ಬ್ರೇಕಿಂಗ್ ನ್ಯೂಸ್
19-03-23 10:51 pm HK News Desk ಕರ್ನಾಟಕ
ಬೆಂಗಳೂರು, ಮಾ.19: ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತಕ್ಕೆ (ಕೆಎಸ್ಡಿಎಲ್) ಕೆಮಿಕಲ್ ಆಯಿಲ್ ಪೂರೈಸುವ ಗುತ್ತಿಗೆಯ ಕಾರ್ಯಾದೇಶ ನೀಡಲು ಲಂಚಕ್ಕೆ ಬೇಡಿಕೆಯಿಟ್ಟ ಪ್ರಕರಣದಲ್ಲಿ ಶಾಸಕ ಕೆ. ಮಾಡಾಳು ವಿರೂಪಾಕ್ಷಪ್ಪ ಅವರನ್ನು ಬಂಧಿಸಿ ವಿಚಾರಣೆ ನಡೆಸಲೇಬೇಕು ಎಂದು ಲೋಕಾಯುಕ್ತ ಪೊಲೀಸರು ಹೈಕೋರ್ಟ್ನಲ್ಲಿ ವಾದ ಮಂಡನೆ ಮಾಡಿದ್ದಾರೆ.
ಅಕ್ರಮದಲ್ಲಿ ಮಾಡಾಳು ವಿರೂಪಾಕ್ಷಪ್ಪ ಅವರ ಪುತ್ರನ ಬಂಧನ ಆಗಿದೆ. ಅಲ್ಲದೆ, ವಿರೂಪಾಕ್ಷಪ್ಪ ಹೆಸರು ಕೂಡ ಪ್ರಸ್ತಾಪವಾಗಿದೆ. ವಿರೂಪಾಕ್ಷಪ್ಪ ಪ್ರತಿದಿನ ನೋಟ್ಸ್ ಬರೆದುಕೊಂಡು ಬಂದು ಪೊಲೀಸರ ಮುಂದೆ ಹೇಳಿಕೆ ನೀಡುತ್ತಿದ್ದಾರೆ. ಆದ್ದರಿಂದ, ಅವರನ್ನು ಬಂಧಿಸಿ ವಿಚಾರಣೆ ನಡೆಸಿದರೆ ತನಿಖೆಗೆ ಅನುಕೂಲವಾಗಲಿದೆ ಎಂದು ಲೋಕಾಯುಕ್ತ ಪೊಲೀಸರ ಪರ ವಕೀಲರು ನ್ಯಾಯಪೀಠಕ್ಕೆ ತಿಳಿಸಿದರು.
ಬಂಧನ ಭೀತಿ ಎದುರಿಸುತ್ತಿರುವ ಶಾಸಕ ಮಾಡಾಳು ವಿರೂಪಾಕ್ಷಪ್ಪ ಸಲ್ಲಿಸಿರುವ ನಿರೀಕ್ಷಣಾ ಜಾಮೀನು ಅರ್ಜಿಯನ್ನು ನ್ಯಾಯಮೂರ್ತಿ ಕೆ. ನಟರಾಜನ್ ಅವರಿದ್ದ ಪೀಠ ವಿಚಾರಣೆ ನಡೆಸಿತ್ತು. ಅರ್ಜಿದಾರರು ಹಾಗೂ ಲೋಕಾಯುಕ್ತ ಪರ ವಕೀಲರ ಸುದೀರ್ಘ ವಾದ-ಪ್ರತಿವಾದ ಆಲಿಸಿ ವಿಚಾರಣೆ ಪೂರ್ಣಗೊಳಿಸಿದ ಪೀಠ ಆದೇಶ ಕಾಯ್ದಿರಿಸಿತು.
'ವಿರೂಪಾಕ್ಷಪ್ಪ ಪರ ವಕೀಲರು, ಅರ್ಜಿದಾರರು ಪ್ರತಿದಿನವೂ ಲೋಕಾಯುಕ್ತ ಪೊಲೀಸರ ತನಿಖೆಗೆ ಹಾಜರಾಗಿದ್ದು, ತನಿಖೆಗೆ ಸಂಪೂರ್ಣ ಸಹಕಾರ ನೀಡಿದ್ದಾರೆ. ತನಿಖೆ ಮುಕ್ತಾಯದ ಹಂತದಲ್ಲಿರುವಾಗ ಅವರನ್ನು ಬಂಧಿಸಿ ವಿಚಾರಣೆ ನಡೆಸುವ ಅಗತ್ಯವಿಲ್ಲ. ಆದ್ದರಿಂದ, ನಿರೀಕ್ಷಣಾ ಜಾಮೀನು ಮಂಜೂರು ಮಾಡಬೇಕೆಂದು ಕೋರಿದರು.
ಲೋಕಾಯುಕ್ತ ಪೊಲೀಸರ ಪರ ಹಿರಿಯ ವಕೀಲರು ವಾದ ಮಂಡಿಸಿ, 'ಇಂದಿನ ದಿನಗಳಲ್ಲಿ ಲಂಚವನ್ನು ನೇರವಾಗಿ ಪಡೆಯುವುದಿಲ್ಲ. ಬೇರೊಬ್ಬರ ಮೂಲಕ ಸ್ವೀಕರಿಸುತ್ತಾರೆ. ಇಲ್ಲೂ ಸಹ ಅದೇ ರೀತಿಯಾಗಿದ್ದು, ಪುತ್ರನ ಮೂಲಕ ಲಂಚವನ್ನು ಪಡೆದಿದ್ದಾರೆ ಎಂದರು.
The Lokayukta police on Friday argued before the high court that Channagiri BJP MLA and former chairman of the Karnataka Soaps and Detergents Ltd (KSDL) K Madal Virupakshappa is required for custodial interrogation to obtain more information as he is not cooperating with the investigation and giving evasive answers.
12-11-25 11:10 pm
Bangalore Correspondent
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
12-11-25 02:54 pm
HK News Desk
ದೆಹಲಿ ಘಟನೆ, ಆತ್ಮಹತ್ಯಾ ಬಾಂಬರ್ ಆಗಿರಲಿಲ್ಲ, ಆಕಸ್ಮ...
11-11-25 10:56 pm
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
13-11-25 01:44 pm
HK Staffer
Mangalore NMPT, Dinesh Gundu Rao, Congress, B...
12-11-25 06:56 pm
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
12-11-25 12:32 pm
Mangalore Correspondent
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm