ಬ್ರೇಕಿಂಗ್ ನ್ಯೂಸ್
19-04-23 10:21 pm Bangalore Correspondent ಕರ್ನಾಟಕ
ಬೆಂಗಳೂರು, ಎ.19: ರಾಜ್ಯದಲ್ಲಿ ಲಿಂಗಾಯತ ಮುಖಂಡರು, ಶಾಸಕರಾಗಿದ್ದ ಪ್ರಮುಖರು ಬಿಜೆಪಿ ವಿರುದ್ಧ ಬಂಡಾಯ ಎದ್ದಿರುವುದರಿಂದ ಬಿಜೆಪಿ ಹೈಕಮಾಂಡ್ ಚಿಂತೆಗೀಡಾಗಿದೆ. ಮೊದಲಿನಿಂದಲೂ ಬಿಜೆಪಿ ಭದ್ರ ಮತಬ್ಯಾಂಕ್ ಆಗಿದ್ದ ಲಿಂಗಾಯತ ಸಮುದಾಯ ಪಕ್ಷದ ಕೈಬಿಟ್ಟು ಹೋಗುತ್ತಾ ಎನ್ನುವ ಆತಂಕದಲ್ಲಿ ನಾಯಕರು ಬೆಂಗಳೂರಿನಲ್ಲಿ ರಹಸ್ಯ ಸಭೆ ನಡೆಸಿದ್ದಾರೆ.
ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಬೆಂಗಳೂರಿನ ನಿವಾಸದಲ್ಲಿ ಬುಧವಾರ ಸಂಜೆ ತುರ್ತಾಗಿ ಸಭೆ ಕರೆಯಲಾಗಿದ್ದು ಉತ್ತರ ಕರ್ನಾಟಕ ಭಾಗದ ಲಿಂಗಾಯತ ಮುಖಂಡರು, ಬಿಜೆಪಿ ಶಾಸಕರು ಸಭೆಯಲ್ಲಿ ಭಾಗಿಯಾಗಿದ್ದಾರೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಸೂಚನೆಯ ಮೇರೆಗೆ ಯಡಿಯೂರಪ್ಪ ನಿವಾಸದಲ್ಲಿ ಸಭೆ ಕರೆಯಲಾಗಿದೆ. ಸಭೆಯಲ್ಲಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಸೇರಿ ರಾಜ್ಯ ಬಿಜೆಪಿಯ ಪ್ರಮುಖ ನಾಯಕರಲ್ಲದೆ, 40ರಷ್ಟು ಲಿಂಗಾಯತ ಮುಖಂಡರು ಭಾಗಿಯಾಗಿದ್ದಾರೆ.


ಹಿರಿಯ ನಾಯಕರಾದ ಜಗದೀಶ ಶೆಟ್ಟರ್ ಮತ್ತು ಲಕ್ಷ್ಮಣ ಸವದಿ ಪಕ್ಷ ಬಿಟ್ಟು ಹೋಗಿರುವುದರಿಂದ ಪಕ್ಷಕ್ಕೆ ದೊಡ್ಡ ಡ್ಯಾಮೇಜ್ ಆಗಿದೆ ಎನ್ನುವ ಮಾತು ಕೇಳಿಬಂದಿದೆ. ಇದರಿಂದ ಲಿಂಗಾಯತ ಸಮುದಾಯಕ್ಕೆ ತಮ್ಮನ್ನು ಬಿಜೆಪಿಯಲ್ಲಿ ಕಡೆಗಣಿಸಲಾಗುತ್ತಿದೆ ಎಂಬ ಸಂದೇಶ ಹೋಗಿದೆ ಎನ್ನಲಾಗುತ್ತಿದೆ. ಇದಲ್ಲದೆ, ಲಿಂಗಾಯತ ಸಿಎಂ ಆಗಲ್ಲ. ಬಿಜೆಪಿ ಬ್ರಾಹ್ಮಣ ಮುಖ್ಯಮಂತ್ರಿ ತರಲು ಕಸರತ್ತು ನಡೆಸುತ್ತಿದೆ ಎಂಬ ಪ್ರತಿಪಕ್ಷ ನಾಯಕರ ಆರೋಪದಿಂದಾಗಿ ಬಿಜೆಪಿ ದಿಕ್ಕೆಟ್ಟಿದೆ. ಇದೇ ಕಾರಣಕ್ಕೆ ವೀರಶೈವ- ಲಿಂಗಾಯತ ಸಮುದಾಯದ ಮುಖಂಡರ ಸಭೆಯನ್ನು ಕರೆಯಲಾಗಿದೆ. ಹಿಂದಿನಿಂದಲೂ ಪಕ್ಷದ ಕೈಹಿಡಿದಿದ್ದ ಲಿಂಗಾಯತರು ಈ ಬಾರಿ ಚುನಾವಣೆ ಹೊತ್ತಿಗೆ ಕೈಬಿಟ್ಟರೆ ಬಿಜೆಪಿಗೆ ಬಹುದೊಡ್ಡ ಹಿನ್ನಡೆಯಾಗಲಿದೆ. ಸಭೆಯಲ್ಲಿ ಯಡಿಯೂರಪ್ಪ ವಿರೋಧಿಯಾಗಿ ಗುರುತಿಸಿಕೊಂಡಿದ್ದ ಬಸವನಗೌಡ ಪಾಟೀಲ್ ಯತ್ನಾಳ್ ಕೂಡ ಭಾಗವಹಿಸಿದ್ದು ಕುತೂಹಲ ಮೂಡಿಸಿದೆ.

ಪ್ರಭಾಕರ ಕೋರೆ, ರೇಣುಕಾಚಾರ್ಯ ಆದಿಯಾಗಿ ಲಿಂಗಾಯತ ಸಂಸದರು, ಶಾಸಕರು ಸಭೆಯಲ್ಲಿ ಪಾಲ್ಗೊಂಡಿದ್ದು, ಸಭೆಯ ನೇತೃತ್ವವನ್ನು ಯಡಿಯೂರಪ್ಪ ವಹಿಸಿಕೊಂಡಿದ್ದರು. ಲಿಂಗಾಯತರ ನಾಯಕ ಎಂದೇ ಗುರುತಿಸಿಕೊಂಡಿರುವ ಯಡಿಯೂರಪ್ಪ ಅವರಿಗೆ ಹೈಕಮಾಂಡ್ ಸೂಚನೆ ಮೇರೆಗೆ ಸಭೆ ನಡೆಸಿದ್ದಾರೆ ಎನ್ನಲಾಗುತ್ತಿದೆ. ಆದರೆ ಸಭೆಯಲ್ಲಿ ಭಾಗವಹಿಸಿದ್ದ ಬಹುತೇಕ ಶಾಸಕರು ಬಿಜೆಪಿಯಿಂದ ಲಿಂಗಾಯತರ ಮುಂದಿನ ಮುಖ್ಯಮಂತ್ರಿ ಎಂದು ಘೋಷಣೆ ಮಾಡಬೇಕೆಂದು ಆಗ್ರಹ ಮಾಡಿದ್ದಾರೆ.
Former Chief Minister Jagdish Shettar and former Deputy Chief Minister Lakshmana Savadi have left the BJP and joined the Congress. In the background, Congress and BJP have come down to damage control for Lingayat votes. Congress has been constantly trying to woo the Lingayat community.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm