ಬ್ರೇಕಿಂಗ್ ನ್ಯೂಸ್
24-03-23 04:38 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.24: ಟಿಕೆಟ್ ಬೇಡಿಕೆ ಮುಂದಿಟ್ಟು ಸಿದ್ದರಾಮಯ್ಯ ನಿವಾಸದಲ್ಲಿ ಹಾಲಿ ಶಾಸಕ ಹರಿಹರ ರಾಮಪ್ಪ ಹಾಗೂ ವಿಧಾನಪರಿಷತ್ ಬಿಜೆಪಿ ಸದಸ್ಯ ಆರ್.ಶಂಕರ್ ಪರವಾಗಿ ಕಾರ್ಯಕರ್ತರು ಜಮಾಯಿಸಿದ್ದರು. ಕಾರ್ಯಕರ್ತರ ಜೊತೆಗೆ ಮಾತನಾಡಿಸಲು ಸಿದ್ದರಾಮಯ್ಯ ಆಗಮಿಸಿದ ಸಂದರ್ಭದಲ್ಲಿ ನಡೆದ ತಳ್ಳಾಟದಿಂದ ಗರಂ ಆದ ಸಿದ್ದು, ಕಾರ್ಯಕರ್ತರೊಬ್ಬರ ಕಪಾಳಕ್ಕೆ ಬಾರಿಸಿದ ಪ್ರಸಂಗ ನಡೆಯಿತು.
ಶುಕ್ರವಾರ ಬೆಳಗ್ಗೆ ಶಿವಾನಂದ ಸರ್ಕಲ್ ಬಳಿ ಇರುವ ಸಿದ್ದರಾಮಯ್ಯ ನಿವಾಸಕ್ಕೆ ಶಾಸಕ ರಾಮಪ್ಪ ಬೆಂಬಲಿಗರು ಆಗಮಿಸಿದ್ದರು. ರಾಮಪ್ಪ ಅವರಿಗೆ ಟಿಕೆಟ್ ಕೈ ತಪ್ಪುವ ಸಾಧ್ಯತೆ ಹಿನ್ನೆಲೆಯಲ್ಲಿ ಬೆಂಬಲಿಗರು ಜಮಾಯಿಸಿ ಟಿಕೆಟ್ ನೀಡುವಂತೆ ಆಗ್ರಹಿಸಿದರು. ಮತ್ತೊಂದು ಕಡೆಯಲ್ಲಿ ಸಿದ್ದರಾಮಯ್ಯ ಅವರ ನಿವಾಸಕ್ಕೆ ಆರ್. ಶಂಕರ್ ಬೆಂಬಲಿಗರು ಕೂಡಾ ಆಗಮಿಸಿದ್ದರು. ರಾಣೆಬೆನ್ನೂರು ಕ್ಷೇತ್ರದ ಟಿಕೆಟ್ ನೀಡುವಂತೆ ಕಾರ್ಯಕರ್ತರು ಸಿದ್ದರಾಮಯ್ಯ ಬಳಿ ಒತ್ತಾಯಿಸಿದರು.
ಈ ವೇಳೆ ಕಾರ್ಯಕರ್ತರ ಜೊತೆಗೆ ಮಾತನಾಡಲು ಸಿದ್ದರಾಮಯ್ಯ ಆಗಮಿಸಿದರು. ಇದೇ ಸಂದರ್ಭದಲ್ಲಿ ಸಿದ್ದರಾಮಯ್ಯ ಜೊತೆ ಮಾತನಾಡಲು ಕಾರ್ಯಕರ್ತರು ಮುಗಿಬಿದ್ದರು. ಈ ವೇಳೆ ಉಂಟಾದ ತಳ್ಳಾಟದಿಂದ ಕೋಪಗೊಂಡ ಸಿದ್ದರಾಮಯ್ಯ ಕಾರ್ಯಕರ್ತನೊಬ್ಬನಿಗೆ ಕಪಾಲಮೋಕ್ಷ ಮಾಡಿದರು.
ಕಾಂಗ್ರೆಸ್ ನಲ್ಲಿ ಟಿಕೆಟ್ ಗಾಗಿ ಅಂತಿಮ ಹಂತದ ಲಾಬಿ ನಡೆಯುತ್ತಿದೆ. ಅದರಲ್ಲೂ ರಾಣೆಬೆನ್ನೂರು ಟಿಕೆಟ್ ಗಾಗಿ ಆರ್. ಶಂಕರ್ ಬೆಂಬಲಿಗರು ಸಿದ್ದರಾಮಯ್ಯ ಮನೆಗೆ ಬಂದಿರುವುದು ಕುತೂಹಲ ಕೆರಳಿಸಿದೆ. ಆರ್. ಶಂಕರ್ ಕಾಂಗ್ರೆಸ್ ಸೇರ್ಪಡೆಗೆ ಪ್ರಯತ್ನಿಸಿದ್ದರು. ಆದರೆ ಅದಕ್ಕೆ ಸಿದ್ದರಾಮಯ್ಯ ಅವರೇ ವಿರೋಧ ವ್ಯಕ್ತಪಡಿಸಿದ್ದಾರೆ ಎಂಬ ಮಾಹಿತಿ ಇದೆ. ಈ ನಡುವೆ ಅವರ ಬೆಂಬಲಿಗರು ಸಿದ್ದರಾಮಯ್ಯ ಮನೆಯಲ್ಲಿ ಜಮಾಯಿಸಿ ಟಿಕೆಟ್ ಗಾಗಿ ಬೇಡಿಕೆ ಇಟ್ಟಿದ್ದಾರೆ.
An irked @siddaramaiah slaps a Congress worker outside his residence, dozens of supporters had gathered to meet him, the man who was slapped is said to have repeatedly asked Siddaramaiah about the ticket for his leader. pic.twitter.com/caGK7qKaJ5
— Deepak Bopanna (@dpkBopanna) March 24, 2023
Congress leader Siddaramaiah today slapped a man when he was reportedly surrounded by a group of supporters demanding election ticket for a party MLA.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm