ಬ್ರೇಕಿಂಗ್ ನ್ಯೂಸ್
30-03-23 04:59 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.30: ಕೇಂದ್ರದ ಸಚಿವರು, ಸಂಸದರು ಎಲ್ಲರ ಸಹಕಾರದೊಂದಿಗೆ ಮತ್ತೆ ಬಿಜೆಪಿ ಅಧಿಕಾರಕ್ಕೆ ಬರೋದು ನಿಶ್ಚಿತ. ಮೀಸಲಾತಿ ಪ್ರಮಾಣ ಏರಿಸುವ ಮೂಲಕ ಅನುಕೂಲವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ತಿಳಿಸಿದ್ದಾರೆ.
ಮುಸ್ಲಿಮರಿಗೆ ನಾವು ಅನ್ಯಾಯ ಮಾಡಿಲ್ಲ. ಮುಸಲ್ಮಾನರನ್ನು 4% ಮೀಸಲಾತಿಯಿಂದ ತೆಗೆದು ews ಗೆ ಸೇರಿಸಿದ್ದೇವೆ' ಎಂದಿದ್ದಾರೆ.
ಇನ್ನು ಪಕ್ಷದಲ್ಲೇ ಟಿಕೆಟ್ಗಾಗಿ ಆಗುತ್ತಿರುವ ಭಿನ್ನಾಭಿಪ್ರಾದ ಬಗ್ಗೆ ಮಾತನಾಡಿದ ಬಿಎಸ್ವೈ, 'ಯಾವ ಪಕ್ಷ ನೂರಕ್ಕೆನೂರು ಅಧಿಕಾರಕ್ಕೆ ಬರುತ್ತೋ ಆ ಪಕ್ಷದಿಂದ ಸ್ಪರ್ಧಿಸೋಕೆ ಎಲ್ಲರೂ ಮುಂದಾಗುತ್ತಾರೆ. ಯಾರಿಗೆ ಸೀಟ್ ಸಿಗುವುದಿಲ್ಲವೋ ಅಂತಹವರು ಬಿಜೆಪಿ ಪಕ್ಷದ ಪರ ನಿಂತು ಕೆಲಸ ಮಾಡಬೇಕು. ಟಿಕೆಟ್ ನೀಡುವುದನ್ನು ಪಕ್ಷ ತೀರ್ಮಾನಿಸುತ್ತದೆ' ಎಂದಿದ್ದಾರೆ.

ಇನ್ನು ಪಕ್ಷದಲ್ಲಿ ಕೆಲವರಿಂದ ತಮ್ಮ ಮಕ್ಕಳಿಗೂ ಟಿಕೆಟ್ ನೀಡುವಂತೆ ಬೇಡಿಕೆ ಇಟ್ಟಿರುವ ವಿಚಾರವಾಗಿ ಮಾತನಾಡಿದ ಬಿಎಸ್ವೈ 'ಕೇಂದ್ರದ ನಾಯಕರ ಜೊತೆ ಮಾತನಾಡುತ್ತೇವೆ. ಅಮಿತ್ ಷಾ ಹೋದ ಕಡೆ ಎಲ್ಲೂ ಹಿನ್ನಡೆ ಆಗಿಲ್ಲ. ಕೇಂದ್ರದ ನಿರ್ಧಾರಕ್ಕೆ ನಾವೆಲ್ಲರೂ ಬದ್ಧರಾಗಿರಬೇಕು' ಎಂದಿದ್ದಾರೆ.
ಇನ್ನು ಹಲವು ಕ್ಷೇತ್ರಗಳಲ್ಲಿ ಹಾಲಿ ಶಾಸಕರ ವಿರುದ್ದ ಟಿಕೆಟ್ ಕೊಡದಂತೆ ಪ್ರತಿಭಟನೆಯ ವಿಚಾರವಾಗಿ 'ಯಾವ ಪಕ್ಷ ನೂರಕ್ಕೂ ನೂರರಷ್ಟು ಅಧಿಕಾರಕ್ಕೆ ಬರುತ್ತದೋ ಆ ಪಕ್ಷದಲ್ಲಿ ಈ ರೀತಿ ವಿರೋಧ ವ್ಯಕ್ತವಾಗೋದು ಸಹಜ. ಈಗಾಗಲೇ ಮೂರು ಸರ್ವೆ ಆಗಿದೆ. ಆದಷ್ಟು ಬೇಗ ಹೈಕಮಾಂಡ್ ನಾಯಕರು ಅಭ್ಯರ್ಥಿ ಆಯ್ಕೆ ಮಾಡ್ತಾರೆ.

ಇನ್ನು ಕೆಲ ಶಾಸಕರನ್ನು ಕಾಂಗ್ರೆಸ್ ಸೆಳೆಯುತ್ತಿದ್ದು ಇದರ ಕುರಿತಾಗಿ ಮಾತನಾಡಿದ ಬಿಎಸ್ವೈ 'ಯಾರಿಗೆ ಟಿಕೆಟ್ ಸಿಗಲ್ವೋ ಅವರು ಕೂಡ ಅಭ್ಯರ್ಥಿ ಪರವಾಗಿ ಕೆಲಸ ಮಾಡುತ್ತಾರೆ. ಕೆಲವು ಒಂದಿಬ್ಬರು ಟಿಕೆಟ್ ಸಿಗಲ್ಲ ಅಂತಾ ಬೇರೆ ಕಡೆ ಹೋಗಿರಬಹುದು. ಆದರೆ ಹಿಂದೆ ಬಿಜೆಪಿಗೆ ಬಂದ ಯಾವ ಶಾಸಕರು ಕೂಡ ಕಾಂಗ್ರೆಸ್ ಗೆ ಹೋಗಲ್ಲ. ಅವರು ಎಲ್ಲರಿಗೂ ಮೋದಿ ಮೇಲೆ ಬಹಳ ನಂಬಿಕೆ ವಿಶ್ವಾಸ ಇದೆ. ಟಿಕೆಟ್ ಆಯ್ಕೆ ಮಾನದಂಡಗಳ ಬಗ್ಗೆ ನಾನು ತೀರ್ಮಾನ ಮಾಡುವುದಿಲ್ಲ. ಎಲ್ಲವನ್ನೂ ಹೈಕಮಾಂಡ್ ನಾಯಕರು ತೀರ್ಮಾನ ಮಾಡ್ತಾರೆ' ಎಂದಿದ್ದಾರೆ.

ವರುಣಾದಲ್ಲಿ ಸಿದ್ದರಾಮಯ್ಯ ಸ್ಪರ್ಧೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ್ದು ಇದೇ ಸಂದರ್ಭ ಸಿದ್ದರಾಮಯ್ಯಗೆ ಮಾಜಿ ಸಿಎಂ ಬಿಎಸ್ವೈ ಟಾಂಗ್ ಕೊಟ್ಟಿದ್ದಾರೆ. 'ವರುಣಾದಲ್ಲಿ ವಿಜಯೇಂದ್ರ ಸ್ಪರ್ಧೆ ಬಗ್ಗೆ ಚರ್ಚೆ ನಡೀತ್ತಿದೆ. ಸಿದ್ದರಾಮಯ್ಯಗೂ ಗೊತ್ತಿದೆ ಅವರ ನೆಲ ಕುಸಿಯುತ್ತಿದೆ ಎಂದು. ಅವರ ಗೆಲುವು ಅಷ್ಟು ಸುಲಭವಲ್ಲ ಅಂತಲೂ ಅವರಿಗೆ ತಿಳಿದಿದೆ. ನಾವು ಅವರ ವಿರುದ್ಧ ಪ್ರಬಲ ಅಭ್ಯರ್ಥಿ ಹಾಕ್ತೀವಿ. ಟಫ್ ಫೈಟ್ ಅಂತೂ ಆಗುತ್ತದೆ. ವಿಜಯೇಂದ್ರ ಸ್ಪರ್ಧೆ ಹೈಕಮಾಂಡ್ ನಾಯಕರು ತೀರ್ಮಾನ ಮಾಡುತ್ತಾರೆ' ಎಂದು ಬಿಎಸ್ವೈ ಹೇಳಿದ್ದಾರೆ.
Former chief minister BS Yediyurappa, who is spearheading the BJP's election campaign in Karnataka, today hinted that his son may contest against Congress veteran Siddaramaiah.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm