ಬ್ರೇಕಿಂಗ್ ನ್ಯೂಸ್
02-04-23 06:36 pm HK News Desk ಕರ್ನಾಟಕ
ಹಾಸನ, ಏ 02: ಜಾತ್ಯಾತೀತ ಜನತಾದಳದ ನಾಯಕ ಹೆಚ್ ಡಿ ರೇವಣ್ಣ ಅವರ ಆರೋಪಗಳಿಂದ ಬೇಸತ್ತು ಹಾಸನದ ಡಿವೈಎಸ್ಪಿ ಉದಯ್ ಭಾಸ್ಕರ್ ಅವರು ವರ್ಗಾವಣೆ ಮಾಡುವಂತೆ ತಾವೇ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.
ಡಿವೈಎಸ್ಪಿ ಉದಯ್ ಭಾಸ್ಕರ್ ನಿಷ್ಪಕ್ಷಪಾತವಾಗಿ ಕೆಲಸ ಮಾಡುತ್ತಿಲ್ಲ ಎಂದು ಆರೋಪಿಸಿ ಅವರ ವಿರುದ್ಧ ಕ್ರಮಕ್ಕೆ ಹೆಚ್ಡಿ ರೇವಣ್ಣ ಒತ್ತಾಯಿಸಿದ್ದರು. ಇದೀಗ ಡಿವೈಎಸ್ಪಿ ಮನನೊಂದು ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಪತ್ರ ಬರೆದು ಸ್ವಯಂ ವರ್ಗಾವಣೆಗೆ ಕೋರಿದ್ದಾರೆ.
ನಾನು ನಿಷ್ಪಕ್ಷಪಾತ, ನೇರ ನುಡಿಯ ವ್ಯಕ್ತಿತ್ವವುಳ್ಳವನು. ರಾಜಕಾರಣಿಗಳು ನನ್ನಿಂದ ಕಾನೂನು ಬಾಹಿರ ಕ್ರಮ ಆಪೇಕ್ಷಿಸುತ್ತಿದ್ದಾರೆ. ಅವರ ಒತ್ತಾಯಗಳಿಗೆ ನಾನು ಮಣಿಯದ ಕಾರಣ ನನ್ನ ವಿರುದ್ಧ ಅನಗತ್ಯ ಆರೋಪಗಳನ್ನು ಮಾಡುತ್ತಿದ್ದಾರೆ ಎಂದು ಉದಯ್ ಭಾಸ್ಕರ್ ಪರೋಕ್ಷವಾಗಿ ಮಾಜಿ ಸಚಿವ ರೇವಣ್ಣ ವಿರುದ್ಧ ಬೇಸರ ವ್ಯಕ್ತಪಡಿಸಿದ್ದಾರೆ.
ನನ್ನ ಮೇಲೆ ಆರೋಪ ಮಾಡಿ ನನ್ನ ಮೇಲಾಧಿಕಾರಿಗಳಿಗೆ ಮಾನಸಿಕ ಒತ್ತಡಗಳನ್ನು ನೀಡುತ್ತಿದ್ದಾರೆ. ರಾಜಕಾರಣಿಗಳು ಈ ಚುನಾವಣಾ ಸಂದರ್ಭದಲ್ಲಿ ನನಗೆ ಸುಗಮವಾಗಿ ಕೆಲಸ ಮಾಡಲು ಅಡ್ಡಿಪಡಿಸಿ ಗೊಂದಲ ಸೃಷ್ಟಿಪಡಿಸುವುದು ಖಚಿತ. ಇದರಿಂದ ಮೇಲಾಧಿಕಾರಿಗಳಿಗೂ ಇರುಸುಮುರುಸು ಉಂಟಾಗುತ್ತದೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಇದೀಗ ಬೇಸರದಿಂದಲೇ ತಮ್ಮ ವರ್ಗಾವಣೆಗೆ ಬೇಡಿಕೆ ಇಟ್ಟಿರುವ ಉದಯ್ ಭಾಸ್ಕರ್, ಚುನಾವಣಾ ಪ್ರಕ್ರಿಯೆ ಮುಗಿಯುವ ತನಕ ನನ್ನನ್ನು ಹಾಸನ ಜಿಲ್ಲೆಯಿಂದ ತಮಗೆ ಸರಿ ಎನಿಸಿದ ಸ್ಥಳಕ್ಕೆ ತಾತ್ಕಾಲಿಕ ವರ್ಗಾವಣೆಗೆ ಕೋರುತ್ತೇನೆ ಎಂದು ಮೇಲಾಧಿಕಾರಿಗಳಿಗೆ ಪತ್ರ ಬರೆದಿದ್ದಾರೆ.
ಉದಯ್ ಭಾಸ್ಕರ್ ವಿರುದ್ಧ ಗಂಭೀರ ಆರೋಪ ಮಾಡಿರುವ ಎಚ್.ಡಿ.ರೇವಣ್ಣ ಅವರನ್ನು ಅಮಾನತುಗೊಳಿಸಿ ತನಿಖೆ ನಡೆಸುವಂತೆ ಒತ್ತಾಯಿಸಿದ್ದರು. ಉದಯಭಾಸ್ಕರ್ ಅವರು ಆಯಾ ಪೊಲೀಸ್ ಠಾಣೆಗಳ ರೌಡಿ ಶೀಟರ್ಗಳೊಂದಿಗೆ ನಂಟು ಹೊಂದಿದ್ದು, ನಿಷ್ಪಕ್ಷಪಾತವಾಗಿ ಕರ್ತವ್ಯ ನಿರ್ವಹಿಸುತ್ತಿಲ್ಲ ಎಂದು ಎಚ್ಡಿ ರೇವಣ್ಣ ಆರೋಪಿಸಿದ್ದರು.
Hassan DySP Uday Bhaskar frustrated with Revanna statements, requests higher officers to transfer
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm