ಬ್ರೇಕಿಂಗ್ ನ್ಯೂಸ್
14-04-23 10:16 am HK News Desk ಕರ್ನಾಟಕ
ಶಿರಸಿ, ಎ.14: ನಾನು ನನ್ನ ಕಾರ್ಯಕರ್ತರಿಗೆ ಮೋಸ ಮಾಡಲು ಸಾಧ್ಯವಿಲ್ಲ. ಪುನಃ ಸ್ಪರ್ಧೆ ಮನಸ್ಸೂ ಇದೆ ಜೊತೆಗೆ ವಯಸ್ಸೂ ಇದೆ. ಹೀಗಾಗಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಸ್ಪರ್ಧೆ ಮಾಡುತ್ತಿದ್ದೇನೆ ಎಂದು ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ಕ್ಷೇತ್ರದ ಶಾಸಕ ಗೂಳಿಹಟ್ಟಿ ಶೇಖರ್ ಹೇಳಿದರು.
ಶಿರಸಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರ ಕಚೇರಿಯಲ್ಲಿ ಗುರುವಾರ ರಾತ್ರಿ ರಾಜೀನಾಮೆ ಸಲ್ಲಿಸಿ ಸುದ್ದಿಗಾರರ ಜೊತೆ ಮಾತನಾಡಿದರು. ಸ್ವತಂತ್ರವಾಗಿ ನಿಲ್ಲಬೇಕು ಎಂಬ ಮನಸ್ಸಿದೆ ಆದರೆ ಚಿಹ್ನೆ ಬೇಕಾಗಿದೆ ಎಂಬ ಮಾತೂ ಇದೆ. ರಾಜೀನಾಮೆ ಕೊಟ್ಟ ನಂತರ ಎರಡು ದಿನದಲ್ಲಿ ಬೆಂಬಲಿಗರ ಸಭೆ ನಡೆಸಿ ತೀರ್ಮಾನ ಕೈಗೊಳ್ಳುತ್ತೇನೆ ಎಂದರು. 2008ರಲ್ಲಿ, 2013ರಲ್ಲಿ ಸ್ವತಂತ್ರವಾಗಿ ನಿಂತಿದ್ದೆ.

2018ರಲ್ಲಿ ಬಿಜೆಪಿ ಸೇರಿದೆ. ಆಗ ಅಧಿಕಾರಕ್ಕೆ ಬರಲು ಕಾರಣ ಇರಬಹುದು. ಆದರೆ, ಈಗ ಟಿಕೆಟ್ ಗೆ ಸಾಮಾಜಿಕ ನ್ಯಾಯ ಎಂದು ಬಿಜೆಪಿಯವರು ಪ್ರಸ್ತಾಪ ಮಾಡಿದ್ದಾರೆ. ಯಡಿಯೂರಪ್ಪ ಅವರ ಶಿಷ್ಯ ಹಾಗೂ ಅವರ ಮಗ ವಿಜಯೇಂದ್ರರ ಗೆಳೆಯಗೆ ಟಿಕೆಟ್ ಕೊಟ್ಟಿದ್ದಾರೆ. ನಾನು ಅದರ ಬಗ್ಗೆ ಮಾತನಾಡುವದಿಲ್ಲ ಎಂದರು.
ಯಾರಿಗೆ ಟೀಕೆ ಮಾಡಿ ಏನು ಪ್ರಯೋಜನವಿಲ್ಲ. ಜೆಡಿಎಸ್ ಹಾಗೂ ಎನ್ ಪಿಪಿ, ರೆಡ್ಡಿ ಪಕ್ಷದಿಂದಲೂ ಪಕ್ಷಕ್ಕೆ ಬರುವಂತೆ ಹೇಳುತ್ತಿದ್ದಾರೆ ಎಂದರು. ಇತ್ತ ಬಿಜೆಪಿ ಅಸಮಾಧಾನಿತರಿಗೆ ಗಾಳ ಹಾಕುತ್ತಿರುವ ಕಾಂಗ್ರೆಸ್ ಹಾಗೂ ಜೆಡಿಎಸ್ ನಾಯಕರು ಪಕ್ಷಕ್ಕೆ ಸೆಳೆಯಲು ಪ್ರಯತ್ನ ನಡೆಸಿದ್ದು, ಜನಾರ್ದನ ರೆಡ್ಡಿ ಸ್ಥಾಪಿಸಿರುವ ಕೆಆರ್ಪಿಪಿ ಪಕ್ಷದಿಂದ ಸ್ಪರ್ಧಿಸುವ ಹಿನ್ನೆಲೆಯಲ್ಲಿ ಗೂಳಿಹಟ್ಟಿ ಶೇಖರ್ ರಾಜೀನಾಮೆ ನೀಡಿದ್ದಾರೆ ಎನ್ನಲಾಗಿದೆ.
BJP leader Goolihatti Shekhar submitted his resignation to Legislative Assembly Speaker Vishweshwar Hegde Kageri at the latter’s residence in Sirsi on Thursday night. Shekhar also resigned from the primary membership of the BJP after he was denied a ticket in the Karnataka Assembly elections.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm