ಬ್ರೇಕಿಂಗ್ ನ್ಯೂಸ್
24-03-23 10:56 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.24 : 2 ಬಿಯಲ್ಲಿರುವ ಮುಸ್ಲಿಮರ ಮೀಸಲಾತಿಗೆ ಕತ್ತರಿ ಪ್ರಯೋಗ ಹಾಕಿದ್ದು, ಅದನ್ನು ಪ್ರತಿಯಾಗಿ ಒಕ್ಕಲಿಗರಿಗೆ ಹಾಗೂ ವೀರಶೈವ ಲಿಂಗಾಯತರಿಗೆ ಹಂಚಿಕೆ ಮಾಡಿ ರಾಜ್ಯ ಸಚಿವ ಸಂಪುಟ ಮಹತ್ವದ ನಿರ್ಧಾರ ಕೈಗೊಂಡಿದೆ.
ಶುಕ್ರವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಕುರಿತಾದ ಮಹತ್ವದ ತೀರ್ಮಾನವನ್ನು ಕೈಗೊಳ್ಳಲಾಗಿದೆ. 2 ಬಿಯಲ್ಲಿರುವ ಮುಸ್ಲಿಮರಿಗೆ ಶೇ. 4 ರಷ್ಟು ಮೀಸಲಾತಿ ಇತ್ತು. ಆದರೆ ಇದೀಗ ಅದನ್ನು 2 ಸಿ ಗೆ ಶೇ 2 ಹಾಗೂ 2 ಡಿಗೆ ಶೇ. 2 ರಷ್ಟು ಹಂಚಿಕೆ ಮಾಡಲಾಗಿದೆ. ಇನ್ನು 2 ಬಿಯಲ್ಲಿದ್ದ ಮುಸ್ಲಿಮರಿಗೆ ಆರ್ಥಿಕ ಹಿಂದುಳಿದ ವರ್ಗ (ಇಡಬ್ಲ್ಯೂಎಸ್) ಮೀಸಲಾತಿ ವ್ಯಾಪ್ತಿಗೆ ವರ್ಗಾವಣೆ ಮಾಡಿ ಸಂಪುಟ ನಿರ್ಧಾರ ಕೈಗೊಂಡಿದೆ. ಈ ಮೂಲಕ 2 ಸಿ ಯಲ್ಲಿರುವ ಒಕ್ಕಲಿಗರಿಗೆ ಶೇ. 4 ರಿಂದ ಶೇ. 6 ಹಾಗೂ 2 ಡಿ ಯಲ್ಲಿರುವ ವೀರಶೈವ ಹಾಗೂ ಲಿಂಗಾಯತರಿಗೆ ಶೇ. 5 ರಿಂದ ಶೇ 7 ರಷ್ಟು ಮೀಸಲಾತಿ ಹೆಚ್ಚಳ ಆಗುತ್ತದೆ.
ಎಸ್ ಸಿ ಒಳಮೀಸಲಾತಿ ಬಗ್ಗೆ ಕ್ಯಾಬಿನೆಟ್ ಸಬ್ ಕಮಿಟಿ ರಚನೆ ಮಾಡಲಾಗಿತ್ತು. ಕಾನೂನು ಸಚಿವ ಜೆ.ಸಿ ಮಾಧುಸ್ವಾಮಿ ನೇತೃತ್ವದ ಸಂಪುಟ ಉಪಸಮಿತಿ ನೀಡಿದ ವರದಿಗೆ ಕ್ಯಾಬಿನೆಟ್ ಅಸ್ತು ಎಂದಿದೆ. ಎಸ್ ಸಿ ಮೀಸಲಾತಿಯಲ್ಲಿ ಎಲ್ಲರಿಗೂ ನ್ಯಾಯ ಸಿಗುವ ನಿಟ್ಟಿನಲ್ಲಿ ಆರ್ಟಿಕಲ್ 341(2) ಅನ್ವಯ ನಾಲ್ಕು ಗುಂಪುಗಳಾಗಿ ವರ್ಗೀಕರಣ ಮಾಡಲಾಗಿದೆ.
ಎಸ್ ಸಿ (ಎಡ) ಶೇ.6, ಎಸ್ ಸಿ (ಬಲ) ಶೇ. 5.5, ಸ್ಪರ್ಶರಿಗೆ ಶೇ. 4.5 ಹಾಗೂ ಇತರರಿಗೆ ಶೇ. 1 ರಷ್ಟು ನೀಡಲು ಸಂಪುಟ ಉಪಸಮಿತಿ ಮಾಡಿದ ಶಿಫಾರಸ್ಸುಗೆ ಕ್ಯಾಬಿನೆಟ್ ಸಮ್ಮತಿ ನೀಡಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದರು. ಕಾಡು ಕುರುಬ ಹಾಗೂ ಗೊಂಡ ಕುರುಬ ಪಂಗಡವನ್ನು ಎಸ್ ಟಿ ಮೀಸಲಾತಿ ಪಟ್ಟಿಗೆ ಸೇರಿಸುವ ಸಂಬಂಧ ಕೇಂದ್ರಕ್ಕೆ ಶಿಫಾರಸು ಮಾಡಲು ಸಂಬಂಧಿತ ಇಲಾಖೆಗೆ ಸೂಚನೆ ನೀಡಲು ಸಂಪುಟ ಸಭೆಯಲ್ಲಿ ತೀರ್ಮಾನ ಮಾಡಲಾಗಿದೆ. ನಾಲ್ಕು ಜಿಲ್ಲೆಗಳಲ್ಲಿರುವ ಕುರುಬ ಸಮುದಾಯದ ಪಂಗಡವಾದ ಕಾಡು ಕುರಬ ಹಾಗೂ ಗೊಂಡ ಕುರುಬರನ್ನು ಶಿಫಾರಸು ಮಾಡಿದೆ. ಮೈಸೂರು ವಿಶ್ವ ವಿದ್ಯಾನಿಲಯ ಮಾನವ ಶಾಸ್ತ್ರ ಅಧ್ಯಯನ ವಿಭಾಗಕ್ಕೆ ಕುಲಶಾಸ್ತ್ರ ಅಧ್ಯಯನ ಮಾಡುವಂತೆ ತಿಳಿಸಲಾಗಿತ್ತು. ಅವರು ಗುರುವಾರ ಅಧ್ಯಯನ ವರದಿಯನ್ನು ನೀಡಿದ್ದರು. ಅದೂ ಕೂಡ ಸಂಪುಟದಲ್ಲಿ ಚರ್ಚೆ ಆಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದರು.
Karnataka’s outgoing government headed by Basavaraj Bommai on Friday decided to take off Muslims from the other backward communities (OBC) list and move them into the economically weaker sections (EWS) quota while handing a 2% increase for the dominant Lingayats and Vokkaligas.
15-01-26 05:56 pm
HK News Desk
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
15-01-26 10:24 pm
Mangalore Correspondent
ಗೋ ಸೇವೆಗೆ ಜನಸಾಮಾನ್ಯರು ಕೊಡುಗೆ ನೀಡಲು ವೇದಿಕೆ ; ಕ...
15-01-26 10:07 pm
ದಕ್ಷಿಣ ಕನ್ನಡದ ಸರ್ಕಾರಿ ಶಾಲೆಗಳಿಗೆ ಇಸ್ರೇಲ್ ಡಿಜಿ...
15-01-26 09:04 pm
ಮನರೇಗಾ ಜಾರಿಗೆ ಒತ್ತಾಯಿಸಿ ಸುಳ್ಯದಿಂದ ಮುಲ್ಕಿಗೆ ಪಾ...
15-01-26 08:12 pm
ಜ.18ರಂದು ಮಂಗಳೂರಿನಲ್ಲಿ ಪ್ರಪ್ರಥಮ ಜಾಗತಿಕ ಬಿಲ್ಲವರ...
15-01-26 04:01 pm
15-01-26 11:07 pm
Bangalore Correspondent
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm