ಬ್ರೇಕಿಂಗ್ ನ್ಯೂಸ್
14-03-23 12:01 pm HK News Desk ಕರ್ನಾಟಕ
ರಾಮನಗರ, ಮಾ.14: ಬೆಂಗಳೂರು- ಮೈಸೂರು ಹೆದ್ದಾರಿಯಲ್ಲಿ ಟೋಲ್ ಸಂಗ್ರಹ ವಿರೋಧಿಸಿ ಕಾಂಗ್ರೆಸ್ ಕಾರ್ಯಕರ್ತರು ಶೇಷಗಿರಿಹಳ್ಳಿ ಟೋಲ್ ಬಳಿ ಪ್ರತಿಭಟನೆ ನಡೆಸಿದರು.
ಹೆದ್ದಾರಿಯಲ್ಲಿ ಧರಣಿ ಕುಳಿತ ಪ್ರತಿಭಟನಾಕಾರರು, ಬಿಜೆಪಿ ಸರ್ಕಾರ, ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳ ವಿರುದ್ಧ ಧಿಕ್ಕಾರ ಕೂಗಿದರು.




ಹೆದ್ದಾರಿ ಪ್ರಾಧಿಕಾರವು ಸರ್ವೀಸ್ ರಸ್ತೆಗಳನ್ನು ಪೂರ್ಣಗೊಳಿಸದೆಯೇ ಟೋಲ್ ಆರಂಭಿಸಿದೆ. ಶೇಷಗಿರಿಹಳ್ಳಿ, ಹೆಜ್ಜಾಲ ಬಳಿ ಸರ್ವೀಸ್ ರಸ್ತೆ ಕಾಮಗಾರಿ ಪೂರ್ಣಗೊಳಿಸಿಲ್ಲ. ಹೆಜ್ಜಾಲ ಬಳಿ ಶಾಲಾ ವಿದ್ಯಾರ್ಥಿಗಳಿಗೆ ಸ್ಕೈ ವಾಕ್ ನಿರ್ಮಿಸಿಲ್ಲ. ಹೀಗೆ ಅಪೂರ್ಣ ಕಾಮಗಾರಿ ನಡುವೆಯೇ ಹೆದ್ದಾರಿ ಟೋಲ್ ಆರಂಭಿಸಲಾಗಿದೆ ಎಂದು ದೂರಿದರು.
ಟೋಲ್ ಸಂಗ್ರಹ ವಿರೋಧಿಸಿ ಶೇಷಗಿರಿಹಳ್ಳಿ ಟೋಲ್ ಬಳಿ ಪ್ರತಿಭಟನೆ ನಡೆಸುತ್ತಿದ್ದ ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದರು.
ಮೂರು ಕೆಎಸ್ಆರ್ ಟಿಸಿ ಬಸ್ ಗಳಲ್ಲಿ ಪ್ರತಿಭಟನಾಕಾರರನ್ನು ರಾಮನಗರಕ್ಕೆ ಕರೆದೊಯ್ಯಲಾಯಿತು

