ಬ್ರೇಕಿಂಗ್ ನ್ಯೂಸ್
26-10-20 03:36 pm Bangalore Correspondent ಕರ್ನಾಟಕ
ಬೆಂಗಳೂರು, ಅಕ್ಟೋಬರ್ 26: ರೈತ ಹೋರಾಟಗಾರ, ಕಮ್ಯುನಿಸ್ಟ್ ಪಕ್ಷದ ನಾಯಕ ಮಾರುತಿ ಮಾನ್ಪಡೆ ನಿಧನಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಕಾರಣ. ತಮ್ಮ ಸ್ವಾರ್ಥಕ್ಕಾಗಿ ಭೂಸುಧಾರಣೆ ಕಾಯ್ದೆಯನ್ನು ವಿರೋಧಿಸಿ ಬೆಂಗಳೂರಿನಲ್ಲಿ ರೈತರನ್ನು ಸೇರಿಸಿದರು. ರೈತ ಮುಖಂಡ ಮಾರುತಿ ಮಾನ್ಪಡೆ ಮೂಲಕ ಈ ಕೆಲಸವನ್ನು ಮಾಡಿಸಿ, ಅವರಿಗೆ ಕೊರೊನಾ ಸೋಂಕು ತಗಲುವಂತೆ ಮಾಡಿದರು...
ಹೀಗೆಂದು ಗಂಭೀರ ಆರೋಪ ಮಾಡಿದ್ದು ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ. ಮಾಧ್ಯಮದ ಜೊತೆ ಮಾತನಾಡಿದ ಸಂದರ್ಭದಲ್ಲಿ ಮಾರುತಿ ಮಾನ್ಪಡೆ ವಿಷಯ ಪ್ರಸ್ತಾಪಿಸಿ, ಕೋವಿಡ್ ಸೋಂಕಿಗೆ ಮಾನ್ಪಡೆ ಬಲಿಯಾಗಿರುವುದಕ್ಕೆ ಡಿಕೆಶಿ ಮತ್ತು ಸಿದ್ದರಾಮಯ್ಯರೇ ಹೊಣೆ ಎಂದು ಆಕ್ರೋಶ ವ್ಯಕ್ತಪಡಿಸಿದರು.



ರೈತ ನಾಯಕ ಮಾರುತಿ ಮಾನ್ಪಡೆ ಹಳ್ಳಿಗಳಿಂದ ರೈತರನ್ನು ಕರೆದುಕೊಂಡು ಬಂದು ಹೋರಾಟದಲ್ಲಿ ಭಾಗಿಯಾದರು. ಹಾಗಾಗಿ ಅವರಿಗೆ ಕೊರೊನಾ ಸೋಂಕು ತಗಲಿತು. ರೈತ ಹೋರಾಟದ ನೆಪದಲ್ಲಿ ಕಾಂಗ್ರೆಸ್ ಕೊರೊನಾ ಹರಡುವಂತೆ ಮಾಡಿತ್ತು. ಇದರಿಂದಾಗಿ ಮಾನ್ಪಡೆ ಸಾವಿಗೆ ಕಾಂಗ್ರೆಸ್ ಮುಖಂಡರೇ ಕಾರಣ ಎಂದು ಆರೋಪಿಸಿದರು.
ಇತ್ತೀಚೆಗೆ ಕೇಂದ್ರ ಸರಕಾರದ ಭೂಸುಧಾರಣಾ ಕಾಯ್ದೆ ತಿದ್ದುಪಡಿ ಹಾಗೂ ಎಪಿಎಂಸಿ ಕಾಯ್ದೆ ತಿದ್ದುಪಡಿ ವಿರೋಧಿಸಿ ಬೆಂಗಳೂರಿನಲ್ಲಿ ನಡೆದ ರೈತ ಚಳವಳಿಯಲ್ಲಿ ಮಾರುತಿ ಮಾನ್ಪಡೆ ಭಾಗವಹಿಸಿದ್ದರು. ಸೋಂಕಿಗೆ ಒಳಗಾಗಿದ್ದ ಅವರನ್ನು ಆಂಧ್ರಪ್ರದೇಶದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಒಳಪಡಿಸಲಾಗಿತ್ತು. ಆದರೆ, ಅಲ್ಲಿ ಅವರು ಸಾವನ್ನಪ್ಪಿದ್ದರು.
Dk Shivakumar and Siddaramaiah are solely accountable for the death of Communist Leader Maruti Manpade alleges Central Minister D. V. Sadananda Gowda.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm