ಬ್ರೇಕಿಂಗ್ ನ್ಯೂಸ್
18-04-23 10:27 pm HK News Desk ಕರ್ನಾಟಕ
ಮೈಸೂರು, ಎ.18 : ಇಟಲಿಯಲ್ಲಿ ಹುಟ್ಟಿದ ಸೋನಿಯಾಗಾಂಧಿ ಬಳ್ಳಾರಿಯಲ್ಲಿ ಚುನಾವಣೆಗೆ ನಿಲ್ಲಬಹುದು, ಅಲಹಾಬಾದ್ನಲ್ಲಿ ಜನಿಸಿದ ಇಂದಿರಾ ಗಾಂಧಿ ಚಿಕ್ಕಮಗಳೂರಿಗೆ ಬರಬಹುದು. ವಿದೇಶಿ ಅಮ್ಮನಿಗೆ ದಿಲ್ಲಿಯಲ್ಲಿ ಹುಟ್ಟಿದ ರಾಹುಲ್ ಗಾಂಧಿ ಕೇರಳದ ವಯನಾಡಿಗೆ ಹೋಗಬಹುದು. ವಿ.ಸೋಮಣ್ಣ ವರುಣಾ ಕ್ಷೇತ್ರಕ್ಕೆ ಬರಬಾರದಾ?
ಹೀಗೆಂದು ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು ಸಂಸದ ಪ್ರತಾಪ್ ಸಿಂಹ ಪ್ರಶ್ನಿಸಿದ್ದಾರೆ. ಅಲ್ಲದೇ, ನೀವು ಬಾದಾಮಿಯಲ್ಲಿ ಹುಟ್ಟಿ ಗೋಲಿ ಆಡಿದ್ದೀರಲ್ಲಾ ಎಂದು ಟ್ವಿಟರ್ನಲ್ಲಿ ಟಾಂಗ್ ನೀಡಿದ್ದಾರೆ.

ಮಾಜಿ ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿ, ರಾಮನಗರ ಮೂಲದ, ಬೆಂಗಳೂರು ನಗರದಲ್ಲಿ ರಾಜಕೀಯ ಮಾಡಿಕೊಂಡಿದ್ದ ಸೋಮಣ್ಣ ಅವರನ್ನು ಬಿಜೆಪಿ ಒತ್ತಾಯಪೂರ್ವಕವಾಗಿ ವರುಣಾ ಕ್ಷೇತ್ರಕ್ಕೆ ಕರೆತಂದು ಕಣಕ್ಕಿಳಿಸಿದೆ. ಇದು ಬಿಜೆಪಿಯ ಹರಕೆಯ ಕುರಿ ಮತ್ತು ವರುಣಾದ ಮನೆ ಮಗನ ನಡುವಿನ ಚುನಾವಣೆ. ನನ್ನ ಜನ ಹಣಕ್ಕೆ ಮರುಳಾಗಿ ತಮ್ಮವರನ್ನು ಕೈಬಿಡುವವರಲ್ಲ ಎಂದು ಹೇಳಿದ್ದರು.
ಅಲ್ಲದೆ, ನಾನು ವರುಣಾ ಕ್ಷೇತ್ರದಲ್ಲಿ ಹುಟ್ಟಿ ಬೆಳೆದವ, ಇಲ್ಲಿನ ಮಣ್ಣಿನ ಮಗ. ಇವ ನಮ್ಮವ ಎಂಬ ಭಾವನೆ ಇಲ್ಲಿನ ಜನರಲ್ಲಿದೆ. ಈ ಹಿಂದೆ ವರುಣಾವನ್ನು ಪ್ರತಿನಿಧಿಸಿದಾಗೆಲ್ಲ ಕ್ಷೇತ್ರದ ಅಭಿವೃದ್ಧಿಗೆ ಶಕ್ತಿಮೀರಿ ದುಡಿದಿದ್ದೇನೆ. ನನ್ನ ಸಾಧನೆಗಳು ಇಲ್ಲಿನ ಜನರ ಬದುಕಿನಲ್ಲಿದೆ. ನನ್ನ ಗೆಲುವಿಗೆ ಇದಕ್ಕಿಂತ ಹೆಚ್ಚೇನು ಬೇಕು? ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದರು. ಇದಕ್ಕೆ ಪ್ರತಿಯಾಗಿ ಪ್ರತಾಪಸಿಂಹ ತಿರುಗೇಟು ನೀಡಿದ್ದಾರೆ.
ಸಿದ್ರಾಮಣ್ಣ, ಇಟಲಿಯಲ್ಲಿ ಹುಟ್ಟಿದ ಸೋನಿಯಾಗಾಂಧಿ ಬಳ್ಳಾರಿಯಲ್ಲಿ ಚುನಾವಣೆಗೆ ನಿಲ್ಲಬಹುದು, ಅಲಹಾಬಾದ್ನಲ್ಲಿ ಜನಿಸಿದ ಇಂದಿರಾ ಗಾಂಧಿ ಚಿಕ್ಕಮಗಳೂರಿಗೆ ಬರಬಹುದು, ವಿದೇಶಿ ಅಮ್ಮನಿಗೆ ದಿಲ್ಲಿಯಲ್ಲಿ ಹುಟ್ಟಿದ ರಾಹುಲ್ ಗಾಂಧಿ ಕೇರಳದ ವಯನಾಡಿಗೆ ಹೋಗಬಹುದು, ಸೋಮಣ್ಣ ವರುಣಾಕ್ಕೆ ಬರಬಾರದಾ? ಅದಿರಲಿ, ಬದಾಮಿಯಲ್ಲೂ ನೀವು ಹುಟ್ಟಿ ಗೋಲಿ ಆಡಿದ್ದಿರಾ? https://t.co/e7DP2HFTNR
— Pratap Simha (@mepratap) April 18, 2023
Pratap Simha slams siddaramaiah, says if Sonia Gandhi from Italy could contest in Ballari, why cant Somanna from Varuna
17-04-26 07:27 pm
HK News Staffer
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
17-04-26 11:27 am
HK News Staffer
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
17-04-26 03:02 pm
HK News Staffer
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
ಆಟೋದಲ್ಲಿ ಒಡವೆಗಳಿದ್ದ ಬ್ಯಾಗ್ ಬಿಟ್ಟು ಹೋಗಿದ್ದ ಮಹಿ...
13-04-26 11:39 pm
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
17-04-26 06:48 pm
HK News Staffer
ದೂರವಾಣಿ ಮೂಲಕ ಕರೆ, ಬಾಡಿಗೆ ಮನೆಗಳಲ್ಲಿ ಮೀಟಿಂಗ್ ;...
16-04-26 10:36 pm
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am