ಬ್ರೇಕಿಂಗ್ ನ್ಯೂಸ್
19-03-23 01:17 pm Headline Karnataka Staffer ಕರ್ನಾಟಕ
ಬೆಂಗಳೂರು, ಮಾ.19: ಇತ್ತೀಚೆಗೆ ಪ್ರಧಾನಿ ಮೋದಿಯನ್ನು ಮಂಡ್ಯದಲ್ಲಿ ರೌಡಿಶೀಟರ್ ಫೈಟರ್ ರವಿ ಸ್ವಾಗತಿಸಿದ್ದು ಟೀಕೆಗೊಳಗಾಗುತ್ತಲೇ ಬಿಜೆಪಿ ಎಚ್ಚತ್ತುಕೊಂಡಿದೆ. ಬೆಂಗಳೂರಿನ ರೌಡಿ ಸೈಲೆಂಟ್ ಸುನಿಲನಿಗೂ ಬಿಜೆಪಿಗೂ ಯಾವುದೇ ಸಂಬಂಧವಿಲ್ಲ ಎಂದು ರಾಜ್ಯ ಪ್ರಧಾನ ಕಾರ್ಯದರ್ಶಿ ಅಶ್ವತ್ಥನಾರಾಯಣ್ ಪತ್ರಿಕಾ ಪ್ರಕಟಣೆ ಮೂಲಕ ಸ್ಪಷ್ಟನೆ ನೀಡಿದ್ದಾರೆ.
ಸೈಲೆಂಟ್ ಸುನೀಲ್, ಬಿಜೆಪಿ ಸದಸ್ಯತ್ವ ಪಡೆದಿದ್ದರೆ ಅದನ್ನು ರದ್ದು ಮಾಡಲಾಗುವುದು. ಅವರು ಪಾರ್ಟಿ ಹೆಸರಿನಲ್ಲಿ ಪ್ರಚಾರ ಮಾಡುತ್ತಿದ್ದರೆ, ಅದಕ್ಕೂ ನಮಗೂ ಸಂಬಂಧವಿಲ್ಲ ಎಂದು ಹೇಳಿದ್ದಾರೆ. ಹಲವು ಪ್ರಕರಣಗಳಲ್ಲಿ ಸಿಸಿಬಿ ಪೊಲೀಸರಿಗೆ ಸಿಗದೇ ತಲೆಮರೆಸಿಕೊಂಡಿದ್ದ ರೌಡಿ ಸೈಲೆಂಟ್ ಸುನೀಲ್, ಬೆಂಗಳೂರಿನ ಚಾಮರಾಜಪೇಟೆಯಲ್ಲಿ ಇತ್ತೀಚೆಗೆ ರಕ್ತದಾನ ಕಾರ್ಯಕ್ರಮ ಆಯೋಜಿಸಿದ್ದಲ್ಲದೆ, ಅದಕ್ಕೆ ಬಿಜೆಪಿ ನಾಯಕರನ್ನು ಕರೆಸಿದ್ದು ರೌಡಿ ಸುನೀಲ್ ಬಿಜೆಪಿ ಸೇರಲಿದ್ದಾನೆಂಬ ಸುದ್ದಿ ಹರಡಿತ್ತು. ಕಾರ್ಯಕ್ರಮದ ವಿಡಿಯೊ ಹಾಗೂ ಫೋಟೊಗಳು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿದ್ದು ವಿಪಕ್ಷಗಳು ಬಿಜೆಪಿಯನ್ನು ಹೀಗಳೆದಿದ್ದವು. ಆದರೆ ಇತ್ತೀಚೆಗೆ ಮೋದಿಯನ್ನು ಸ್ವಾಗತಿಸಿದ ಕಾರ್ಯಕ್ರಮದಲ್ಲಿ ಫೈಟರ್ ರವಿ ಕಾಣಿಸಿಕೊಂಡಿದ್ದು ಭಾರೀ ಮುಜುಗರ ಸೃಷ್ಟಿಸಿತ್ತು.
ಬೆಕ್ಕಿನ ಕಣ್ಣು ರಾಜೇಂದ್ರ ಕೊಲೆ ಸೇರಿ 17 ಪ್ರಕರಣಗಳಲ್ಲಿ ಆರೋಪಿ ಆಗಿದ್ದ ಸೈಲೆಂಟ್ ಸುನೀಲ್ನ ಹೆಸರು ಬೆಂಗಳೂರಿನ ಹಲವು ಠಾಣೆಗಳಲ್ಲಿ ರೌಡಿಪಟ್ಟಿಯಲ್ಲಿದೆ. ತಮ್ಮ ವಿರುದ್ಧದ 17 ಪ್ರಕರಣಗಳಿಗೂ ಸುನೀಲ್, ನ್ಯಾಯಾಲಯದಿಂದ ತಡೆಯಾಜ್ಞೆ ತಂದಿದ್ದಾನೆ. ಯಾವುದೇ ವಾರಂಟ್ಗಳು ಬಾಕಿ ಇಲ್ಲ. ಆನಂತರ ಬಿಬಿಎಂಪಿ ಕಸ ಸಾಗಣೆ ಹಾಗೂ ಇತರೆ ಕೆಲಸಗಳಲ್ಲಿ ತೊಡಗಿಸಿಕೊಂಡು ಹಣ ಮಾಡುತ್ತಿದ್ದಾನೆ. ಈಗ ಬಿಜೆಪಿ ಸೇರಿ ರಾಜಕೀಯಕ್ಕೆ ಬರಲು ಯೋಚಿಸುತ್ತಿದ್ದಾನೆ ಎನ್ನುವ ಮಾತುಗಳು ಕೇಳಿಬಂದಿದ್ದವು.
After a row over history-sheeter Silent Sunil’s membership in Karnataka BJP, the state unit has announced that he is expelled from the party. Sunil Kumar, aka Silent Sunil has a history of rowdy sheet and BJP claimed that he joined the party through the membership drive in Bengaluru’s Chamarajpet.
12-09-25 08:26 pm
HK News Desk
Yatnal, Maddur: ರಾಜ್ಯದಲ್ಲಿ ಹೊಸ ಹಿಂದು ಪಾರ್ಟಿ ಕ...
12-09-25 03:04 pm
ಸಾಹಸಸಿಂಹ ವಿಷ್ಣುವರ್ಧನ್, ಹಿರಿಯ ನಟಿ ಬಿ.ಸರೋಜಾದೇವಿ...
11-09-25 10:11 pm
ಈದ್ ಮೆರವಣಿಗೆ : ಶಿವಮೊಗ್ಗದಲ್ಲಿ ಪಾಕಿಸ್ತಾನ್ ಜಿಂದಾ...
09-09-25 10:52 pm
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
12-09-25 11:33 am
HK News Desk
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
12-09-25 10:58 pm
Mangalore Correspondent
Mahesh Vikram Hegde Arrested, Post Card Kanna...
12-09-25 09:25 pm
Sameer Md, Dharmasthala: ವಿದೇಶದಿಂದ ಫಂಡ್ ಬಂದಿ...
12-09-25 08:53 pm
RTI Dharmasthala Hostels, Mahesh Thimarodi: ಧ...
12-09-25 07:43 pm
Mangalore Road Accident, Pothole, Survery: ರಸ...
12-09-25 05:34 pm
12-09-25 11:07 pm
Mangalore Correspondent
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm
Mangalore Police, Arrest: ಉರ್ವಾದಲ್ಲಿ ಪೊಲೀಸ್ ಕ...
11-09-25 09:13 pm
Mangalore Fake Documents, Crime, Arrest: ಸರ್ಕ...
11-09-25 08:52 pm