ಮೊದಲ ದಿನವೇ ಬೆಂಗಳೂರು ಮೈಸೂರು ಎಕ್ಸ್ಪ್ರೆಸ್ವೇ ಟೋಲ್ನಲ್ಲಿ ತಾಂತ್ರಿಕ ಸಮಸ್ಯೆ, ವಾಹನ ಸವಾರರ ಆಕ್ರೋಶ ;
ಟೋಲ್ ವಿರುದ್ಧ ವಾಹನ ಸವಾರರು ಗರಂ ಆಗಿದ್ದಾರೆ. ಟೋಲ್ ಸಂಗ್ರಹ ಆರಂಭವಾದ ಮೊದಲ ದಿನವೇ ಬೆಳ್ಳಂ ಬೆಳಗ್ಗೆಯೇ ಟೋಲ್ ಸಿಬ್ಬಂದಿ ವಿರುದ್ಧ ವಾಹನ ಸವಾರರು ಸಿಡಿಮಿಡಿಗೊಂಡಿದ್ದಾರೆ.
ಬೆಂಗಳೂರು ಮೈಸೂರು ಎಕ್ಸ್ಪ್ರೆಸ್ ವೇನಲ್ಲಿ ಸರಿಯಾದ ಸಿದ್ಧತೆ ಮಾಡಿಕೊಂಡಿಲ್ಲ. ಟೆಕ್ನಿಕಲ್ ಎರರ್ ಆಗುತ್ತಿದೆ. ಫಾಸ್ಟ್ಯಾಗ್ ಇದ್ರೂ ಟೋಲ್ ಪ್ಲಾಜಾ ಸ್ಕ್ಯಾನ್ ತೆಗೆದುಕೊಳ್ಳುತ್ತಿಲ್ಲ. ಸ್ಕ್ಯಾನ್ ಆಗೋದ್ರಲ್ಲಿ ವಿಳಂಬವಾಗುತ್ತಿದೆ. ಅಲ್ಲದೆ ಟೋಲ್ ಕಂಬಿ ಕೂಡ ಸರಿಯಾಗಿ ವರ್ಕ್ ಆಗುತ್ತಿಲ್ಲ. ಸ್ಕ್ಯಾನ್ ಆಗಿ ವಾಹನ ಚಲಿಸುವಾಗಲೇ ವಾಹನದ ಮೇಲೆ ಕಂಬಿ ಬೀಳುತ್ತಿದೆ. ಹೀಗಾಗಿ ವಾಹನ ಚಾಲಕರು ಗರಂ ಆಗುತ್ತಿದ್ದಾರೆ. ಸಿದ್ಧತೆ ಮಾಡಿಕೊಳ್ಳದೇ ಯಾಕೆ ಟೋಲ್ ತಗೋತಿರಿ ಅಂತ ಅವಾಜ್ ಹಾಕುತ್ತಿದ್ದಾರೆ.
ಇನ್ನು ಈ ಬಗ್ಗೆ ಬೆಂಗಳೂರು ದಕ್ಷಿಣ ತಾಲೂಕಿನ ಕಣಮಿಣಕೆ ಬಳಿ ಮಾತನಾಡಿದ ವಾಹನ ಸವಾರರೊಬ್ಬರು ಆಕ್ರೋಶ ಹೊರ ಹಾಕಿದ್ದಾರೆ. ಸಿದ್ಧತೆಯಿಲ್ಲದೇ ಟೋಲ್ ದರ ಸಂಗ್ರಹಿಸಲಾಗುತ್ತಿದೆ. ಸರಿಯಾದ ವ್ಯವಸ್ಥೆ ಇಲ್ಲ, ಟೋಲ್ ಕೂಡ ಸರಿಯಾಗಿ ವರ್ಕ್ ಆಗ್ತಿಲ್ಲ. ಟೋಲ್ ಕಂಬಿ ಕಾರಿನ ಮೇಲೆ ಬೀಳುತ್ತಿದೆ, ಗ್ಲಾಸ್ ಒಡೆದು ಹೋದ್ರೆ ಏನ್ಮಾಡಬೇಕು. ಮೊದಲು ಟೋಲ್ ವ್ಯವಸ್ಥೆ ಸರಿ ಮಾಡಲಿ. ಟೋಲ್ ತಗೋತಾರೆ ಅನ್ನೋದೆ ಗೊತ್ತಿರಲಿಲ್ಲ. ನಿನ್ನೆ ಸಂಜೆಯೇ ಇಲ್ಲಿಂದ ಹೋಗಿದ್ದೀನಿ. ನಿನ್ನೆನೇ ಮಾಹಿತಿ ನೀಡಬೇಕಿತ್ತು. ಕೊನೆ ಪಕ್ಷ ಮುಂದೆ ನೊಟೀಸ್ ಆದ್ರೂ ಹಾಕಬೇಕಿತ್ತು ಎಂದು ಟೋಲ್ ವಿರುದ್ಧ ವಾಹನ ಸವಾರ ಸತೀಶ್ ಆಕ್ರೋಶ ಹೊರ ಹಾಕಿದರು.
ಕನ್ನಡ ಪರ ಸಂಘಟನೆಗಳಿಂದ ಪ್ರತಿಭಟನೆ ;
ಈ ನಡುವೆ ಟೋಲ್ ಪ್ಲಾಜಾದ ಎದುರು ವಿವಿಧ ಕನ್ನಡ ಪರ ಸಂಘಟನೆಗಳು, ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಟೋಲ್ ದರ ಕಡಿಮೆ ಮಾಡಬೇಕು. ಮೊದಲು ಸರ್ವಿಸ್ ರಸ್ತೆಯನ್ನು ಪೂರ್ಣಗೊಳಿಸಿ, ಶೌಚಾಲಯ ಮತ್ತಿತರ ಸೌಲಭ್ಯಗಳನ್ನು ಒದಗಿಸಬೇಕು ಎಂದು ಆಗ್ರಹಿಸಿದವು. ಪೊಲೀಸರು ಪ್ರತಿಭಟನಾನಿರತರನ್ನು ವಶಕ್ಕೆ ಪಡೆದರು. ಮೂರು ಬಸ್ಗಳಲ್ಲಿ ಪ್ರತಿಭನಾನಿರಂತರನ್ನು ಬಿಡದಿ ಪೊಲೀಸ್ ಠಾಣೆಯತ್ತ ಕರೆದುಕೊಂಡು ಹೋಗುತ್ತಿದ್ದಾರೆ. ಇತ್ತ ಈ ವಿರೋಧದ ನಡುವೆ ಹೆದ್ದಾರಿ ಪ್ರಾಧಿಕಾರದಿಂದ ಟೋಲ್ ಶುಲ್ಕ ಸಂಗ್ರಹವು ಮುಂದುವರೆದಿದೆ. ನಿರಂತರ ಪ್ರತಿಭಟನೆ ಹಿನ್ನೆಲೆ ಪೊಲೀಸರು ಟೋಲ್ ಕೇಂದ್ರದ ಬಳಿಯೇ ಬೀಡುಬಿಟ್ಟಿದ್ದಾರೆ.


ಯಾವುದಕ್ಕೆ ಎಷ್ಟು ಶುಲ್ಕ?
A massive protest took place near Sheshagiri Halli toll on newly-inaugurated Mysuru-Bengaluru Expressway on Tuesday, over fee being collected “without facilities". The highway was inaugurated by Prime Minister Narendra Modi on Sunday.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm