ಬ್ರೇಕಿಂಗ್ ನ್ಯೂಸ್
20-04-23 11:08 pm Bangalore Correspondent ಕರ್ನಾಟಕ
ಬೆಂಗಳೂರು, ಎ.20 : ಚುನಾವಣೆ ಸಮಯದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿ ಸಿಬಿಐ ತನಿಖೆಗೆ ರಾಜ್ಯ ಸರ್ಕಾರ ಅನುಮತಿ ನೀಡಿದ್ದ ಕ್ರಮವನ್ನು ಪ್ರಶ್ನಿಸಿ ಡಿಕೆ ಶಿವಕುಮಾರ್ ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ಗುರುವಾರ ವಜಾಗೊಳಿಸಿದೆ.
ಡಿಕೆ ಶಿವಕುಮಾರ್ ಮನವಿ ತಿರಸ್ಕೃತಗೊಂಡಿರುವುದರಿಂದ ಚುನಾವಣೆ ಸಂದರ್ಭದಲ್ಲಿ ಅವರಿಗೆ ಸಂಕಷ್ಟ ಎದುರಾಗಿದೆ. ಡಿಕೆ ಶಿವಕುಮಾರ್ ಅರ್ಜಿ ವಿಚಾರಣೆಯನ್ನು ಏಪ್ರಿಲ್ 17ರಂದು ಪೂರ್ಣಗೊಳಿಸಿದ್ದ ಹೈಕೋರ್ಟ್ ತೀರ್ಪನ್ನು ಕಾಯ್ದಿರಿಸಿತ್ತು. ಗುರುವಾರ ತೀರ್ಪು ಪ್ರಕಟಿಸಿರುವ ಕೋರ್ಟ್ ಡಿಕೆ ಶಿವಕುಮಾರ್ ಅರ್ಜಿಯನ್ನು ತಿರಸ್ಕರಿಸಿದೆ.

ತಮ್ಮ ವಿರುದ್ಧ ಸಿಬಿಐ ತನಿಖೆಗೆ ತಡೆಯಾಜ್ಞೆ ನೀಡುವಂತೆ ಕೋರಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ್ದ ಹೈಕೋರ್ಟ್, ಅರ್ಜಿದಾರರ ಪರ ಹಾಗೂ ಸಿಬಿಐ ಪರ ವಕೀಲರ ವಾದವನ್ನು ಆಲಿಸಿತ್ತು. ಹಲವು ಬಾರಿ ತಡೆಯಾಜ್ಞೆ ವಿಸ್ತರಿಸಿದ್ದ ಕೋರ್ಟ್ ಈಗ ತಡೆಯಾಜ್ಞೆ ವಿಸ್ತರಿಸಲು ಆಗಲ್ಲ ಎಂದು ಹೇಳಿದೆ.

ಮೊದಲ ವಿಚಾರಣೆಯಲ್ಲಿ ಫೆಬ್ರವರಿ 24ರ ವರೆಗೂ ಸಿಬಿಐ ತನಿಖೆಗೆ ಮಧ್ಯಂತರ ತಡೆ ನೀಡಿ ಹೈಕೋರ್ಟ್ ಆದೇಶಿಸಿತ್ತು. ಬಳಿಕ ಸಿಬಿಐ ತನಿಖೆಗೆ ಮಧ್ಯಂತರ ತಡೆಯಾಜ್ಞೆಯನ್ನು ಮಾರ್ಚ್ 31, ಏಪ್ರಿಲ್ 6, ಏಪ್ರಿಲ್ 13, ಏಪ್ರಿಲ್ 17ರ ವರೆಗೆ ವಿಸ್ತರಿಸಿತ್ತು. ಈಗ ಚುನಾವಣೆ ಹೊತ್ತಲ್ಲಿ ಅರ್ಜಿಯನ್ನು ವಜಾಗೊಳಿಸಿದ್ದು ಡಿಕೆಶಿಗೆ ಕಂಟಕ ಆಗುವಂತೆ ಮಾಡಿದೆ.
The Karnataka High Court on Thursday dismissed Congress leader DK Shivakumar plea challenging the Bharatiya Janata Party-led state government’s decision seeking a Central Bureau of Investigation (CBI) probe into the disproportionate assets case against him. Karnataka Congress chief Shivakumar, who had questioned the State government’s move, had filed an application saying that the Karnataka government’s order for the CBI probe was wrong.
15-01-26 05:56 pm
HK News Desk
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
15-01-26 04:01 pm
Mangalore Correspondent
ದೇವಸ್ಥಾನಕ್ಕೆ ಹೊರಟಿದ್ದ ಬಾಲಕನ ಶವ ಬಾವಿಯಲ್ಲಿ ಪತ್ತ...
14-01-26 03:15 pm
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
15-01-26 03:01 pm
Mangalore Correspondent
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm