ಬ್ರೇಕಿಂಗ್ ನ್ಯೂಸ್
16-03-23 10:23 pm HK News Desk ಕರ್ನಾಟಕ
ಚಿಕ್ಕಮಗಳೂರು, ಮಾ.16 : ಮೂಡಿಗೆರೆ ಬಿಜೆಪಿ ಶಾಸಕ ಎಂಪಿ ಕುಮಾರಸ್ವಾಮಿ ಬದಲಿಸಬೇಕೆಂದು ಬಿಜೆಪಿ ಕಾರ್ಯಕರ್ತರು ಹೆದ್ದಾರಿಯಲ್ಲಿ ಯಡಿಯೂರಪ್ಪ ಮತ್ತು ಸಿಟಿ ರವಿ ಅವರಿದ್ದ ಕಾರನ್ನು ಅಡ್ಡಗಟ್ಟಿ ಹೈಡ್ರಾಮಾ ನಡೆಸಿದ ಘಟನೆ ನಡೆದಿದೆ.
ಶಾಸಕ ಎಂ.ಪಿ.ಕುಮಾರಸ್ವಾಮಿ ವಿರುದ್ಧ ನೂರಾರು ಕಾರ್ಯಕರ್ತರು ಚಿಕ್ಕಮಗಳೂರು - ಮೂಡಿಗೆರೆ ಹೆದ್ದಾರಿಯ ನಡು ರಸ್ತೆಯಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಕುಮಾರಸ್ವಾಮಿ ಬೇಡವೇ ಬೇಡ ಅಂತ ಕೂಗಾಟ ನಡೆಸಿದ್ದು ಬಿ.ಎಸ್.ವೈ. ಬರುವ ಮಾರ್ಗದಲ್ಲಿ ರಸ್ತೆ ತಡೆದು ಭಾರೀ ಪ್ರತಿಭಟನೆ ನಡೆಸಿದ್ದಾರೆ. 1000ಕ್ಕೂ ಅಧಿಕ ಜನರು ರಾಷ್ಟ್ರೀಯ ಹೆದ್ದಾರಿಯಲ್ಲಿ ಪ್ರತಿಭಟನೆ ನಡೆಸಿದ್ದು ಬಿಜೆಪಿ ಸ್ಥಳೀಯ ಮುಖಂಡರು, ಕಾರ್ಯಕರ್ತರೇ ಸೇರಿ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಈ ವೇಳೆ, ಶಾಸಕ ಕುಮಾರಸ್ವಾಮಿ ಅವರನ್ನ ಪೊಲೀಸರು ಬೇರೆ ಕಡೆ ಕರೆದೊಯ್ದು ಬಚಾವ್ ಮಾಡಿದ್ದಾರೆ. ಬಿಜೆಪಿ ಕಾರ್ಯಕರ್ತರ ಆಕ್ರೋಶ ಹಿನ್ನೆಲೆಯಿಂದ ಬಿಎಸ್ವೈ ರೋಡ್ ಶೋ ಕ್ಯಾನ್ಸಲ್ ಮಾಡಿ ಬಂದ ದಾರಿಯಲ್ಲೇ ಹಿಂತಿರುಗಿದ್ದಾರೆ.

ಯಡಿಯೂರಪ್ಪ ಮತ್ತು ಸಿಟಿ ರವಿ ಅವರನ್ನ ರಸ್ತೆ ಮಧ್ಯೆಯೇ ಅಡ್ಡ ಹಾಕಿ ಪ್ರತಿಭಟನೆ ನಡೆಸಿದ್ದಾರೆ. ಇದರಿಂದ ನಾಯಕರು ತೀವ್ರ ಮುಜುಗರಕ್ಕೆ ಒಳಗಾಗಿದ್ದಾರೆ. ಅಲ್ಲದೆ ಸಿಟ್ಟುಗೊಂಡು, ರೋಡ್ ಶೋ ಕ್ಯಾನ್ಸಲ್ ಮಾಡಿ ಯಡಿಯೂರಪ್ಪ ನೇರವಾಗಿ ಹೆಲಿಪ್ಯಾಡ್ ಗೆ ತೆರಳಿದ್ದಾರೆ.
ಇದರಿಂದ ಗರಂ ಆದ ಸಿಟಿ ರವಿ, ಪಕ್ಷದ ಮರ್ಯಾದೆ ಕಳೆಯುತ್ತಿದ್ದೀರಾ ಎಂದು ಕಾರ್ಯಕರ್ತರ ಬಗ್ಗೆ ಸಿಟ್ಟಾಗಿದ್ದಾರೆ. ಆಕ್ರೋಶ ಇದ್ದರೆ, ನೀವು ಮೊದಲೇ ಮಾತನಾಡಿಕೊಳ್ಳಬೇಕಿತ್ತು. ಕಾರ್ಯಕ್ರಮ ಏರ್ಪಡಿಸಿ ಇಷ್ಟೆಲ್ಲ ಹೈಡ್ರಾಮಾ ಮಾಡಬೇಕಿತ್ತೇ ಎಂದು ಸ್ಥಳೀಯ ಮುಖಂಡರನ್ನು ತರಾಟೆಗೆತ್ತಿಕೊಂಡಿದ್ದಾರೆ.
#KarnatakaElections2023
— Apurva Mirajkar (@apurvasays) March 16, 2023
Another issue at BJP's Vijay Snakalp Yatra at Mudigere.
Party workers encircle BSY demanding ticket not to be given to MLA MP Kumaraswamy. Upset Yediyurappa canceled the road show because of the drama. pic.twitter.com/FmTmHUJyjf
Rift within the BJP in Karnataka were laid bare to the public today as former Karnataka Chief Minister BS Yediyurappa was forced to cancel the party's pre-election march in Chikkamagaluru district, after being gheraoed by party workers apparently supporting party national general secretary CT Ravi.
12-11-25 11:10 pm
Bangalore Correspondent
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
12-11-25 02:54 pm
HK News Desk
ದೆಹಲಿ ಘಟನೆ, ಆತ್ಮಹತ್ಯಾ ಬಾಂಬರ್ ಆಗಿರಲಿಲ್ಲ, ಆಕಸ್ಮ...
11-11-25 10:56 pm
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
13-11-25 01:44 pm
HK Staffer
Mangalore NMPT, Dinesh Gundu Rao, Congress, B...
12-11-25 06:56 pm
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
12-11-25 12:32 pm
Mangalore Correspondent
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm