ಬ್ರೇಕಿಂಗ್ ನ್ಯೂಸ್
03-04-23 03:31 pm HK News Desk ಕರ್ನಾಟಕ
ಶಿವಮೊಗ್ಗ, ಎ.3: ಕರ್ನಾಟಕ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆಯಾಗುತ್ತಿದ್ದಂತೆಯೇ ಪಕ್ಷಾಂತರ ಪರ್ವ ಜೋರಾಗಿದೆ. ಈಗಾಗಲೇ ಬಿಜೆಪಿಯ ಇಬ್ಬರು ಹಾಲಿ ವಿಧಾನಪರಿಷತ್ ಸದಸ್ಯರು ಹಾಗೂ ಓರ್ವ ಶಾಸಕ ರಾಜೀನಾಮೆ ನೀಡಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದು, ಇದರ ಬೆನ್ನಲ್ಲೇ ಇದೀಗ ಬಿಜೆಪಿಯ ಮತ್ತೊಂದು ವಿಕೆಟ್ ಪತನವಾಗಿದೆ.
ಶಿವಮೊಗ್ಗ ನಗರ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿರುವ ವಿಧಾನಪರಿಷತ್ ಸದಸ್ಯ ಆಯನೂರು ಮಂಜುನಾಥ್ ಅವರು ವಿಧಾನ ಪರಿಷತ್ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದಾರೆ.
ಶಿವಮೊಗ್ಗದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಬಾರಿ ವಿಧಾನಸಭೆಗೆ ಕಣಕ್ಕಿಳಿಯಲೇಬೇಕು ಎಂಬ ಇಚ್ಚೆಯಿಂದ ಸಾರ್ವತ್ರಿಕವಾಗಿ ಹೇಳಿದ್ದೇನೆ. ಪಕ್ಷದ ವೇದಿಕೆಯಲ್ಲೂ ನನ್ನ ವಿನಂತಿ ಮಾಡಿಕೊಂಡಿದ್ದೇನೆ. ಆದರೆ, ನನ್ನ ಪ್ರಯತ್ನಕ್ಕೆ ಪೂರಕವಾಗಿ ಬಿಜೆಪಿಯಲ್ಲಿ ಟಿಕೆಟ್ ಸಿಗಬಹುದು ಎಂಬ ಲಕ್ಷಣಗಳು ಕಂಡು ಬರುತ್ತಿಲ್ಲ. ಈ ಹಿನ್ನೆಲೆಯಲ್ಲಿ ಈ ತೀರ್ಮಾನಕ್ಕೆ ಬಂದಿದ್ದೇನೆಂದು ಹೇಳಿದ್ದಾರೆ.

ಮೊನ್ನೆ ಈಶ್ವರಪ್ಪ ಹೇಳಿದ ಮಾತನ್ನು ಗಂಭೀರವಾಗಿ ಪರಿಗಣಿಸಿ ಒಂದು ನಿರ್ಧಾರಕ್ಕೆ ಬಂದಿದ್ದೇನೆ. ಈ ಬಾರಿ ಚುನಾವಣೆಯಲ್ಲಿ ಸ್ಪರ್ಧಿಸಬೇಕು ಎಂದು ತೀರ್ಮಾನಿಸಿದ್ದೇನೆ. ಈಶ್ವರಪ್ಪ ಅವರ ಏಕವಚನ ಪ್ರಯೋಗ ಅವರ ಶಿಕ್ಷಣದ ಮಟ್ಟ ತೋರಿಸುತ್ತಿದೆ. ಈಶ್ವರಪ್ಪ ನಾಲಿಗೆ ಮೇಲೆ ಹಿಡಿತ ಇಲ್ಲ ಎಂಬುದು ರಾಜ್ಯದ ಜನರಿಗೆ ಗೊತ್ತಿದೆ. 'ನನಗೆ ಅವನ್ನು ಏನು ಲೆಕ್ಕ' ಎಂದು ಈಶ್ವರಪ್ಪ ಹೇಳಿದ್ದನ್ನು ಸವಾಲಾಗಿ ಸ್ವೀಕರಿಸುತ್ತೇನೆ. ಈ ಬಾರಿಯ ಚುನಾವಣೆಯಲ್ಲಿ ಸ್ಪರ್ಧಿಸುವುದು ಖಚಿತ ಎಂದು ತಿಳಿಸಿದ್ದಾರೆ.
ಈಶ್ವರಪ್ಪ ಅವರಿಗೆ ಇನ್ನು ಲೆಕ್ಕ ಕೊಡಲು ಆರಂಭಿಸುತ್ತೇನೆ. ಈಶ್ವರಪ್ಪರ ಚುನಾವಣೆಯ ತಂತ್ರಗಳನ್ನು ಅರಿತಿದ್ದೇನೆ. ಶಿವಮೊಗ್ಗದಲ್ಲಿ ಮೊನ್ನೆ ನಾಲ್ಕೂವರೆ ಕೋಟಿ ರೂಪಾಯಿ ಸೀರೆ ಸಿಕ್ಕಿಬಿದ್ದಿದೆ. ಒಬ್ಬ 1.50 ಕೋಟಿ ರೂ ಕೊಂಡೊಯ್ಯುವಾಗ ಸಿಕ್ಕಿಬಿದ್ದಿದ್ದಾನೆ. ಈಶ್ವರಪ್ಪ ಅವರ ಬಳಿ ಅಪಾರ ದುಡ್ಡಿದೆ. ಚುನಾವಣೆಗಾಗಿ ವಾರ್ಡ್ ಗಳಲ್ಲಿ ಹಣ ಡಿಪಾಸಿಟ್ ಇಟ್ಟಿದ್ದೀರಿ ಎಂಬುದೂ ಗೊತ್ತಿದೆ. ಆದರೆ ಈ ಸಲ ನಿಮ್ಮ ಹಣ ಲೆಕ್ಕಕ್ಕೆ ಇಲ್ಲ ಎಂಬುದನ್ನು ತೋರಿಸುತ್ತೇನೆಂದು ಸವಾಲು ಹಾಕಿದರು.
32 ವರ್ಷಗಳ ಅಧಿಕಾರಾವಧಿಯಲ್ಲಿ ಕೆ.ಎಸ್.ಈಶ್ವರಪ್ಪ ಮಾಡಿದ್ದು ಏನೂ ಇಲ್ಲ. ಅಲ್ಲೊಂದು ಕಡೆ ಇಲ್ಲೊಂದು ಕಡೆ ಪ್ರಚೋದನಾತ್ಮಕ ಭಾಷಣ ಮಾಡಿ ಗಲಭೆ ಮಾಡಿಸಿ ಚುನಾವಣೆ ಮಾಡುತ್ತೀರಿ. ಈ ಬಾರಿ ಅದು ನಡೆಯಲು ಯಾವುದೇ ಕಾರಣಕ್ಕೂ ಬಿಡುವುದಿಲ್ಲ ಎಂದರು.
ದೇವಸ್ಥಾನ, ಪ್ರಾರ್ಥನಾ ಮಂದಿರ ಮಲಿನವಾಗಬಹುದು, ಚುನಾವಣೆಯಲ್ಲಿ ಗೆಲ್ಲಬೇಕು ಎಂದು ಹೊರಟವರೇ ಇಂತಹ ಕೃತ್ಯ ಎಸಗುವ ಸಾಧ್ಯತೆ ಇದೆ. ಆದರೆ, ಯಾರೂ ಸಂಯಮ ಕಳೆದುಕೊಳ್ಳಬಾರದು. ಪೊಲೀಸರು ಮೈಮರೆಯಬಾರದು. ಚುನಾವಣೆ ವೇಳೆ ಒಂದೆರಡು ಘಟನೆಗಳು ನಡೆಯುವ ಸಾಧ್ಯತೆಯಿದ್ದು, ಈ ಬಗ್ಗೆ ಎಚ್ಚರದಿಂದಿರಬೇಕು ಎಂದು ಹೇಳಿದರು.
BJP leader Ayanur Manjunath has announced that he will resign as member of the Karnataka Legislative Council. On April 3, he told mediapersons in Shivamogga that he had sought a ticket from BJP to contest the Karnataka Assembly elections from Shivamogga. “However, there is hardly any chance of getting the ticket,” he said.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm