ಬ್ರೇಕಿಂಗ್ ನ್ಯೂಸ್
07-04-23 07:14 pm HK News Desk ಕರ್ನಾಟಕ
ಚಿಕ್ಕಮಗಳೂರು, ಎ.7: ಕಡೂರು ವಿಧಾನಸಭೆ ಕ್ಷೇತ್ರದಲ್ಲಿ ಕಾಂಗ್ರೆಸ್ ಟಿಕೆಟ್ ಕೈತಪ್ಪಿದ್ದಕ್ಕೆ ವೈ.ಎಸ್.ವಿ.ದತ್ತಾ ತೀವ್ರ ಬೇಸರಗೊಂಡಿದ್ದು ಪಕ್ಷೇತರ ನಿಲ್ಲುತ್ತಾರಾ ಎನ್ನುವ ಕುತೂಹಲ ಉಂಟಾಗಿದೆ. ಟಿಕೆಟ್ ಸಿಗದ ಬೇಸರದಲ್ಲಿ ಅಭಿಮಾನಿಗಳಿಗೆ ಪತ್ರ ಬರೆದಿದ್ದು ಇಂದು ನನ್ನ-ನಿಮ್ಮ ಆತ್ಮಗೌರವ, ಸ್ವಾಭಿಮಾನಕ್ಕೆ ಅಪಮಾನ ಎಂದು ದತ್ತ ಮೇಷ್ಟ್ರು ಬರೆದುಕೊಂಡಿದ್ದಾರೆ.
ಆತ್ಮಗೌರವ ಹಾಗೂ ಸ್ವಾಭಿಮಾನಕ್ಕಾಗಿ ಅಭಿಮಾನಿಗಳ ಸಭೆ ಕರೆಯುತ್ತೇನೆ. ಕಡೂರಿನಲ್ಲಿ ಭಾನುವಾರ (ಎ.9) ಬೆಳಗ್ಗೆ 11 ಗಂಟೆಗೆ ಸಭೆಯಲ್ಲಿ ಮಾತುಕತೆ ನಡೆಸಿ ಮುಂದಿನ ನಡೆಯನ್ನು ನಿರ್ಧರಿಸುತ್ತೇನೆ ಎಂದು ವೈ.ಎಸ್.ವಿ.ದತ್ತಾ ತಿಳಿಸಿದ್ದಾರೆ.
ನನ್ನ ಬಳಿ ಹಣ-ಜಾತಿ ಬಲ ಇಲ್ಲದಿದ್ದರೂ ದತ್ತಣ್ಣ ಎಂದು ಕರೆದಿದ್ದೀರಾ.. ಆತ್ಮೀಯತೆಯಿಂದ ತಬ್ಬಿಕೊಂಡು ಬೆಳೆಸಿದ್ದೀರಾ.. ಪ್ರಸ್ತುತ ರಾಜಕೀಯ ಸ್ಥಿತಿಯಲ್ಲಿ ಒಬ್ಬರ ಜೊತೆ ಒಬ್ಬರಿರಬೇಕು. ನನ್ನ ಜೊತೆ ನೀವು, ನಿಮ್ಮ ಜೊತೆ ನಾನಿರಬೇಕು ಎಂದು ಮಾರ್ಮಿಕ ಮಾತುಗಳನ್ನು ದರ್ತಾ ಪತ್ರದಲ್ಲಿ ಬರೆದಿದ್ದಾರೆ.
ಕಡೂರು ಮತದಾರರ ಸ್ವಾಭಿಮಾನಕ್ಕಾಗಿ ಸಭೆ ಕರೆದಿದ್ದಾರೆ ಎನ್ನಲಾಗುತ್ತಿದೆ. ಇವರ ನಿಲುವು ನೋಡಿದರೆ ಕ್ಷೇತ್ರದಲ್ಲಿ ಪಕ್ಷೇತರ ಕಣಕ್ಕಿಳಿಯುವ ಸೂಚನೆ ಇದೆ. ದತ್ತಾ ಅವರು ಕಡೂರಿನ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದರು. ಹೀಗಾಗಿ ಇತ್ತೀಚೆಗೆ ಜೆಡಿಎಸ್ ಬಿಟ್ಟು ದತ್ತಣ್ಣ ಕಾಗ್ರೆಸ್ ಸೇರಿದ್ದರು. ಕಡೂರಿನ ಕಾಂಗ್ರೆಸ್ ಟಿಕೆಟ್ ಈ ಬಾರಿ ದತ್ತ ಅವರಿಗೆ ಎಂದು ಹೇಳಲಾಗಿತ್ತು. ಅಲ್ಲದೆ, ಸಿದ್ದರಾಮಯ್ಯ ಬಣದಲ್ಲಿ ಗುರುತಿಸಿಕೊಂಡಿದ್ದರು.
ಆದರೆ ಕಾಂಗ್ರೆಸ್ ಎರಡನೇ ಪಟ್ಟಿಯಲ್ಲಿ ಕೆ.ಎಸ್. ಆನಂದ್ ಹೆಸರು ಕಡೂರು ಕ್ಷೇತ್ರಕ್ಕೆ ಅಂತಿಮ ಮಾಡಲಾಗಿದೆ. ದತ್ತ ಅವರಿಗೆ ಟಿಕೆಟ್ ಕೈ ತಪ್ಪುತ್ತಿದ್ದಂತೆ ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದ್ದು ದತ್ತ ಮನೆಯಲ್ಲಿ ಜಮಾಯಿಸಿದ್ದ ಅಭಿಮಾನಿಗಳು ಆಕ್ರೋಶ ಹೊರಹಾಕಿದ್ದಾರೆ.
ಪಕ್ಷೇತರವಾಗಿ ಚುನಾವಣೆ ಸ್ಪರ್ಧೆ ಮಾಡುವಂತೆ ದತ್ತಗೆ ಅಭಿಮಾನಿಗಳು ಸಲಹೆ ನೀಡಿದ್ದಾರೆ. ಇದಕ್ಕೆ ದತ್ತಣ್ಣ ತನ್ನ ಅಭಿಮಾನಿಗಳಿಗೆ ಎರಡು ದಿನ ಅವಕಾಶ ಕೇಳಿದ್ದಾರೆ. ಭಾನುವಾರದ ಸಭೆ ಬಳಿಕ ದತ್ತ ಅವರ ಮುಂದಿನ ತೀರ್ಮಾನ ಪ್ರಕಟವಾಗಲಿದೆ.
Congress Rebellion in Kadur, Duttannas emotional letter to fans. Congress Leader Y S V Datta who failed to get ticket to contest from Kadur constituency said that a meeting of his followers has been convened at Kadur on April 9 to discuss his future course of action. In a letter to his followers
12-11-25 11:10 pm
Bangalore Correspondent
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
12-11-25 02:54 pm
HK News Desk
ದೆಹಲಿ ಘಟನೆ, ಆತ್ಮಹತ್ಯಾ ಬಾಂಬರ್ ಆಗಿರಲಿಲ್ಲ, ಆಕಸ್ಮ...
11-11-25 10:56 pm
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
12-11-25 06:56 pm
Mangalore Correspondent
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
12-11-25 12:32 pm
Mangalore Correspondent
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm