ಬ್ರೇಕಿಂಗ್ ನ್ಯೂಸ್
02-04-23 06:36 pm HK News Desk ಕರ್ನಾಟಕ
ಹಾಸನ, ಏ 02: ಜಾತ್ಯಾತೀತ ಜನತಾದಳದ ನಾಯಕ ಹೆಚ್ ಡಿ ರೇವಣ್ಣ ಅವರ ಆರೋಪಗಳಿಂದ ಬೇಸತ್ತು ಹಾಸನದ ಡಿವೈಎಸ್ಪಿ ಉದಯ್ ಭಾಸ್ಕರ್ ಅವರು ವರ್ಗಾವಣೆ ಮಾಡುವಂತೆ ತಾವೇ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.
ಡಿವೈಎಸ್ಪಿ ಉದಯ್ ಭಾಸ್ಕರ್ ನಿಷ್ಪಕ್ಷಪಾತವಾಗಿ ಕೆಲಸ ಮಾಡುತ್ತಿಲ್ಲ ಎಂದು ಆರೋಪಿಸಿ ಅವರ ವಿರುದ್ಧ ಕ್ರಮಕ್ಕೆ ಹೆಚ್ಡಿ ರೇವಣ್ಣ ಒತ್ತಾಯಿಸಿದ್ದರು. ಇದೀಗ ಡಿವೈಎಸ್ಪಿ ಮನನೊಂದು ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಪತ್ರ ಬರೆದು ಸ್ವಯಂ ವರ್ಗಾವಣೆಗೆ ಕೋರಿದ್ದಾರೆ.
ನಾನು ನಿಷ್ಪಕ್ಷಪಾತ, ನೇರ ನುಡಿಯ ವ್ಯಕ್ತಿತ್ವವುಳ್ಳವನು. ರಾಜಕಾರಣಿಗಳು ನನ್ನಿಂದ ಕಾನೂನು ಬಾಹಿರ ಕ್ರಮ ಆಪೇಕ್ಷಿಸುತ್ತಿದ್ದಾರೆ. ಅವರ ಒತ್ತಾಯಗಳಿಗೆ ನಾನು ಮಣಿಯದ ಕಾರಣ ನನ್ನ ವಿರುದ್ಧ ಅನಗತ್ಯ ಆರೋಪಗಳನ್ನು ಮಾಡುತ್ತಿದ್ದಾರೆ ಎಂದು ಉದಯ್ ಭಾಸ್ಕರ್ ಪರೋಕ್ಷವಾಗಿ ಮಾಜಿ ಸಚಿವ ರೇವಣ್ಣ ವಿರುದ್ಧ ಬೇಸರ ವ್ಯಕ್ತಪಡಿಸಿದ್ದಾರೆ.
ನನ್ನ ಮೇಲೆ ಆರೋಪ ಮಾಡಿ ನನ್ನ ಮೇಲಾಧಿಕಾರಿಗಳಿಗೆ ಮಾನಸಿಕ ಒತ್ತಡಗಳನ್ನು ನೀಡುತ್ತಿದ್ದಾರೆ. ರಾಜಕಾರಣಿಗಳು ಈ ಚುನಾವಣಾ ಸಂದರ್ಭದಲ್ಲಿ ನನಗೆ ಸುಗಮವಾಗಿ ಕೆಲಸ ಮಾಡಲು ಅಡ್ಡಿಪಡಿಸಿ ಗೊಂದಲ ಸೃಷ್ಟಿಪಡಿಸುವುದು ಖಚಿತ. ಇದರಿಂದ ಮೇಲಾಧಿಕಾರಿಗಳಿಗೂ ಇರುಸುಮುರುಸು ಉಂಟಾಗುತ್ತದೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಇದೀಗ ಬೇಸರದಿಂದಲೇ ತಮ್ಮ ವರ್ಗಾವಣೆಗೆ ಬೇಡಿಕೆ ಇಟ್ಟಿರುವ ಉದಯ್ ಭಾಸ್ಕರ್, ಚುನಾವಣಾ ಪ್ರಕ್ರಿಯೆ ಮುಗಿಯುವ ತನಕ ನನ್ನನ್ನು ಹಾಸನ ಜಿಲ್ಲೆಯಿಂದ ತಮಗೆ ಸರಿ ಎನಿಸಿದ ಸ್ಥಳಕ್ಕೆ ತಾತ್ಕಾಲಿಕ ವರ್ಗಾವಣೆಗೆ ಕೋರುತ್ತೇನೆ ಎಂದು ಮೇಲಾಧಿಕಾರಿಗಳಿಗೆ ಪತ್ರ ಬರೆದಿದ್ದಾರೆ.
ಉದಯ್ ಭಾಸ್ಕರ್ ವಿರುದ್ಧ ಗಂಭೀರ ಆರೋಪ ಮಾಡಿರುವ ಎಚ್.ಡಿ.ರೇವಣ್ಣ ಅವರನ್ನು ಅಮಾನತುಗೊಳಿಸಿ ತನಿಖೆ ನಡೆಸುವಂತೆ ಒತ್ತಾಯಿಸಿದ್ದರು. ಉದಯಭಾಸ್ಕರ್ ಅವರು ಆಯಾ ಪೊಲೀಸ್ ಠಾಣೆಗಳ ರೌಡಿ ಶೀಟರ್ಗಳೊಂದಿಗೆ ನಂಟು ಹೊಂದಿದ್ದು, ನಿಷ್ಪಕ್ಷಪಾತವಾಗಿ ಕರ್ತವ್ಯ ನಿರ್ವಹಿಸುತ್ತಿಲ್ಲ ಎಂದು ಎಚ್ಡಿ ರೇವಣ್ಣ ಆರೋಪಿಸಿದ್ದರು.
Hassan DySP Uday Bhaskar frustrated with Revanna statements, requests higher officers to transfer
12-11-25 11:10 pm
Bangalore Correspondent
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
12-11-25 02:54 pm
HK News Desk
ದೆಹಲಿ ಘಟನೆ, ಆತ್ಮಹತ್ಯಾ ಬಾಂಬರ್ ಆಗಿರಲಿಲ್ಲ, ಆಕಸ್ಮ...
11-11-25 10:56 pm
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
13-11-25 01:44 pm
HK Staffer
Mangalore NMPT, Dinesh Gundu Rao, Congress, B...
12-11-25 06:56 pm
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
12-11-25 12:32 pm
Mangalore Correspondent
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm