ಬ್ರೇಕಿಂಗ್ ನ್ಯೂಸ್
28-03-23 11:09 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.28 : ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದಲ್ಲಿ ಮಾಜಿ ಸಿಎಂ ಯಡಿಯೂರಪ್ಪ ಮನೆಗೆ ನಡೆದ ದಾಳಿಗೆ ಬಿಜೆಪಿ ಒಳಗಿನ ವಿರೋಧಿ ಬಣದ ಪಿತೂರಿಯೇ ಕಾರಣ ಎಂದು ಕಾಂಗ್ರೆಸ್ ಕಟಕಿಯಾಡಿದೆ. ಯಡಿಯೂರಪ್ಪ ಸರ್ಕಾರದ ಮುಖ್ಯಮಂತ್ರಿಯಲ್ಲ, ಸರ್ಕಾರದ ನಿರ್ಧಾರಗಳಲ್ಲಿ ಅವರ ಪಾತ್ರವಿಲ್ಲ. ಆದರೂ ಸರ್ಕಾರದ ಅವಾಂತರಕ್ಕೆ ಬಿಎಸ್ವೈ ಮನೆ ಮೇಲೆ ದಾಳಿ ಆಗಿದ್ದೇಕೆ? ಗುಪ್ತಚರ ಇಲಾಖೆ, ಪೊಲೀಸ್ ಇಲಾಖೆ ಕಣ್ಮುಚ್ಚಿ ಕುಳಿತಿದ್ದೇಕೆ ಎನ್ನುವುದೇ ಯಕ್ಷಪ್ರಶ್ನೆ. ಯಡಿಯೂರಪ್ಪ ಅವರ ಮನೆಯ ಮೇಲಿನ ದಾಳಿಯ ಹಿಂದೆ ಬಿಜೆಪಿಯ "ಸಂತೋಷ ಕೂಟ"ದ ಕೈವಾಡ ಇರುವುದು ನಿಶ್ಚಿತ ಎಂದು ಕಾಂಗ್ರೆಸ್ ಟ್ವೀಟ್ ಮಾಡಿದೆ.
ಅಲ್ಲದೆ, ಬಂಜಾರ ಸಮುದಾಯದ ಪ್ರತಿಭಟನೆ ಹಿಂದೆ ಕಾಂಗ್ರೆಸ್ ಕೈವಾಡ ಇದೆಯೆಂದು ದೂರಿದ್ದ ಗೃಹ ಸಚಿವ ಆರಗ ಜ್ಞಾನೇಂದ್ರ ವಿರುದ್ಧವೂ ಕಾಂಗ್ರೆಸ್ ಕಿಡಿಕಾರಿದೆ. ಪ್ರತಿ ಬಾರಿ ಕಾನೂನು ಸುವ್ಯವಸ್ಥೆ ಉಲ್ಲಂಘನೆಯ ಪ್ರಕರಣಗಳು, ಗಲಭೆ, ಘರ್ಷಣೆಯ ಬೀಜ ಬಿತ್ತುವುದು ಗೃಹ ಸಚಿವರ ತವರು ಜಿಲ್ಲೆಯಲ್ಲೇ ಏಕೆ..? ತನ್ನ ತವರಿನಲ್ಲಿ, ಅದರಲ್ಲೂ ಮಾಜಿ ಸಿಎಂ ಮನೆ ಬಳಿ ಕಾನೂನು ಸುವ್ಯವಸ್ಥೆ ಕಾಪಾಡಲಾಗದ ಆರಗ ಜ್ಞಾನೇಂದ್ರ ಅವರದ್ದು ಹೊಣೆಗೇಡಿತನವೋ ಅಥವಾ "ಸಂತೋಷ ಕೂಟ"ವನ್ನು ಮೆಚ್ಚಿಸುವ ಷಡ್ಯಂತ್ರವೋ? ಎಂದು ಕಾಂಗ್ರೆಸ್ ಟ್ವೀಟ್ ಮಾಡಿ ತಿವಿದಿದೆ.
ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಕುರಿತ ಎಜೆ ಸದಾಶಿವ ಸಮಿತಿ ವರದಿಯನ್ನು ಜಾರಿಗೊಳಿಸಲು ಕೇಂದ್ರಕ್ಕೆ ಶಿಫಾರಸು ಮಾಡುವ ರಾಜ್ಯ ಸರ್ಕಾರದ ನಿರ್ಧಾರವನ್ನು ವಿರೋಧಿಸಿ ಬಂಜಾರ ಸಮುದಾಯದವರು ಶಿಕಾರಿಪುರದಲ್ಲಿ ನಡೆಸಿದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿತ್ತು. ಶಿಕಾರಿಪುರದ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರ ನಿವಾಸದ ಮೇಲೆ ಪ್ರತಿಭಟನಾಕಾರರು ಕಲ್ಲು ತೂರಾಟ ನಡೆಸಿದ್ದರು.
'@BSYBJP ಅವರ ಮನೆ ಮೇಲಿನ ದಾಳಿಯ ಹಿಂದೆ ಬಿಜೆಪಿಯ ಯಡಿಯೂರಪ್ಪ ವಿರೋಧಿ ಬಣದ ಕೈವಾಡವಿರುವ ಸಾಧ್ಯತೆಯನ್ನು ಅಲ್ಲಗಳೆಯುವಂತಿಲ್ಲ.
— Karnataka Congress (@INCKarnataka) March 28, 2023
ದಮ್ಮು ತಾಕತ್ತಿನ ಮುಖ್ಯಮಂತ್ರಿಗಳೇ,
ಒಮ್ಮೆ @CTRavi_BJP ಹಾಗೂ @blsanthosh ಅವರನ್ನು ವಿಚಾರಣೆಗೆ ಒಳಪಡಿಸಿ, ತನಿಖೆ ನಡೆಸಿ.
ಹಾಗೂ BSYರಿಗೆ ಬಿಜೆಪಿಯವರಿಂದ ಅಪಾಯವಿದೆ, ಅವರಿಗೆ ರಕ್ಷಣೆ ಹೆಚ್ಚಿಸಬೇಕು.
BS Yediyurappas home, office attacked by protesters over reservation, BJP leader conspiracy says Congress tweet.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm