ಬ್ರೇಕಿಂಗ್ ನ್ಯೂಸ್
25-04-23 05:08 pm HK News Desk ಕರ್ನಾಟಕ
ಮಂಡ್ಯ, ಎ.25: ತಾಲೂಕಿನಲ್ಲಿ ಮಂಗಳವಾರ ನಡೆದ ದಾರುಣ ಘಟನೆಯೊಂದರಲ್ಲಿ, ಐವರು ಮಕ್ಕಳು ನಾಲೆಯಲ್ಲಿ ಮುಳುಗಿ ಮೃತಪಟ್ಟಿದ್ದಾರೆ.
ಮಂಡ್ಯದ ಬಸರಾಳು ಹೋಬಳಿಯ ದೊಡ್ಡಕೊತ್ತಗೆರೆಯ ಗ್ರಾಮದ ವಿಶ್ವೇಶ್ವರಯ್ಯ ನಾಲೆಯಲ್ಲಿ ನೀರಿನಲ್ಲಿ ಆಟವಾಡುತ್ತಿದ್ದ ವೇಳೆ ಅವಘಡ ಸಂಭವಿಸಿದೆ. ಮೃತರನ್ನು ಹನ್ಸಿಯಾ ಬೇಗಂ, ಮಹತಾಬ್, ತಸ್ಮಿಯಾ, ಅಶ್ರಫ್ ಮತ್ತು ಅತೀಕ್ ಎಂದು ಗುರುತಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಬೆಂಗಳೂರಿನ ನೀಲಸಂದ್ರದ ನಿವಾಸಿಗಳಾದ ಮಕ್ಕಳು, ರಂಜಾನ್ ಹಬ್ಬ ಆಚರಿಸಲು ಮಂಡ್ಯದ ಹಳ್ಳಗೆರೆ ಗ್ರಾಮದ ಅಜ್ಜಿ ಮನೆಗೆ ಬಂದಿದ್ದರು. ನಾಲೆಗೆ ಆಟವಾಡಲೆಂದು ತೆರಳಿದ್ದರು. ಈ ವೇಳೆ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ.
ಮಕ್ಕಳಿಗೆ ಶಾಲೆಗೆ ರಜೆಯಿದ್ದ ಕಾರಣ ಕುಟುಂಬ ಸಮೇತ ನೆಂಟರ ಮನೆಗೆ ಬಂದಿದ್ದರು. ಈ ವೇಳೆ, ಮನೆಗೆ ಬಂದಿದ್ದ ಎಲ್ಲರೂ ಎರಡು ಕಾರಿನಲ್ಲಿ ಬಸರಾಳು ಬಳಿ ಇರುವ ಕಾವೇರಿ ನಾಲೆಗೆ ಈಜಲು ಹೋಗಿದ್ದಾರೆ. ಈಜಲೆಂದು ನೀರಿಗೆ ಧುಮುಕಿದಾಗ ಅವಘಡ ಸಂಭವಿಸಿದೆ. ಈ ಸುದ್ದಿ ಕೇಳಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
ಅಗ್ನಿಶಾಮಕ ದಳದ ಸಿಬ್ಬಂದಿ ಮೂರು ಶವಗಳನ್ನು ನಾಲೆಯಿಂದ ಹೊರಕ್ಕೆ ತೆಗೆದಿದ್ದು, ಉಳಿದ ಇಬ್ಬರು ಮಕ್ಕಳಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.
ಈ ನಡುವೆ ಬಸರಾಳು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
Five persons from Bengaluru, including two children, are believed to have drowned in VC canal at Doddakottagere village near Basaralu in Mandya taluk of Karnataka on April 25.
12-09-25 03:04 pm
HK News Desk
ಸಾಹಸಸಿಂಹ ವಿಷ್ಣುವರ್ಧನ್, ಹಿರಿಯ ನಟಿ ಬಿ.ಸರೋಜಾದೇವಿ...
11-09-25 10:11 pm
ಈದ್ ಮೆರವಣಿಗೆ : ಶಿವಮೊಗ್ಗದಲ್ಲಿ ಪಾಕಿಸ್ತಾನ್ ಜಿಂದಾ...
09-09-25 10:52 pm
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
12-09-25 11:33 am
HK News Desk
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
12-09-25 05:34 pm
Mangalore Correspondent
Mangalore Police, Sudheer Reddy: ಶಾಂತಿ ಕಾಪಾಡಲ...
12-09-25 12:58 pm
ಗುಂಡಿ ಬಿದ್ದ ಹೆದ್ದಾರಿ ತಕ್ಷಣ ದುರಸ್ತಿ ; ಸುರತ್ಕಲ್...
12-09-25 11:32 am
ಬಂಗ್ಲೆಗುಡ್ಡೆ ಕಾಡಿನಲ್ಲಿ ರಾಶಿ ರಾಶಿ ಹೆಣಗಳ ಅವಶೇಷ,...
11-09-25 10:42 pm
Mangalore, Harish Kumar: ಎರಡು ನಿಮಿಷದ ಆಜಾನ್ ನಿ...
11-09-25 09:38 pm
12-09-25 05:31 pm
Udupi Correspondent
Mangalore Police, Arrest: ಉರ್ವಾದಲ್ಲಿ ಪೊಲೀಸ್ ಕ...
11-09-25 09:13 pm
Mangalore Fake Documents, Crime, Arrest: ಸರ್ಕ...
11-09-25 08:52 pm
ಅಮೆರಿಕ ಅಧ್ಯಕ್ಷರ ಆಪ್ತ, ಬಲಪಂಥೀಯ ಕಾರ್ಯಕರ್ತ ಚಾರ್ಲ...
11-09-25 02:25 pm
Mangalore Police, Communial Case, Arrest, Cri...
08-09-25 10:34 pm