ಬ್ರೇಕಿಂಗ್ ನ್ಯೂಸ್
24-10-20 12:57 pm Bangalore Correspondent ಕರ್ನಾಟಕ
ಬೆಂಗಳೂರು,ಅಕ್ಟೋಬರ್ 24: ರಾಜಧಾನಿ ಬೆಂಗಳೂರಿನಲ್ಲಿ ಶುಕ್ರವಾರ ಸಂಜೆಯಿಂದ ಅಲ್ಲಿನ ಜನ ಕಂಡುಕೇಳರಿಯದ ರೀತಿ ಮಳೆಯಾಗಿದ್ದು, ಕೆಲವು ಕಡೆ ಊರಿಗೆ ಊರೇ ಮುಳುಗಿ ಹೋಗಿದೆ. ವೃಷಭಾವತಿ ನದಿ ಸಂಪರ್ಕಿಸುವ ರಾಜಕಾಲುವೆಗಳಲ್ಲಿ ನೆರೆ ಉಕ್ಕಿ ಬಂದಿದ್ದು, ರಸ್ತೆಗಳಲ್ಲಿ ಸಾಗುತ್ತಿದ್ದ ವಾಹನಗಳು, ಮನೆಗಳ ಅಕ್ಕ ಪಕ್ಕ ನಿಲ್ಲಿಸಿದ್ದ ವಾಹನಗಳು ನೀರಿನಲ್ಲಿ ತೇಲಿ ಹೋಗಿವೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೆರೆಹಳ್ಳಿಯ ವ್ಯಾಪ್ತಿಯಲ್ಲಿ ಭಾರೀ ಮಳೆಯಾಗಿದ್ದು, ಅಲ್ಲಿನ 500ಕ್ಕೂ ಹೆಚ್ಚು ಮನೆಗಳು ಮುಳುಗಡೆಯಾಗಿವೆ. ಈ ಭಾಗದಲ್ಲಿ ವೃಷಭಾವತಿ ಕಾಲುವೆಗೆ ಸಂಪರ್ಕಿಸುವ ಬೃಹತ್ ರಾಜಕಾಲುವೆಯ ಕಾಮಗಾರಿಗಾಗಿ ನೀರಿನ ದಿಕ್ಕನ್ನು ಬದಲಿಸಲಾಗಿತ್ತು. ಇದರಿಂದ ಭಾರೀ ಪ್ರಮಾಣದ ನೀರು ಒಮ್ಮೆಗೆ ನುಗ್ಗಿ ಬಂದಿದ್ದು, ಆಸುಪಾಸಿನ ಮನೆಗಳು, ಕಟ್ಟಡಗಳು ಜಲಾವೃತವಾಗಿದವು. ಹೊಸಕೆರೆಹಳ್ಳಿ ಪಿಇಎಸ್ ಕಾಲೇಜು ಹಿಂಭಾಗ ರಸ್ತೆಯಲ್ಲೇ ನೀರಿ ನದಿಯಂತೆ ಹರಿದಿದ್ದು, ನೋಡ ನೋಡುತ್ತಲೇ ಮಾರುತಿ ಸ್ವಿಫ್ಟ್ ಕಾರೊಂದು ಕೊಚ್ಚಿಕೊಂಡು ಹೋಗಿತ್ತು.



ಅಪಾರ್ಟ್ಮೆಂಟ್, ಮನೆಗಳಲ್ಲಿ ಸಿಲುಕಿದ್ದವರನ್ನು ಅಗ್ನಿಶಾಮಕ ತಂಡ ಹಾಗೂ ಎಸ್ಡಿಆರ್ಎಫ್ ಸಿಬ್ಬಂದಿ ಬೋಟ್ ಮೂಲಕ ರಕ್ಷಣೆ ಮಾಡಿದ್ದಾರೆ. ಹೊಸಕೆರೆಹಳ್ಳಿ ದತ್ತಾತ್ರೇಯ ದೇವಾಲಯವೂ ಮುಳುಗಿದೆ. ಬೆಂಗಳೂರು ನಗರ ಭಾಗದ ಬಸವನಗುಡಿ, ಹನುಮಂತನಗರ, ಕತ್ರಿಗುಪ್ಪೆ, ಪದ್ಮನಾಭನಗರ, ಜಯನಗರ, ಚಾಮರಾಜಪೇಟೆಯಲ್ಲಿ ಮಳೆ ಅಬ್ಬರಿಸಿದ್ದು, ರಸ್ತೆಗಳೆಲ್ಲ ಜಲಾವೃತವಾಗಿದ್ದವು. ಕೋರಮಂಗಲ 4ನೇ ಬ್ಲಾಕ್, ಸಿಟಿ ಬೆಡ್ ಭಾಸ್ಕರ್ ರಾವ್ ಪಾರ್ಕ್ ಹಾಗೂ ಶ್ರೀಕಂಠೇಶ್ವರ ಪಾರ್ಕ್ ಸುತ್ತಮುತ್ತಲ ರಸ್ತೆಗಳು, ಮನೆಗಳು ಜಲಾವೃತವಾಗಿ ಜನ ಪರದಾಡಿದರು.



ಮಳೆಯಿಂದಾಗಿ ಅವಾಂತರ ಸೃಷ್ಟಿಯಾದ ಹಿನ್ನೆಲೆಯಲ್ಲಿ ಬಿಬಿಎಂಪಿ ಅಧಿಕಾರಿಗಳು ಆಯಾ ಭಾಗಕ್ಕೆ ತೆರಳಿ ರಕ್ಷಣಾ ಕಾರ್ಯಾಚರಣೆ ಮಾಡುವಂತೆ ಸಿಎಂ ಯಡಿಯೂರಪ್ಪ ಸೂಚನೆ ನೀಡಿದ್ದಾರೆ. ಶುಕ್ರವಾರ ಸಂಜೆ ಒಂದೇ ಸಮನೆ ಕರಾವಳಿ, ಮಲೆನಾಡಿನಲ್ಲಿ ಸುರಿವ ರೀತಿ ಮಳೆಯಾಗಿದೆ. ಗುಡುಗು, ಮಿಂಚು ಸಹಿತ ಮಳೆಯಾಗಿದ್ದನ್ನು ನೋಡಿ ಬೆಂಗಳೂರಿನ ಜನ ಅಚ್ಚರಿ ಪಟ್ಟಿದ್ದಾರೆ. ಹವಾಮಾನ ಇಲಾಖೆ, ಇನ್ನೂ ಎರಡು ದಿನ ಮಳೆಯಾಗುವ ಸೂಚನೆ ನೀಡಿದೆ. ಹೀಗಾಗಿ ಶನಿವಾರ ಮತ್ತು ಭಾನುವಾರ ಮಳೆಯಾಗಲಿದ್ದು, ಬೆಂಗಳೂರಿನ ಜನ ಎಚ್ಚರವಾಗಿರುವಂತೆ ಸೂಚನೆ ನೀಡಲಾಗಿದೆ.
WATCH: Heavy rain in various parts of Bengaluru. Roads waterlogged, traffic disrupted in several areas after heavy rain. @IndianExpress pic.twitter.com/MsbQepPGyy
— Darshan Devaiah B P (@DarshanDevaiahB) October 23, 2020
Waterlogged underpass in Tagore circle near Gandhi Bazaar, Basavanagudi, #Bengaluru @IndianExpress pic.twitter.com/tAVjPCQsbk
— Darshan Devaiah B P (@DarshanDevaiahB) October 23, 2020
Bengaluru's problem is greed. Bottomless greed of its elected representatives, officials, builders and others. Powerful cartels run the city. It is beyond repair. No hope, if we can't fix the real issues. #bengalururain pic.twitter.com/IvWpnY3Zy0
— DP SATISH (@dp_satish) October 23, 2020
Let's encroach lakes
— Meena (@meenabg) October 23, 2020
Let's build concrete buildings
Let's not allow rain water to drain into the land
Let's not collect precious rain water
And let's enjoy such scenes
Hey let's not forget to curse heavy rains #BengaluruRains https://t.co/MSFWAQCKtO
16-03-26 05:52 pm
HK News Staffer
ಐಎಎಸ್ ಅಧಿಕಾರಿಯೆಂದು ಪೋಸು ಕೊಟ್ಟು ಜನಸಾಮಾನ್ಯರಿಗೆ,...
16-03-26 03:36 pm
Chitradurga Accident: ಚಿತ್ರದುರ್ಗದಲ್ಲಿ ಭೀಕರ ಅಪ...
15-03-26 04:27 pm
ಲಿವರ್ ಸಿರೋಸಿಸ್ ಕಾಯಿಲೆಗೆ ತುತ್ತಾಗಿದ್ದ ತಂದೆ ; ತನ...
14-03-26 10:14 pm
ಮಲೆನಾಡಿಗೆ ಇಂಡಿಗೋ ಆಘಾತ ; ವಿಮಾನ ದುರಂತ ಹಿನ್ನೆಲೆ,...
13-03-26 12:09 pm
16-03-26 09:30 pm
HK News Staffer
ಇರಾನ್ ದಾಳಿ ಬಗ್ಗೆ ಎಐ ವಿಡಿಯೋ ಆಧರಿತ ಸುಳ್ಳು ಸುದ್ದ...
16-03-26 02:44 pm
ಯುಪಿಎಸ್ಸಿ ಪಾಸ್, ಐಎಎಸ್ ಅಧಿಕಾರಿ ಆಗುತ್ತೇನೆಂದು ನಂ...
16-03-26 12:38 pm
ಒಡಿಶಾದ ಕಟಕ್ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ ; I...
16-03-26 12:34 pm
ಇರಾನ್ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ರಷ್ಯಾಕ್ಕೆ ;...
15-03-26 05:37 pm
16-03-26 09:48 pm
Mangaluru Staffer
Moodbidri Inspector Sandesh, Police: ಮೂಡುಬಿದ್...
16-03-26 07:20 pm
Gas Tanker Accident: ಕಟಪಾಡಿ ಹೆದ್ದಾರಿಯಲ್ಲಿ ಗ್ಯ...
16-03-26 02:46 pm
Besant Evening College, Blood Donation: ಬೆಸೆಂ...
15-03-26 09:10 pm
Udupi Accident: ತಾಯಿ-ಮಗ ತೆರಳುತ್ತಿದ್ದ ಸ್ಕೂಟರ್...
14-03-26 09:26 pm
15-03-26 12:49 pm
HK News Desk
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am