ಬ್ರೇಕಿಂಗ್ ನ್ಯೂಸ್
26-03-23 11:44 am HK News Desk ಕರ್ನಾಟಕ
ಯಾದಗಿರಿ, ಮಾ.26: ಜೆಡಿಎಸ್ ನಾಯಕರು ಹಮ್ಮಿಕೊಂಡಿದ್ದ ಪಂಚರತ್ನ ರಥಯಾತ್ರೆಗೆ ಬಳಸಿ ಎಸೆದಿದ್ದ ಹಳಸಿದ ಅನ್ನ, ಸಾಂಬಾರನ್ನು ತಿಂದ ಸುಮಾರು 15ಕ್ಕೂ ಹೆಚ್ಚು ಜಾನುವಾರುಗಳು ದಾರುಣ ಮೃತಪಟ್ಟ ಘಟನೆ ಯಾದಗಿರಿ ತಾಲೂಕಿನ ಯರಗೋಳ ಗ್ರಾಮದಲ್ಲಿ ನಡೆದಿದೆ.
ಯರಗೋಳ ಹೊರವಲಯದಲ್ಲಿ ಮೊನ್ನೆ ಮಾ.23ರಂದು ಜೆಡಿಎಸ್ ಪಂಚರತ್ನ ರಥಯಾತ್ರೆಯ ಅಂಗವಾಗಿ ಸಮಾವೇಶದಲ್ಲಿ ಊಟದ ವ್ಯವಸ್ಥೆ ಮಾಡಲಾಗಿತ್ತು. ಅಲ್ಲಿ ಉಳಿದ ಅನ್ನಾಹಾರವನ್ನು ಅಲ್ಲಿಯೇ ಹೊಲದ ಬಳಿ ಬಿಸಾಡಿ ಹೋಗಿದ್ದರು. ಎರಡು ದಿನಗಳಲ್ಲಿ ಬಿಸಿಲಿಗೆ ಹಾಳಾಗಿದ್ದ ಆಹಾರವನ್ನು ದನಗಳು ತಿಂದಿದ್ದು 15ಕ್ಕೂ ಹೆಚ್ಚು ಜಾನುವಾರುಗಳು ಹೊಟ್ಟೆಯುಬ್ಬಿ ಮೃತಪಟ್ಟಿವೆ.
ಗುರುಮಠಕಲ್ ಜೆಡಿಎಸ್ ಅಭ್ಯರ್ಥಿ ಶರಣಗೌಡ ಕಂದಕೂರ್ ಕಾರ್ಯಕ್ರಮ ಆಯೋಜನೆ ಮಾಡಿದ್ದರು. ಸಮಾವೇಶದ ನಂತರ ಉಳಿದ ಅನ್ನಾಹಾರವನ್ನು ವಿಲೇವಾರಿಗೊಳಿಸದೆ ನಿರ್ಲಕ್ಷ್ಯ ವಹಿಸಿದ್ದೇ ಜಾನುವಾರುಗಳ ಸಾವಿಗೆ ಕಾರಣ ಎಂಬ ಆರೋಪವನ್ನು ರೈತರು ಮಾಡಿದ್ದಾರೆ. ಮಾಹಿತಿ ತಿಳಿಯುತ್ತಲೇ ಪಶು ವೈದ್ಯರ ತಂಡ ಭೇಟಿ ನೀಡಿದ್ದು, ಮೃತಪಟ್ಟ ಜಾನುವಾರುಗಳ ಮರಣೋತ್ತರ ಪರೀಕ್ಷೆ ನಡೆಸಿದೆ. ಅಸ್ವಸ್ಥಗೊಂಡ 10ಕ್ಕೂ ಹೆಚ್ಚು ಜಾನುವಾರುಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ.
ಘಟನೆ ಬಗ್ಗೆ ತೀವ್ರ ಆಘಾತ ವ್ಯಕ್ತಪಡಿಸಿದ ಜೆಡಿಎಸ್ ನಾಯಕ ಶರಣುಗೌಡ ಕಂದಕೂರ, ರೈತರನ್ನು ಸಂಪರ್ಕಿಸಿ ಸಾಂತ್ವನ ಹೇಳಿದ್ದಾರೆ. ಜಾನುವಾರುಗಳ ಮಾಲೀಕರುಗಳಿಗೆ ಧನಸಹಾಯ ನೀಡಿದ್ದು, ತ್ಯಾಜ್ಯ ವಿಲೇವಾರಿ ಹೊಣೆ ಹೊತ್ತಿದ್ದ ತಂಡವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
About 15 cattle succumbed to food poisoning after consuming left over food from an election rally organised by the Janata Dal (Secular) party at Yeragol village in Yadgir district.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm