ಬ್ರೇಕಿಂಗ್ ನ್ಯೂಸ್
            
                        26-10-20 09:29 am Headline Karnataka News Network ಕರ್ನಾಟಕ
            ಮೈಸೂರು, ಅಕ್ಟೋಬರ್ .26 : ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಕೊನೆಯ ದಿನದ ಪ್ರಮುಖ ಆಕರ್ಷಣೆ ಜಂಬೂಸವಾರಿ ಮೆರವಣಿಗೆಗೆ ಕ್ಷಣಗಣನೆ ಆರಂಭಗೊಂಡಿದೆ. ಈ ಹಿನ್ನೆಲೆಯಲ್ಲಿ ಅರಮನೆ ಆವರಣದಲ್ಲಿ ಸಂಭ್ರಮ ಮನೆ ಮಾಡಿದೆ.
ಕೊರೊನಾ ಹಿನ್ನೆಲೆಯಲ್ಲಿ ಕೇವಲ 300 ಮಂದಿಗೆ ಮಾತ್ರ ಜಂಬೂಸವಾರಿ ವೀಕ್ಷಣೆಗೆ ಅವಕಾಶ ಕಲ್ಪಿಸಲಾಗಿದ್ದು, ಸೀಮಿತ ಮಂದಿಯಷ್ಟೇ ಪಾಲ್ಗೊಳ್ಳಲಿದ್ದಾರೆ. ಪ್ರತಿ ವರ್ಷ ಲಕ್ಷಾಂತರ ಮಂದಿ ಭಾಗವಹಿಸುತ್ತಿದ್ದ ಜಂಬೂ ಸವಾರಿ ಈ ಬಾರಿ ಸೀಮಿತ ಸಂಖ್ಯೆಯ ವೀಕ್ಷಕರ ನಡುವೆ ಸಂಪನ್ನಗೊಳ್ಳಲಿದೆ.

ಮಧ್ಯಾಹ್ನ 2 ಗಂಟೆ 59 ನಿಮಿಷದಿಂದ 3 ಗಂಟೆ 20 ನಿಮಿಷದ ನಡುವಿನ ಮಕರ ಲಗ್ನದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ನಂದಿದ್ವಜಕ್ಕೆ ಪೂಜೆ ಸಲ್ಲಿಸಲಿದ್ದು ಜಂಬೂ ಸವಾರಿಗೆ ಚಾಲನೆ ನೀಡಲಿದ್ದಾರೆ. 3 ಗಂಟೆ 40 ನಿಮಿಷದಿಂದ 4 ಗಂಟೆ 15 ನಿಮಿಷದೊಳಗೆ ಸಲ್ಲುವ ಶುಭ ಕುಂಭ ಲಗ್ನದಲ್ಲಿ ಅಂಬಾರಿಗೆ ಪುಷ್ಪಾರ್ಚನೆ ಮಾಡಲಿದ್ದಾರೆ. ಆಬಳಿಕ ಅರಮನೆ ಆವರಣದಿಂದ ಜಂಬೂ ಸವಾರಿ ಆರಂಭಗೊಳ್ಳಲಿದೆ. 
 
ಅರಮನೆ ಆವರಣಕ್ಕೆ ಸಾರ್ವಜನಿಕರ ಪ್ರವೇಶ ನಿಷೇಧಿಸಲಾಗಿದ್ದು, ಅರಮನೆ ಸುತ್ತ ವ್ಯಾಪಕ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. 300 ಮಂದಿ ಪಾಲ್ಗೊಳ್ಳುವ ಗ್ಯಾಲರಿಗಳಲ್ಲಿ ಸಾಮಾಜಿಕ ಅಂತರ ಕಾಯ್ದುಕೊಂಡು ಆಸನ ವ್ಯವಸ್ಥೆ ಮಾಡಲಾಗಿದೆ. 
ಈ ಬಾರಿಯ ದಸರಾ ಮೆರವಣಿಗೆಯಲ್ಲಿ ಕೇವಲ ಎರಡು ಸ್ತಬ್ದಚಿತ್ರಗಳು, ಐದು ಜನಪದ ಕಲಾತಂಡಗಳು ಪಾಲ್ಗೊಳ್ಳಲಿವೆ.  ಕೊರೊನಾ ಜಾಗೃತಿ ಮೂಡಿಸುವ ಒಂದು ಸ್ತಬ್ದಚಿತ್ರ ಪ್ರಮುಖವಾಗಿ ಪಾಲ್ಗೊಳ್ಳುತ್ತಿದೆ.
ನೇರ ವೀಕ್ಷಣೆಗೆ ನಿರ್ಬಂಧ ಇರುವುದರಿಂದ ಜನರು ವರ್ಚುವಲ್ ನೇರ ಪ್ರಸಾರ ಹಾಗೂ ಮಾಧ್ಯಮಗಳ ಮೂಲಕ ಮೆರವಣಿಗೆ ವೀಕ್ಷಿಸಿ ಕಣ್ತುಂಬಿಕೊಳ್ಳಬೇಕಾಗಿದೆ
            
            
            Amid the covid-19 scare, the government has agreed to organise the world famous Dasara celebrations in the palace city of Mysuru in a "simple" way. Jamboo Savari, the biggest attractions of Mysuru Dasara, will be telecast live on Doordarshan Chandana and some social media platforms.
    
            
             03-11-25 05:17 pm
                        
            
                  
                Bangalore Correspondent    
            
                    
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
    
            
             03-11-25 01:13 pm
                        
            
                  
                HK News Desk    
            
                    
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
    
            
             03-11-25 10:47 pm
                        
            
                  
                Mangalore Correspondent    
            
                    
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
ಸಸಿಹಿತ್ಲು ಬೀಚ್ ನಲ್ಲಿ ನೀರಾಟಕ್ಕಿಳಿದು ಬೆಂಗಳೂರಿನ...
03-11-25 12:37 pm
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
    
            
             03-11-25 12:33 pm
                        
            
                  
                Mangalore Correspondent    
            
                    
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm