ಬ್ರೇಕಿಂಗ್ ನ್ಯೂಸ್
16-03-23 03:30 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.16 : ವಿಶ್ವಾದ್ಯಂತ ಮನೆಮಾತಾದ ಕನ್ನಡ ಚಲನಚಿತ್ರ ಕಾಂತಾರ ವಿಶ್ವಸಂಸ್ಥೆಯ ಜಿನೀವಾದಲ್ಲಿ ಮಾರ್ಚ್ 17ರಂದು ಪ್ರದರ್ಶನಗೊಳ್ಳಲು ಸಿದ್ಧವಾಗಿದೆ. ಅದೇ ದಿನ ರಿಷಬ್ ಶೆಟ್ಟಿ ಭಾರತೀಯ ಸಿನಿಮಾಗಳ ಕುರಿತು ಕನ್ನಡದಲ್ಲಿ ವಿಶ್ವಸಂಸ್ಥೆಯಲ್ಲಿ ಭಾಷಣ ಮಾಡಲಿದ್ದಾರೆ.
ಆರ್ ಆರ್ ಆರ್ ಚಿತ್ರದ ನಾಟು ನಾಟು ಹಾಡಿಗೆ ಆಸ್ಕರ್ ಪ್ರಶಸ್ತಿ ಸಿಕ್ಕಿದ ಸಂಭ್ರಮದ ನಡುವಲ್ಲೇ ರಿಷಬ್ ಶೆಟ್ಟಿ ಅವರ ಕಾಂತಾರ ಸಿನಿಮಾ ಕಡಲಾಚೆಯಲ್ಲಿ ಸುದ್ದಿ ಮಾಡುತ್ತಿದೆ. ವಿಶ್ವಾದ್ಯಂತ ಬಹು ಭಾಷೆಗಳಲ್ಲಿ ಯಶಸ್ವಿ ಪ್ರದರ್ಶನ ಕಂಡ ಕನ್ನಡ ಚಲನಚಿತ್ರ ಕಾಂತಾರ ವಿಶ್ವಸಂಸ್ಥೆಯ ಪ್ರಧಾನ ಕಚೇರಿಯಲ್ಲಿ ಮಾರ್ಚ್ 17 ರಂದು ಪ್ರದರ್ಶನಗೊಳ್ಳಲಿದೆ. ನಿರ್ದೇಶಕ ಮತ್ತು ನಟ ರಿಷಬ್ ಶೆಟ್ಟಿ ಈಗಾಗಲೇ ಜಿನೀವಾ ತಲುಪಿದ್ದಾರೆ. ಸೆಂಟರ್ ಫಾರ್ ಗ್ಲೋಬಲ್ ಅಫೇರ್ಸ್ ಮತ್ತು ಪಬ್ಲಿಕ್ ಪೋಲೀಸ್ನ ಸಾಮಾಜಿಕ ಮಾಧ್ಯಮ ನೆಲೆಯಲ್ಲಿ ಯುಎನ್ಎಚ್ಆರ್ ಸಿ ಅಧಿವೇಶನದಲ್ಲಿ ಪರಿಸರ, ಹವಾಮಾನ ಮತ್ತು ಸಂರಕ್ಷಣೆಯಲ್ಲಿ ಭಾರತೀಯ ಸಿನಿಮಾದ ಪಾತ್ರದ ಬಗ್ಗೆ ಮಾತನಾಡಲಿದ್ದಾರೆ ಎಂದು ಸಿಜಿಎಪಿಪಿ ನಿರ್ದೇಶಕಿ ಅನಿಂಧ್ಯಾ ಸೇನ್ ಗುಪ್ತಾ ತಿಳಿಸಿದ್ದಾರೆ.

ವಿಶ್ವಸಂಸ್ಥೆಯ ವಾರ್ಷಿಕ ಸಭೆಯಲ್ಲಿ ವಿಶ್ವದ ಹಲವು ದೇಶದ ಪ್ರತಿನಿಧಿಗಳು ಭಾಗಿ ಆಗುತ್ತಿದ್ದಾರೆ. ಸಿನಿಮಾದ ಮೂಲಕ ಪರಿಸರ ಮತ್ತು ಅರಣ್ಯದಂಚಿನ ಜನರ ಸಮಸ್ಯೆಗಳನ್ನು ರಿಷಬ್ ತೋರಿಸಿದ್ದಾರೆ. ಅದೇ ವಿಷಯವನ್ನ ರಿಷಬ್ ವಿಶ್ವಸಂಸ್ಥೆಯಲ್ಲೂ ಮಾತನಾಡಲಿದ್ದಾರೆ ಎಂದು ತಿಳಿದುಬಂದಿದೆ.
ಸ್ಕ್ರೀನಿಂಗ್ ನಂತರ, ರಿಷಬ್ ಕನ್ನಡದಲ್ಲಿ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಮತ್ತು ನಂತರ ಯುಎನ್ ಗಣ್ಯರೊಂದಿಗೆ ಖಾಸಗಿ ಔತಣಕೂಟದಲ್ಲಿ ಭಾಗವಹಿಸಲಿದ್ದಾರೆ. ಸಾಮಾನ್ಯವಾಗಿ ಈ ಸಭೆಯಲ್ಲಿ ಹೆಚ್ಚು ಇಂಗ್ಲಿಷ್ ಭಾಷೆಯನ್ನು ಬಳಸುವುದು ವಾಡಿಕೆ. ಆದರೆ, ರಿಷಬ್ ಈ ಸಭೆಯಲ್ಲಿ ಕನ್ನಡದಲ್ಲೇ ಭಾಷಣ ಮಾಡಲಿದ್ದಾರೆ. ಈ ಮೂಲಕ ಕನ್ನಡದಲ್ಲಿ ಭಾಷಣ ಮಾಡಿದ ಮೊದಲ ಕನ್ನಡಿಗ ಎಂಬ ಕೀರ್ತಿಗೂ ಪಾತ್ರರಾಗಲಿದ್ದಾರೆ.
ಸಭೆಯಲ್ಲಿ ಸದ್ಯ ಜಗತ್ತು ಎದುರಿಸುತ್ತಿರುವ ಸಾಮಾನ್ಯ ಸಮಸ್ಯೆಗಳ ಕುರಿತು ಚರ್ಚೆಗಳು ನಡೆಯುತ್ತಿದ್ದು, ರಿಷಬ್ ಯಾವೆಲ್ಲ ವಿಚಾರಗಳ ಕುರಿತು ಬೆಳಕು ಚೆಲ್ಲುತ್ತಾರೆ ಎನ್ನುವುದು ಕುತೂಹಲಕ್ಕೆ ಕಾರಣವಾಗಿದೆ.
It is, indeed, a golden era for South cinema. First, Telugu film RRR grabbed the Oscars and made its mark forever on the global map and now, Kannada film Kantara will be screened at the United Nations, Geneva, Switzerland on March 17th, which also happens to be actor Puneeth Rajkumar’s birth anniversary.
12-11-25 11:10 pm
Bangalore Correspondent
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
12-11-25 02:54 pm
HK News Desk
ದೆಹಲಿ ಘಟನೆ, ಆತ್ಮಹತ್ಯಾ ಬಾಂಬರ್ ಆಗಿರಲಿಲ್ಲ, ಆಕಸ್ಮ...
11-11-25 10:56 pm
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
13-11-25 01:44 pm
HK Staffer
Mangalore NMPT, Dinesh Gundu Rao, Congress, B...
12-11-25 06:56 pm
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
12-11-25 12:32 pm
Mangalore Correspondent
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm