ಬ್ರೇಕಿಂಗ್ ನ್ಯೂಸ್
02-04-23 06:36 pm HK News Desk ಕರ್ನಾಟಕ
ಹಾಸನ, ಏ 02: ಜಾತ್ಯಾತೀತ ಜನತಾದಳದ ನಾಯಕ ಹೆಚ್ ಡಿ ರೇವಣ್ಣ ಅವರ ಆರೋಪಗಳಿಂದ ಬೇಸತ್ತು ಹಾಸನದ ಡಿವೈಎಸ್ಪಿ ಉದಯ್ ಭಾಸ್ಕರ್ ಅವರು ವರ್ಗಾವಣೆ ಮಾಡುವಂತೆ ತಾವೇ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.
ಡಿವೈಎಸ್ಪಿ ಉದಯ್ ಭಾಸ್ಕರ್ ನಿಷ್ಪಕ್ಷಪಾತವಾಗಿ ಕೆಲಸ ಮಾಡುತ್ತಿಲ್ಲ ಎಂದು ಆರೋಪಿಸಿ ಅವರ ವಿರುದ್ಧ ಕ್ರಮಕ್ಕೆ ಹೆಚ್ಡಿ ರೇವಣ್ಣ ಒತ್ತಾಯಿಸಿದ್ದರು. ಇದೀಗ ಡಿವೈಎಸ್ಪಿ ಮನನೊಂದು ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಪತ್ರ ಬರೆದು ಸ್ವಯಂ ವರ್ಗಾವಣೆಗೆ ಕೋರಿದ್ದಾರೆ.
ನಾನು ನಿಷ್ಪಕ್ಷಪಾತ, ನೇರ ನುಡಿಯ ವ್ಯಕ್ತಿತ್ವವುಳ್ಳವನು. ರಾಜಕಾರಣಿಗಳು ನನ್ನಿಂದ ಕಾನೂನು ಬಾಹಿರ ಕ್ರಮ ಆಪೇಕ್ಷಿಸುತ್ತಿದ್ದಾರೆ. ಅವರ ಒತ್ತಾಯಗಳಿಗೆ ನಾನು ಮಣಿಯದ ಕಾರಣ ನನ್ನ ವಿರುದ್ಧ ಅನಗತ್ಯ ಆರೋಪಗಳನ್ನು ಮಾಡುತ್ತಿದ್ದಾರೆ ಎಂದು ಉದಯ್ ಭಾಸ್ಕರ್ ಪರೋಕ್ಷವಾಗಿ ಮಾಜಿ ಸಚಿವ ರೇವಣ್ಣ ವಿರುದ್ಧ ಬೇಸರ ವ್ಯಕ್ತಪಡಿಸಿದ್ದಾರೆ.
ನನ್ನ ಮೇಲೆ ಆರೋಪ ಮಾಡಿ ನನ್ನ ಮೇಲಾಧಿಕಾರಿಗಳಿಗೆ ಮಾನಸಿಕ ಒತ್ತಡಗಳನ್ನು ನೀಡುತ್ತಿದ್ದಾರೆ. ರಾಜಕಾರಣಿಗಳು ಈ ಚುನಾವಣಾ ಸಂದರ್ಭದಲ್ಲಿ ನನಗೆ ಸುಗಮವಾಗಿ ಕೆಲಸ ಮಾಡಲು ಅಡ್ಡಿಪಡಿಸಿ ಗೊಂದಲ ಸೃಷ್ಟಿಪಡಿಸುವುದು ಖಚಿತ. ಇದರಿಂದ ಮೇಲಾಧಿಕಾರಿಗಳಿಗೂ ಇರುಸುಮುರುಸು ಉಂಟಾಗುತ್ತದೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಇದೀಗ ಬೇಸರದಿಂದಲೇ ತಮ್ಮ ವರ್ಗಾವಣೆಗೆ ಬೇಡಿಕೆ ಇಟ್ಟಿರುವ ಉದಯ್ ಭಾಸ್ಕರ್, ಚುನಾವಣಾ ಪ್ರಕ್ರಿಯೆ ಮುಗಿಯುವ ತನಕ ನನ್ನನ್ನು ಹಾಸನ ಜಿಲ್ಲೆಯಿಂದ ತಮಗೆ ಸರಿ ಎನಿಸಿದ ಸ್ಥಳಕ್ಕೆ ತಾತ್ಕಾಲಿಕ ವರ್ಗಾವಣೆಗೆ ಕೋರುತ್ತೇನೆ ಎಂದು ಮೇಲಾಧಿಕಾರಿಗಳಿಗೆ ಪತ್ರ ಬರೆದಿದ್ದಾರೆ.
ಉದಯ್ ಭಾಸ್ಕರ್ ವಿರುದ್ಧ ಗಂಭೀರ ಆರೋಪ ಮಾಡಿರುವ ಎಚ್.ಡಿ.ರೇವಣ್ಣ ಅವರನ್ನು ಅಮಾನತುಗೊಳಿಸಿ ತನಿಖೆ ನಡೆಸುವಂತೆ ಒತ್ತಾಯಿಸಿದ್ದರು. ಉದಯಭಾಸ್ಕರ್ ಅವರು ಆಯಾ ಪೊಲೀಸ್ ಠಾಣೆಗಳ ರೌಡಿ ಶೀಟರ್ಗಳೊಂದಿಗೆ ನಂಟು ಹೊಂದಿದ್ದು, ನಿಷ್ಪಕ್ಷಪಾತವಾಗಿ ಕರ್ತವ್ಯ ನಿರ್ವಹಿಸುತ್ತಿಲ್ಲ ಎಂದು ಎಚ್ಡಿ ರೇವಣ್ಣ ಆರೋಪಿಸಿದ್ದರು.
Hassan DySP Uday Bhaskar frustrated with Revanna statements, requests higher officers to transfer
17-04-26 01:39 pm
HK News Staffer
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
ಆದಿಚುಂಚನಗಿರಿಯಲ್ಲಿ 80 ಕೋಟಿ ವೆಚ್ಚದ ಮಂದಿರ ಉದ್ಘಾಟ...
15-04-26 07:05 pm
17-04-26 11:27 am
HK News Staffer
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
17-04-26 03:02 pm
HK News Staffer
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
ಆಟೋದಲ್ಲಿ ಒಡವೆಗಳಿದ್ದ ಬ್ಯಾಗ್ ಬಿಟ್ಟು ಹೋಗಿದ್ದ ಮಹಿ...
13-04-26 11:39 pm
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
16-04-26 10:36 pm
HK News Staffer
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am
ಯೋಗೀಶಗೌಡ ಕೊಲೆ ಕೇಸಲ್ಲಿ ಕಾಂಗ್ರೆಸ್ ಶಾಸಕ ಅಪರಾಧಿ ;...
15-04-26 11:40 pm