್ರಬಾವಿ ಲಿಂಗಾಯತ ಮುಖಂಡ ವಸತಿ ಸಚಿವ ವಿ. ಸೋಮಣ್ಣ, ಉತ್ತರ ಕರ್ನಾಟಕದ ಧಾರವಾಡ ಜಿಲ್ಲೆಯಲ್ಲಿ ಪ್ರಭಾವ ಹೊಂದಿರುವ ವಿಧಾನ ಪರಿಷತ್ತಿನ ಮಾಜಿ ಸದಸ್ಯ ಮೋಹನ್ ಲಿಂಬೆಕಾಯಿ ಸೇರಿದಂತೆ ಬಿಜೆಪಿ ಮತ್ತು ಜೆಡಿಎಸ್ನಲ್ಲಿರುವ ವೀರಶೈವ ಲಿಂಗಾಯತ ಸಮುದಾಯದ ಶಾಸಕರು, ಮಾಜಿ ಶಾಸಕರು ಸೇರಿದಂತೆ ವಿಧಾನಸಭೆ ಕ್ಷೇತ್ರಗಳ ವ್ಯಾಪ್ತಿಯ ಸ್ಥಳೀಯ ಮಟ್ಟದ ನಾಯಕರಿಗೂ ಗಾಳ ಹಾಕಿದ್ದು, ಕಾಂಗ್ರೆಸ್ ಪಕ್ಷಕ್ಕೆ ಸೇರಿಸಿಕೊಳ್ಳುತ್ತಿದೆ.
ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರಾದ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ, ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ, ಕಾಂಗ್ರೆಸ್ ಚುನಾವಣೆ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ ಪಾಟೀಲ್, ಮಾಜಿ ಸಚಿವ ವಿನಯ್ ಕುಲಕರ್ಣಿ, ಮಾಜಿ ಕೆಪಿಸಿಸಿ ಅಧ್ಯಕ್ಷ ಅಲ್ಲಂ ವೀರಭದ್ರಪ್ಪ ಹಾಗು ಇನ್ನಿತರ ಮುಖಂಡರು ನಿರಂತರ ಕಸರತ್ತು ನಡೆಸಿದ್ದಾರೆ. ಮಾಜಿ ಸಿಎಂ ಯಡಿಯೂರಪ್ಪ ಬೆಂಬಲಿಗರಾಗಿದ್ದ ಮಾಜಿ ಶಾಸಕ ಯು.ಬಿ ಬಣಕಾರ್, ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿ ಕ್ಷೇತ್ರದಲ್ಲಿ ಈ ಹಿಂದೆ ಕೆಜೆಪಿಯಿಂದ ಚುನಾವಣೆಗೆ ಸ್ಪರ್ಧಿಸಿದ್ದ ಕಿರಣ್ ಕುಮಾರ್, ಚಿಕ್ಕಮಗಳೂರಿನಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಆಪ್ತರಾಗಿದ್ದ ತಮ್ಮಯ್ಯ ಅವರನ್ನು ಆಪರೇಷನ್ ಮೂಲಕ ಕಾಂಗ್ರೆಸ್ ಪಕ್ಷಕ್ಕೆ ಸೇರಿಸಲಾಗಿದೆ.

ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್ ಪ್ರತಿನಿಧಿಸುವ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಕ್ಷೇತ್ರದಲ್ಲಿ ವಿ.ಎಸ್ ಪಾಟೀಲ್ ಅವರನ್ನು ಸೇರಿಸಿಕೊಳ್ಳುವ ಮೂಲಕ ಕಾಂಗ್ರೆಸ್ ಪಕ್ಷ ಬಿಜೆಪಿಗೆ ಶಾಕ್ ನೀಡಿದೆ. ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್, ನಗರಸಭೆ ಹೀಗೆ ಸ್ಥಳೀಯಾಡಳಿತ ಕ್ಷೇತ್ರಗಳಲ್ಲಿ ಅಧ್ಯಕ್ಷರಾಗಿ, ಉಪಾಧ್ಯಕ್ಷರಾಗಿ, ಸದಸ್ಯರಾಗಿದ್ದ ವೀರಶೈವ ಲಿಂಗಾಯತ ಸಮುದಾಯಕ್ಕೆ ಸೇರಿದ ಮುಖಂಡರನ್ನೂ ಕಾಂಗ್ರೆಸ್ ಪಕ್ಷಕ್ಕೆ ಸೆಳೆದುಕೊಳ್ಳತೊಡಗಿದೆ.

ವೀರಶೈವ ಲಿಂಗಾಯತ ಸಮುದಾಯದ ಪ್ರಶ್ನಾತೀತ ನಾಯಕ ಯಡಿಯೂರಪ್ಪ ಅವರನ್ನು ಅಧಿಕಾರದಿಂದ ಕೆಳಗಿಳಿಸಿದ ಬಳಿಕ ಬಿಜೆಪಿ ಬಗ್ಗೆ ಬೇಸರಗೊಂಡಿರುವ ಲಿಂಗಾಯತರ ಬೆಂಬಲವನ್ನು ಪಡೆಯಲು ಕಾಂಗ್ರೆಸ್ ಕಸರತ್ತು ನಡೆಸಿದೆ. ಚುನಾವಣೆ ಹೊತ್ತಿಗೆ ರಾಜ್ಯದ ಉದ್ದಗಲದಲ್ಲಿ ಹೆಚ್ಚಿನ ವೀರಶೈವ ಲಿಂಗಾಯತ ಮುಖಂಡರನ್ನು ಪಕ್ಷಕ್ಕೆ ಕರೆತರುವ ಸಾಹಸವನ್ನು ಕಾಂಗ್ರೆಸ್ ಮಾಡುತ್ತಿದೆ. ಇದು ಬಿಜೆಪಿ ಪಾಲಿಗೆ ಬಹುದೊಡ್ಡ ಶಾಕಿಂಗ್ ನಡೆ ಎನ್ನಬೇಕಷ್ಟೆ.
Determined to ensure it wins a majority in the upcoming elections, Congress is making big efforts to woo ‘winnable’ lawmakers from BJP and JD(S), including some of those who deserted the party in.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm