ಬ್ರೇಕಿಂಗ್ ನ್ಯೂಸ್
14-04-23 06:50 pm Bangalore Correspondent ಕರ್ನಾಟಕ
ಬೆಂಗಳೂರು, ಎ.14: ಬಿಜೆಪಿ ಟಿಕೆಟ್ ವಂಚಿತ ಮಾಜಿ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರನ್ನು ಶುಕ್ರವಾರ ಕಾಂಗ್ರೆಸ್ ಸ್ವಾಗತಿಸಿದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು, ಮುಂದಿನ ದಿನಗಳಲ್ಲಿ ಆಡಳಿತ ಪಕ್ಷದ ಹಲವಾರು ನಾಯಕರು ವಿರೋಧ ಪಕ್ಷ ಸೇರಲಿದ್ದಾರೆ ಎಂದರು.
ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಶಿವಕುಮಾರ್, ''ಲಕ್ಷ್ಮಣ ಸವದಿ ಅವರು ಹಿರಿಯ ನಾಯಕರು, ಯಾವುದೇ ಷರತ್ತುಗಳಿಲ್ಲದೆ ಪಕ್ಷಕ್ಕೆ ಸೇರ್ಪಡೆಗೊಳ್ಳುತ್ತಿದ್ದಾರೆ ಮತ್ತು ನಮ್ಮ ಕುಟುಂಬದ ಸದಸ್ಯರಾಗುತ್ತಿದ್ದಾರೆ. ಅವರು ನಮ್ಮ ನಾಯಕತ್ವ ಮತ್ತು ಸಿದ್ಧಾಂತದೊಂದಿಗೆ ಹೊಂದಿಕೊಳ್ಳುತ್ತಾರೆ" ಎಂದರು.
ಇಂದು ಪಕ್ಷದ ಎಲ್ಲಾ ಮುಖಂಡರು ಲಕ್ಷ್ಮಣ ಸವದಿ ಅವರೊಂದಿಗೆ ಚರ್ಚೆ ನಡೆಸಿದರು. ಪಕ್ಷದ ಎಲ್ಲಾ ಸದಸ್ಯರು ಅವರಿಗೆ ಹೃತ್ಪೂರ್ವಕ ಸ್ವಾಗತವನ್ನು ನೀಡಿದರು" ಎಂದು ಡಿಕೆಶಿ ಹೇಳಿದರು.

ಲಕ್ಷ್ಮಣ ಸವದಿ ಅವರ ಜೊತೆಗೆ ಇನ್ನೂ ಹಲವು ಬಿಜೆಪಿ ಮುಖಂಡರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ. ಎಲ್ಲರನ್ನು ಪಕ್ಷಕ್ಕೆ ಒಮ್ಮತದಿಂದ ಸ್ವಾಗತಿಸುತ್ತೇವೆ. ಸವದಿ ಅವರು ಇಂದು ಸಂಜೆ 4 ಗಂಟೆಗೆ ವಿಧಾನ ಪರಿಷತ್ ಸಭಾಪತಿಯನ್ನು ಭೇಟಿ ಮಾಡಿ ರಾಜೀನಾಮೆ ಸಲ್ಲಿಸಲಿದ್ದಾರೆ.
ಬಿಜೆಪಿ ಕೊಟ್ಟ ಮಾತನ್ನು ತಪ್ಪಿದೆ. ಪಕ್ಷ ಬಿಡುತ್ತೇನೆ ಎಂದು ಹೇಳಿದಾಗಲೂ ಬಿಎಸ್ವೈ ಅವರು ನನಗೆ ಕಾಲ್ ಮಾಡಿಲ್ಲ. ನನ್ನನ್ನು ಸಂಪರ್ಕಿಸಿಲ್ಲ. ಒಂದೇ ಒಂದು ಸಮಧಾನದ ಮಾತುಗಳನ್ನು ಆಡಿಲ್ಲ. ನನಗೆ ಡಿಸಿಎಂ ಸ್ಥಾನ ನೀಡಿ ತೆಗೆದಿದ್ದು ನನಗೆ ಅವಮಾನ ಅಲ್ಲವೇ? ನಾನೇನಾದ್ರೂ ಉಪಮುಖ್ಯಮಂತ್ರಿ ಸ್ಥಾನ ಕೊಡಿ ಎಂದು ಕೇಳಿದ್ನಾ? ಅವರು ಕೊಟ್ಟಿದ್ದು ಯಾಕೆ? ವಾಪಸ್ಸು ಪಡೆದು ಯಾಕೆ? ಇದರಿಂದ ನನಗೆ ಬೇಸರ ಆಗುವುದಿಲ್ಲವೇ. ನಾನು ಅಥಣಿಯಿಂದಲೇ ಸ್ಪರ್ಧೆ ಮಾಡುತ್ತೇನೆ' ಎಂದು ಲಕ್ಷ್ಮಣ ಸವದಿ ಹೇಳಿದ್ದಾರೆ.
'ನನ್ನ ನಡೆಸಿಕೊಂಡ ರೀತಿ ಕೂಡ ನನಗೆ ಬೇಸರಿವಿದೆ. ಆ ಸಂದರ್ಭದಲ್ಲಿ ಸೋತಿದ್ದರೂ ದೊಡ್ಡ ಜವಬ್ದಾರಿಯನ್ನು ನೀಡಲಾಯಿತ್ತು. ಪಕ್ಷ ಬಿಡುತ್ತೇನೆ ಎಂದು ಹೇಳಿದಾಗಲೂ ಪಕ್ಷದ ಹಿರಿಯ ನಾಯಕರು ನನಗೆ ಕರೆ ಮಾಡಿ ಮಾತನಾಡಿಲ್ಲ. ಹೆಚ್ ನಾಗೇಶ್, ಶಂಕರ್ ಅವರಿಗೊಂದು ನ್ಯಾಯ. ನನಗೊಂದು ನ್ಯಾಯಾನಾ ಎಂದು ಲಕ್ಷ್ಮಣ ಸವದಿ ಪ್ರಶ್ನೆ ಮಾಡಿದ್ದಾರೆ. ಟಿಕೆಟ್ ಹಂಚಿಕೆಯಲ್ಲಿ ನನಗೆ ಮೋಸವಾಗಿದೆ' ಎಂದು ಸಿಡಿಗುಂಡಿನ ಮಾತುಗಳನ್ನು ಆಡಿದ್ದಾರೆ.
ಅಥಣಿ ಕ್ಷೇತ್ರದ ಟಿಕೆಟ್ ಸಿಗದ ಕಾರಣಕ್ಕೆ ಬಿಜೆಪಿ ವಿರುದ್ಧ ಅಸಮಾಧಾನಗೊಂಡಿರುವ ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಬಿಜೆಪಿಗೆ ರಾಜಿನಾಮೆ ಘೋಷಿಸಿರುವ ಬೆನ್ನಲ್ಲೇ ಬೆಳಗಾವಿಯ ಇನ್ನೋರ್ವ ಬಿಜೆಪಿ ನಾಯಕ ರಾಜೀನಾಮೆಗೆ ಮುಂದಾಗಿದ್ದಾರೆ. ಬೈಲಹೊಂಗಲ ಟಿಕೆಟ್ ಆಕಾಂಕ್ಷಿಯಾಗಿದ್ದು ಮಾಜಿ ಸಿಎಂ ಯಡಿಯೂರಪ್ಪ ಅವರ ಆಪ್ತ ಡಾ. ವಿಶ್ವನಾಥ್, ಬಿಜೆಪಿಗೆ ರಾಜೀನಾಮೆ ನೀಡಲು ತೀರ್ಮಾನಿಸಿದ್ದಾರೆ.
In a major blow to the ruling BJP ahead of the May 10 Karnakata elections, former deputy chief minister Laxman Savadi joins the Congress on Friday. His decision came after a meeting with Karnataka Congress chief D K Shivakumar, Leader of the Opposition in the Assembly Siddaramaiah and Congress general secretary and party in-charge of Karnataka, Randeep Singh Surjewala.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm