ಬ್ರೇಕಿಂಗ್ ನ್ಯೂಸ್
28-03-23 11:09 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.28 : ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದಲ್ಲಿ ಮಾಜಿ ಸಿಎಂ ಯಡಿಯೂರಪ್ಪ ಮನೆಗೆ ನಡೆದ ದಾಳಿಗೆ ಬಿಜೆಪಿ ಒಳಗಿನ ವಿರೋಧಿ ಬಣದ ಪಿತೂರಿಯೇ ಕಾರಣ ಎಂದು ಕಾಂಗ್ರೆಸ್ ಕಟಕಿಯಾಡಿದೆ. ಯಡಿಯೂರಪ್ಪ ಸರ್ಕಾರದ ಮುಖ್ಯಮಂತ್ರಿಯಲ್ಲ, ಸರ್ಕಾರದ ನಿರ್ಧಾರಗಳಲ್ಲಿ ಅವರ ಪಾತ್ರವಿಲ್ಲ. ಆದರೂ ಸರ್ಕಾರದ ಅವಾಂತರಕ್ಕೆ ಬಿಎಸ್ವೈ ಮನೆ ಮೇಲೆ ದಾಳಿ ಆಗಿದ್ದೇಕೆ? ಗುಪ್ತಚರ ಇಲಾಖೆ, ಪೊಲೀಸ್ ಇಲಾಖೆ ಕಣ್ಮುಚ್ಚಿ ಕುಳಿತಿದ್ದೇಕೆ ಎನ್ನುವುದೇ ಯಕ್ಷಪ್ರಶ್ನೆ. ಯಡಿಯೂರಪ್ಪ ಅವರ ಮನೆಯ ಮೇಲಿನ ದಾಳಿಯ ಹಿಂದೆ ಬಿಜೆಪಿಯ "ಸಂತೋಷ ಕೂಟ"ದ ಕೈವಾಡ ಇರುವುದು ನಿಶ್ಚಿತ ಎಂದು ಕಾಂಗ್ರೆಸ್ ಟ್ವೀಟ್ ಮಾಡಿದೆ.
ಅಲ್ಲದೆ, ಬಂಜಾರ ಸಮುದಾಯದ ಪ್ರತಿಭಟನೆ ಹಿಂದೆ ಕಾಂಗ್ರೆಸ್ ಕೈವಾಡ ಇದೆಯೆಂದು ದೂರಿದ್ದ ಗೃಹ ಸಚಿವ ಆರಗ ಜ್ಞಾನೇಂದ್ರ ವಿರುದ್ಧವೂ ಕಾಂಗ್ರೆಸ್ ಕಿಡಿಕಾರಿದೆ. ಪ್ರತಿ ಬಾರಿ ಕಾನೂನು ಸುವ್ಯವಸ್ಥೆ ಉಲ್ಲಂಘನೆಯ ಪ್ರಕರಣಗಳು, ಗಲಭೆ, ಘರ್ಷಣೆಯ ಬೀಜ ಬಿತ್ತುವುದು ಗೃಹ ಸಚಿವರ ತವರು ಜಿಲ್ಲೆಯಲ್ಲೇ ಏಕೆ..? ತನ್ನ ತವರಿನಲ್ಲಿ, ಅದರಲ್ಲೂ ಮಾಜಿ ಸಿಎಂ ಮನೆ ಬಳಿ ಕಾನೂನು ಸುವ್ಯವಸ್ಥೆ ಕಾಪಾಡಲಾಗದ ಆರಗ ಜ್ಞಾನೇಂದ್ರ ಅವರದ್ದು ಹೊಣೆಗೇಡಿತನವೋ ಅಥವಾ "ಸಂತೋಷ ಕೂಟ"ವನ್ನು ಮೆಚ್ಚಿಸುವ ಷಡ್ಯಂತ್ರವೋ? ಎಂದು ಕಾಂಗ್ರೆಸ್ ಟ್ವೀಟ್ ಮಾಡಿ ತಿವಿದಿದೆ.
ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಕುರಿತ ಎಜೆ ಸದಾಶಿವ ಸಮಿತಿ ವರದಿಯನ್ನು ಜಾರಿಗೊಳಿಸಲು ಕೇಂದ್ರಕ್ಕೆ ಶಿಫಾರಸು ಮಾಡುವ ರಾಜ್ಯ ಸರ್ಕಾರದ ನಿರ್ಧಾರವನ್ನು ವಿರೋಧಿಸಿ ಬಂಜಾರ ಸಮುದಾಯದವರು ಶಿಕಾರಿಪುರದಲ್ಲಿ ನಡೆಸಿದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿತ್ತು. ಶಿಕಾರಿಪುರದ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರ ನಿವಾಸದ ಮೇಲೆ ಪ್ರತಿಭಟನಾಕಾರರು ಕಲ್ಲು ತೂರಾಟ ನಡೆಸಿದ್ದರು.
'@BSYBJP ಅವರ ಮನೆ ಮೇಲಿನ ದಾಳಿಯ ಹಿಂದೆ ಬಿಜೆಪಿಯ ಯಡಿಯೂರಪ್ಪ ವಿರೋಧಿ ಬಣದ ಕೈವಾಡವಿರುವ ಸಾಧ್ಯತೆಯನ್ನು ಅಲ್ಲಗಳೆಯುವಂತಿಲ್ಲ.
— Karnataka Congress (@INCKarnataka) March 28, 2023
ದಮ್ಮು ತಾಕತ್ತಿನ ಮುಖ್ಯಮಂತ್ರಿಗಳೇ,
ಒಮ್ಮೆ @CTRavi_BJP ಹಾಗೂ @blsanthosh ಅವರನ್ನು ವಿಚಾರಣೆಗೆ ಒಳಪಡಿಸಿ, ತನಿಖೆ ನಡೆಸಿ.
ಹಾಗೂ BSYರಿಗೆ ಬಿಜೆಪಿಯವರಿಂದ ಅಪಾಯವಿದೆ, ಅವರಿಗೆ ರಕ್ಷಣೆ ಹೆಚ್ಚಿಸಬೇಕು.
BS Yediyurappas home, office attacked by protesters over reservation, BJP leader conspiracy says Congress tweet.
15-01-26 05:56 pm
HK News Desk
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
15-01-26 10:24 pm
Mangalore Correspondent
ಗೋ ಸೇವೆಗೆ ಜನಸಾಮಾನ್ಯರು ಕೊಡುಗೆ ನೀಡಲು ವೇದಿಕೆ ; ಕ...
15-01-26 10:07 pm
ದಕ್ಷಿಣ ಕನ್ನಡದ ಸರ್ಕಾರಿ ಶಾಲೆಗಳಿಗೆ ಇಸ್ರೇಲ್ ಡಿಜಿ...
15-01-26 09:04 pm
ಮನರೇಗಾ ಜಾರಿಗೆ ಒತ್ತಾಯಿಸಿ ಸುಳ್ಯದಿಂದ ಮುಲ್ಕಿಗೆ ಪಾ...
15-01-26 08:12 pm
ಜ.18ರಂದು ಮಂಗಳೂರಿನಲ್ಲಿ ಪ್ರಪ್ರಥಮ ಜಾಗತಿಕ ಬಿಲ್ಲವರ...
15-01-26 04:01 pm
15-01-26 03:01 pm
Mangalore Correspondent
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm